Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...