Homeಮುಖಪುಟ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...