Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...