Homeಕರ್ನಾಟಕಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು - ಡಾ. ಅಕ್ಕಯ್ ಪದ್ಮಶಾಲಿ

ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

- Advertisement -
- Advertisement -

ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ ಎಂದು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕಯ್ ಪದ್ಮಶಾಲಿ ಅವರು ಶುಕ್ರವಾರ ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

ಅವರು ಇತರ ಸಮುದಾಯದ ಜೊತೆಗೆ ಸೇರಿ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ, ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗಾಗಿ ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಂದೋಲನ’ವನ್ನು ಚಾಲನೆ ನೀಡಿ ಮಾತನಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ಕಾಲಗಳು ಉರುಳಿದಂತೆ ನಮ್ಮ ಸಾಮಾಜಿಕ ಸಂರಚನೆ ಮತ್ತು ಕುಟುಂಬ ವ್ಯವಸ್ಥೆಗಳಲ್ಲಿ ಹೊಸ ಹೊಸ ಬದಲಾವಣೆಗಳು ನಿರಂತರ ಆಗುತ್ತಲೇ ಇವೆ. ಈ ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ” ಎಂದು ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

“ಸಿಂಗಲ್ ಮದರ್ ಮಕ್ಕಳ ತಂದೆಯ ಹೆಸರನ್ನು ಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ಮಗುವಿನ ತಂದೆ ಎಂದು ಅವನು ಒಪ್ಪಿರುವುದೇ ಇಲ್ಲ. ತಂದೆ ಹೆಸರು ಇಲ್ಲ, ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಕಾರಣಕ್ಕೆ ಈ ಮಕ್ಕಳಿಗೆ ಸರ್ಕಾರಗಳಿಂದ ಸಿಗಬೇಕಾದ ಸೇವಾ ಸೌಲಭ್ಯಗಳನ್ನು ಉದಾಹರಣೆಗೆ ಆರೋಗ್ಯ, ಶೈಕ್ಷಣಿಕ ಸೇವಾ ಸೌಲಭ್ಯಗಳನ್ನು ಸಿಗದಂತಾಗಿವೆ. ಕಡ್ಡಾಯವಾಗಿ ತಂದೆಯ ಹೆಸರನ್ನು ನಮೂದಿಸಲೇಬೇಕೆಂಬ ನಿಯಮ ನಿಬಂಧನೆಗಳು ಕಗ್ಗಂಟಾಗಿ ಪರಿಣಮಿಸಿ ಈ ಮಕ್ಕಳ ಹಕ್ಕುಗಳನ್ನು ಸಮಾಧಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನಿಯಮ ನಿಬಂಧನೆಗಳು, ದಾಖಲಾತಿಗಳು ಮಕ್ಕಳ ಹಕ್ಕುಗಳಿಗೆ ಪೂರಕವಾಗಿ ಇರಬೇಕೆ ಹೊರತು ಮಾರಕವಾಗಿರಬಾರದು. ಸೌಲಭ್ಯಗಳಿಗಾಗಿ ದಾಖಲಾತಿಗಳು ಬೇಕು ಆದರೆ ದಾಖಲಾತಿಗಳಿಂದಲೇ ಸೌಲಭ್ಯಗಳು ಎಂಬಂತಾಗಬಾರದು. ಈ ಮಕ್ಕಳು ಪಡೆದುಕೊಳ್ಳುವ ಆರೋಗ್ಯ ಶಿಕ್ಷಣ ಇನ್ನಿತರ ಯಾವುದೇ ಒಂದು ಸೌಲಭ್ಯಗಳನ್ನು ಕೊಡಲು ಈ ಮಕ್ಕಳ ತಂದೆಯ ಹೆಸರು, ವಿಳಾಸ, ಫೋನ್ ನಂಬರ್, ಸಹಿ ಮತ್ತು ಭಾವಚಿತ್ರಗಳು ಕಡ್ಡಾಯವಾಗಿ ಒದಗಿಸಬೇಕೆಂಬ ನಿಬಂಧನೆ ಅಪ್ರಸ್ತುತವಾಗುತ್ತದೆ” ಎಂದು ಅವರು ಹೇಳಿದರು.

“ಈ ಸಂದರ್ಭಗಳಲ್ಲಿ ತಂದೆಯ ಹೆಸರನ್ನು ನಮೂದಿಸಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆ ಮಗುವಿನ ತಾಯಿ ಅಥವಾ ಪೋಷಕಿಯ ಆಯ್ಕೆಗೆ ಬಿಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಇರುವಂತಹ ನಿಯಮ ನಿಬಂಧನೆಗಳಲ್ಲಿ ಬದಲಾವಣೆಯನ್ನು ತಂದು ಒಂದು ಹೊಸ ನೀತಿಯನ್ನು ರೂಪಿಸಬೇಕು. ಈ ಆಂದೋಲನ ಚಾಲನೆ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.” ಎಂದು ಅಕ್ಕಯ್ ಅವರು ಹೇಳಿದರು.

ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್, ಸ್ಪೆಸ್ ಫಾರ್ ಡ್ರೀಮ್ಸ್‌ನ ವಿಕ್ಟೊರಿಯಾ ಪ್ರದೀಪ್, ಸಾಧನಾ ಮಹಿಳಾ ಸಂಘದ ಗೀತಾ, ಪ್ರಕೃತಿ ಕಲಾ ಸೇವಾ ಸಮಿತಿಯ ಆಶಾ ಹೆಚ್.ಎಲ್., ಗಾಯತ್ರಿ, ರಕ್ಷಿತಾ, ಮಾಳವಿಕ ಒಂದೆಡೆ, ಕಾವ್ಯ ಆಪ್ತಮಿತ್ರ, ಕರ್ನಾಟಕ ಅಂತರ್ಲಿಂಗಿ ಅಸೋಸಿಯೇಷನ್‌ ಅಧ್ಯಕ್ಷೆ ಕುಮಾರಿ ಅಬಿದಾ ಬೇಗಮ್, ಸನೋ ರಾಮನಗರ ಇನ್ನಿತರರು ಭಾಗವಹಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಜರಂಗದಳ ದೂರು; ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳದ ಪಾದ್ರಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

ಬಜರಂಗದಳ ಸದಸ್ಯರ ದೂರಿನ ನಂತರ ಕಾನೂನುಬಾಹಿರ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತಿರುವನಂತಪುರಂ ಮೂಲದ ಮತ್ತು ಪ್ರಸ್ತುತ ಬಿಹಾರದ ಪಾಟ್ನಾದಲ್ಲಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...