Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...