Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...