Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...