Homeಕರ್ನಾಟಕಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು - ಡಾ. ಅಕ್ಕಯ್ ಪದ್ಮಶಾಲಿ

ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

- Advertisement -
- Advertisement -

ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ ಎಂದು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕಯ್ ಪದ್ಮಶಾಲಿ ಅವರು ಶುಕ್ರವಾರ ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

ಅವರು ಇತರ ಸಮುದಾಯದ ಜೊತೆಗೆ ಸೇರಿ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ, ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗಾಗಿ ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಂದೋಲನ’ವನ್ನು ಚಾಲನೆ ನೀಡಿ ಮಾತನಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ಕಾಲಗಳು ಉರುಳಿದಂತೆ ನಮ್ಮ ಸಾಮಾಜಿಕ ಸಂರಚನೆ ಮತ್ತು ಕುಟುಂಬ ವ್ಯವಸ್ಥೆಗಳಲ್ಲಿ ಹೊಸ ಹೊಸ ಬದಲಾವಣೆಗಳು ನಿರಂತರ ಆಗುತ್ತಲೇ ಇವೆ. ಈ ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ” ಎಂದು ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

“ಸಿಂಗಲ್ ಮದರ್ ಮಕ್ಕಳ ತಂದೆಯ ಹೆಸರನ್ನು ಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ಮಗುವಿನ ತಂದೆ ಎಂದು ಅವನು ಒಪ್ಪಿರುವುದೇ ಇಲ್ಲ. ತಂದೆ ಹೆಸರು ಇಲ್ಲ, ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಕಾರಣಕ್ಕೆ ಈ ಮಕ್ಕಳಿಗೆ ಸರ್ಕಾರಗಳಿಂದ ಸಿಗಬೇಕಾದ ಸೇವಾ ಸೌಲಭ್ಯಗಳನ್ನು ಉದಾಹರಣೆಗೆ ಆರೋಗ್ಯ, ಶೈಕ್ಷಣಿಕ ಸೇವಾ ಸೌಲಭ್ಯಗಳನ್ನು ಸಿಗದಂತಾಗಿವೆ. ಕಡ್ಡಾಯವಾಗಿ ತಂದೆಯ ಹೆಸರನ್ನು ನಮೂದಿಸಲೇಬೇಕೆಂಬ ನಿಯಮ ನಿಬಂಧನೆಗಳು ಕಗ್ಗಂಟಾಗಿ ಪರಿಣಮಿಸಿ ಈ ಮಕ್ಕಳ ಹಕ್ಕುಗಳನ್ನು ಸಮಾಧಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನಿಯಮ ನಿಬಂಧನೆಗಳು, ದಾಖಲಾತಿಗಳು ಮಕ್ಕಳ ಹಕ್ಕುಗಳಿಗೆ ಪೂರಕವಾಗಿ ಇರಬೇಕೆ ಹೊರತು ಮಾರಕವಾಗಿರಬಾರದು. ಸೌಲಭ್ಯಗಳಿಗಾಗಿ ದಾಖಲಾತಿಗಳು ಬೇಕು ಆದರೆ ದಾಖಲಾತಿಗಳಿಂದಲೇ ಸೌಲಭ್ಯಗಳು ಎಂಬಂತಾಗಬಾರದು. ಈ ಮಕ್ಕಳು ಪಡೆದುಕೊಳ್ಳುವ ಆರೋಗ್ಯ ಶಿಕ್ಷಣ ಇನ್ನಿತರ ಯಾವುದೇ ಒಂದು ಸೌಲಭ್ಯಗಳನ್ನು ಕೊಡಲು ಈ ಮಕ್ಕಳ ತಂದೆಯ ಹೆಸರು, ವಿಳಾಸ, ಫೋನ್ ನಂಬರ್, ಸಹಿ ಮತ್ತು ಭಾವಚಿತ್ರಗಳು ಕಡ್ಡಾಯವಾಗಿ ಒದಗಿಸಬೇಕೆಂಬ ನಿಬಂಧನೆ ಅಪ್ರಸ್ತುತವಾಗುತ್ತದೆ” ಎಂದು ಅವರು ಹೇಳಿದರು.

“ಈ ಸಂದರ್ಭಗಳಲ್ಲಿ ತಂದೆಯ ಹೆಸರನ್ನು ನಮೂದಿಸಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆ ಮಗುವಿನ ತಾಯಿ ಅಥವಾ ಪೋಷಕಿಯ ಆಯ್ಕೆಗೆ ಬಿಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಇರುವಂತಹ ನಿಯಮ ನಿಬಂಧನೆಗಳಲ್ಲಿ ಬದಲಾವಣೆಯನ್ನು ತಂದು ಒಂದು ಹೊಸ ನೀತಿಯನ್ನು ರೂಪಿಸಬೇಕು. ಈ ಆಂದೋಲನ ಚಾಲನೆ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.” ಎಂದು ಅಕ್ಕಯ್ ಅವರು ಹೇಳಿದರು.

ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್, ಸ್ಪೆಸ್ ಫಾರ್ ಡ್ರೀಮ್ಸ್‌ನ ವಿಕ್ಟೊರಿಯಾ ಪ್ರದೀಪ್, ಸಾಧನಾ ಮಹಿಳಾ ಸಂಘದ ಗೀತಾ, ಪ್ರಕೃತಿ ಕಲಾ ಸೇವಾ ಸಮಿತಿಯ ಆಶಾ ಹೆಚ್.ಎಲ್., ಗಾಯತ್ರಿ, ರಕ್ಷಿತಾ, ಮಾಳವಿಕ ಒಂದೆಡೆ, ಕಾವ್ಯ ಆಪ್ತಮಿತ್ರ, ಕರ್ನಾಟಕ ಅಂತರ್ಲಿಂಗಿ ಅಸೋಸಿಯೇಷನ್‌ ಅಧ್ಯಕ್ಷೆ ಕುಮಾರಿ ಅಬಿದಾ ಬೇಗಮ್, ಸನೋ ರಾಮನಗರ ಇನ್ನಿತರರು ಭಾಗವಹಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...