Homeಕರ್ನಾಟಕಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು - ಡಾ. ಅಕ್ಕಯ್ ಪದ್ಮಶಾಲಿ

ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

- Advertisement -
- Advertisement -

ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ ಎಂದು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕಯ್ ಪದ್ಮಶಾಲಿ ಅವರು ಶುಕ್ರವಾರ ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

ಅವರು ಇತರ ಸಮುದಾಯದ ಜೊತೆಗೆ ಸೇರಿ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ, ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗಾಗಿ ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಂದೋಲನ’ವನ್ನು ಚಾಲನೆ ನೀಡಿ ಮಾತನಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ಕಾಲಗಳು ಉರುಳಿದಂತೆ ನಮ್ಮ ಸಾಮಾಜಿಕ ಸಂರಚನೆ ಮತ್ತು ಕುಟುಂಬ ವ್ಯವಸ್ಥೆಗಳಲ್ಲಿ ಹೊಸ ಹೊಸ ಬದಲಾವಣೆಗಳು ನಿರಂತರ ಆಗುತ್ತಲೇ ಇವೆ. ಈ ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ” ಎಂದು ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

“ಸಿಂಗಲ್ ಮದರ್ ಮಕ್ಕಳ ತಂದೆಯ ಹೆಸರನ್ನು ಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ಮಗುವಿನ ತಂದೆ ಎಂದು ಅವನು ಒಪ್ಪಿರುವುದೇ ಇಲ್ಲ. ತಂದೆ ಹೆಸರು ಇಲ್ಲ, ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಕಾರಣಕ್ಕೆ ಈ ಮಕ್ಕಳಿಗೆ ಸರ್ಕಾರಗಳಿಂದ ಸಿಗಬೇಕಾದ ಸೇವಾ ಸೌಲಭ್ಯಗಳನ್ನು ಉದಾಹರಣೆಗೆ ಆರೋಗ್ಯ, ಶೈಕ್ಷಣಿಕ ಸೇವಾ ಸೌಲಭ್ಯಗಳನ್ನು ಸಿಗದಂತಾಗಿವೆ. ಕಡ್ಡಾಯವಾಗಿ ತಂದೆಯ ಹೆಸರನ್ನು ನಮೂದಿಸಲೇಬೇಕೆಂಬ ನಿಯಮ ನಿಬಂಧನೆಗಳು ಕಗ್ಗಂಟಾಗಿ ಪರಿಣಮಿಸಿ ಈ ಮಕ್ಕಳ ಹಕ್ಕುಗಳನ್ನು ಸಮಾಧಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನಿಯಮ ನಿಬಂಧನೆಗಳು, ದಾಖಲಾತಿಗಳು ಮಕ್ಕಳ ಹಕ್ಕುಗಳಿಗೆ ಪೂರಕವಾಗಿ ಇರಬೇಕೆ ಹೊರತು ಮಾರಕವಾಗಿರಬಾರದು. ಸೌಲಭ್ಯಗಳಿಗಾಗಿ ದಾಖಲಾತಿಗಳು ಬೇಕು ಆದರೆ ದಾಖಲಾತಿಗಳಿಂದಲೇ ಸೌಲಭ್ಯಗಳು ಎಂಬಂತಾಗಬಾರದು. ಈ ಮಕ್ಕಳು ಪಡೆದುಕೊಳ್ಳುವ ಆರೋಗ್ಯ ಶಿಕ್ಷಣ ಇನ್ನಿತರ ಯಾವುದೇ ಒಂದು ಸೌಲಭ್ಯಗಳನ್ನು ಕೊಡಲು ಈ ಮಕ್ಕಳ ತಂದೆಯ ಹೆಸರು, ವಿಳಾಸ, ಫೋನ್ ನಂಬರ್, ಸಹಿ ಮತ್ತು ಭಾವಚಿತ್ರಗಳು ಕಡ್ಡಾಯವಾಗಿ ಒದಗಿಸಬೇಕೆಂಬ ನಿಬಂಧನೆ ಅಪ್ರಸ್ತುತವಾಗುತ್ತದೆ” ಎಂದು ಅವರು ಹೇಳಿದರು.

“ಈ ಸಂದರ್ಭಗಳಲ್ಲಿ ತಂದೆಯ ಹೆಸರನ್ನು ನಮೂದಿಸಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆ ಮಗುವಿನ ತಾಯಿ ಅಥವಾ ಪೋಷಕಿಯ ಆಯ್ಕೆಗೆ ಬಿಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಇರುವಂತಹ ನಿಯಮ ನಿಬಂಧನೆಗಳಲ್ಲಿ ಬದಲಾವಣೆಯನ್ನು ತಂದು ಒಂದು ಹೊಸ ನೀತಿಯನ್ನು ರೂಪಿಸಬೇಕು. ಈ ಆಂದೋಲನ ಚಾಲನೆ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.” ಎಂದು ಅಕ್ಕಯ್ ಅವರು ಹೇಳಿದರು.

ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್, ಸ್ಪೆಸ್ ಫಾರ್ ಡ್ರೀಮ್ಸ್‌ನ ವಿಕ್ಟೊರಿಯಾ ಪ್ರದೀಪ್, ಸಾಧನಾ ಮಹಿಳಾ ಸಂಘದ ಗೀತಾ, ಪ್ರಕೃತಿ ಕಲಾ ಸೇವಾ ಸಮಿತಿಯ ಆಶಾ ಹೆಚ್.ಎಲ್., ಗಾಯತ್ರಿ, ರಕ್ಷಿತಾ, ಮಾಳವಿಕ ಒಂದೆಡೆ, ಕಾವ್ಯ ಆಪ್ತಮಿತ್ರ, ಕರ್ನಾಟಕ ಅಂತರ್ಲಿಂಗಿ ಅಸೋಸಿಯೇಷನ್‌ ಅಧ್ಯಕ್ಷೆ ಕುಮಾರಿ ಅಬಿದಾ ಬೇಗಮ್, ಸನೋ ರಾಮನಗರ ಇನ್ನಿತರರು ಭಾಗವಹಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...