Homeಅಂಕಣಗಳುಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಪರಿಸರ-ವಿಜ್ಞಾನದ ಸಂಗತಿಗಳನ್ನು ಬೆರೆಸಿ ಕಥೆಗಳನ್ನು ಬರೆಯುವ ಜನಪ್ರಿಯ ಕಾದಂಬರಿಕಾರ ಗಣೇಶಯ್ಯನವರ ಪುಸ್ತಕಗಳ ಬಿಡುಗಡೆಯಲ್ಲಿ ಮತ್ತೋರ್ವ ಜನಪ್ರಿಯ ಕಥೆಗಾರ ಜೋಗಿ (ಗಿರೀಶ್ ರಾವ್) ಆಡಿದ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ’ಸಾಹಿತ್ಯ ಸಮ್ಮೇಳನದಂತಹ ವೇದಿಕೆಗಳಲ್ಲಿ ಜಾತಿ ಪ್ರಾತಿನಿಧ್ಯದ ಪ್ರಶ್ನೆ ವ್ಯರ್ಥ ವಾಗ್ವಾದ. ಸಾಹಿತ್ಯದಲ್ಲಿ ನಮ್ಮ ಜಾತಿಯವರು ಎಷ್ಟಿದ್ದೀವಿ ಅಂತ ನೋಡ್ತೀವಿ; ಜ್ಞಾನ ನೋಡಲ್ಲ. ಮೊದಲಿದು ರಾಜಕಾರಣದಲ್ಲಿತ್ತು. ಅಲ್ಲಿದ್ದ ಜಾತಿವಾರು ವಿಂಗಡಣೆ ಈಗ ರಾಜಕೀಯಕ್ಕೆ ಬಂದುಬಿಟ್ಟಿದೆ. ಜಾತಿ ನೆಲೆಯಿಂದ ನೋಡುವುದು ಸುಳ್ಳು ವಾಗ್ವಾದಗಳನ್ನು ಹುಟ್ಟುಹಾಕುತ್ತೆ. ಈ ವಾಗ್ವಾದಗಳಲ್ಲಿ ಹುರುಳಿರುವುದಿಲ್ಲ. ಅದರಿಂದ ನಮಗೇನೂ ಸಿಕ್ಕುವುದಿಲ್ಲ. ಕೃತಿಯ ಕಾರಣಕ್ಕೆ ಯೋಗ್ಯತೆಯನ್ನು ಅಳೆದು ನ್ಯಾಯ ಸಲ್ಲಿಸಬೇಕು. ಆಗ ಯೋಚಿಸುವವನ ಬುದ್ಧಿಶಕ್ತಿಗೆ ಕೆಲಸ ಕೊಟ್ಟಂತೆ ಆಗುತ್ತದೆ’ ಹೀಗೆಲ್ಲಾ ಮಾತಾಡ್ತಾ ಪ್ರಾತಿನಿಧ್ಯದ ಪ್ರಶ್ನೆಗಳು ಆಳದ ಚಿಂತನೆಗಳಲ್ಲ ಬದಲಾಗಿ ಮೇಲ್ಮಟ್ಟದ ಚಿಂತನೆಗಳು ಎಂದು ಹೀಗಳೆದಿದ್ದಾರೆ. ಇಡೀ ವಿಶ್ವ ಪ್ರಾತಿನಿಧ್ಯದ ಪ್ರಶ್ನೆಗಳನ್ನು ಎತ್ತಿಕೊಂಡು ಚರ್ಚಿಸುತ್ತಿರುವಾಗ, ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಪ್ರಾತಿನಿಧ್ಯದ ಸಮಸ್ಯೆಗಳನ್ನು ಸರಿಪಡಿಸಲು ಅಧ್ಯಯನಗಳನ್ನು ನಡೆಸುತ್ತಿರುವಾಗ, ಕರ್ನಾಟಕದಲ್ಲಿ ಜೋಗಿಯಂತಹ ಜನಪ್ರಿಯ ಲೇಖಕ-ಪತ್ರಕರ್ತರಿಗೆ ಇದು ವ್ಯರ್ಥ ವಾಗ್ವಾದದಂತೆ ಕಾಣುವುದು ಏಕೆ? ಪ್ರಿವಿಲೆಜ್ ಸಮುದಾಯದಿಂದ ಬಂದಂತಹ ಇಂತಹ ಬರಹಗಾರರು ಸಮಾಜದ ಸಮಸ್ಯೆಗಳಿಗೆ ಬೆನ್ನುತಿರುಗಿಸಿ ತಮ್ಮದೇ ಲೋಕದಲ್ಲಿ ಮುಳುಗಿರುವ ಸಂಗತಿ ಮಾತ್ರವೇ ಇದು?

ವಿಜ್ಞಾನ ಮತ್ತು ತಂತ್ರಜ್ಞಾನದ ಅಧ್ಯಯನ ಮತ್ತು ವರದಿಗಳನ್ನು ಪ್ರಕಟಿಸುವ ಬ್ರಿಟಿಷ್ ಮೂಲದ ’ನೇಚರ್’ ಜರ್ನಲ್ ಇತ್ತೀಚೆಗೆ “ಹೇಗೆ ಭಾರತೀಯ ಜಾತಿ ವ್ಯವಸ್ಥೆ ವಿಜ್ಞಾನದಲ್ಲಿ ವೈವಿಧ್ಯತೆಯನ್ನು ನಿರ್ಬಂಧಿಸುತ್ತದೆ- ಆರು ಚಾರ್ಟ್‌ಗಳಲ್ಲಿ” ಎಂಬ ಅಧ್ಯಯನಪೂರ್ಣ ಬರಹವನ್ನು ಪ್ರಕಟಿಸಿತು. ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಪ್ರಾತಿನಿಧ್ಯದಲ್ಲಿ ಇರುವ ಕೊರತೆಯನ್ನು ಅಂಕಿಅಂಶಗಳ ಮೂಲಕ ಬಿಚ್ಚಿಟ್ಟಿತು. ಪ್ರೊಫೆಸರ್‌ಗಳು ಮತ್ತು ವಿಜ್ಞಾನಿಗಳ ಹುದ್ದೆಗಳಲ್ಲಂತೂ ದಲಿತ, ಆದಿವಾಸಿ ಮತ್ತು ಹಿಂದುಳಿದವರ ಸಂಖ್ಯೆ 2%-5% ಮಾತ್ರ. ಈ ಪ್ರಾತಿನಿಧ್ಯದ ಕೊರತೆಯಿಂದ ಈ ದೇಶದ ವಿಜ್ಞಾನ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ. ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವುದೇ ದೊಡ್ಡದಾದ ಅಥವಾ ಮನುಕುಲವನ್ನು ಬದಲಾಯಿಸಿದ ಬೆಳವಣಿಗೆ ಈ ದೇಶದ ವಿಜ್ಞಾನ ಸಂಸ್ಥೆಗಳಿಂದ ಹೊರಬಂದಿದ್ದು ಇಲ್ಲವೇಇಲ್ಲವೆನ್ನುವಷ್ಟು ವಿರಳ. ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ಶಾಸ್ತ್ರ ವಿಭಾಗದಲ್ಲಿ ಆಯಾ ವರ್ಷ ನಡೆಯುವ ಬಹುಮುಖ್ಯ ಸಂಶೋಧನೆಗಳಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೈದವರಿಗೆ ಈ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ದೊರಕಿರುವುದನ್ನು ಎಣಿಸಲು ಬೆರೆಳೆಣಿಕೆಯ ಅಗತ್ಯವೂ ಇಲ್ಲ. ವಿವಿಧ ಜ್ಞಾನಕ್ಷೇತ್ರಗಳಲ್ಲಿ ಪರಿಣಿತರಾಗಿದ್ದ ಸಮುದಾಯಗಳನ್ನು ಕಡೆಗಣಿಸಿ ಮುಂದುವರಿದ ವಿಜ್ಞಾನ ಕ್ಷೇತ್ರದ ಬಾಳು ಇದು. ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಪಶ್ಚಿಮ ದೇಶಗಳಿಂದ ಸಿಕ್ಕುವ ಕೆಲಸಗಳಿಗೆ ಬಾಡಿಶಾಪಿಂಗ್ ಮಾಡುವ ಸಂಸ್ಥೆಗಳನ್ನು ಇಲ್ಲಿ ಕಟ್ಟಲಾಗಿದೆಯೇ ಹೊರತು, ಇಂಡಿಜೀನಸ್ ಎನ್ನುವ ತಂತ್ರಜ್ಞಾನ ಭಾರತದಿಂದ ಬೆಳೆದುಬಂದಿದೆಯೇ? ಇಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ವಿಜ್ಞಾನ ಕ್ಷೇತ್ರದಲ್ಲಿಯೂ ಜಾತಿ ಸಮುದಾಯಗಳ ಪ್ರಾತಿನಿಧ್ಯ ಏಕೆ ಬೇಕು? ಜ್ಞಾನವನ್ನು ಹುಡುಕೋಣ ಬನ್ನಿ ಎಂದು ಬೋಧನೆ ನೀಡುವ ಜೋಗಿಗಳ ಸಂಖ್ಯೆ ಇಲ್ಲಿಯೂ ಕಡಿಮೆಯೇನಿಲ್ಲ!

ಭಾರತದ ಮತ್ತು ಕರ್ನಾಟಕದ ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ. ಮಾಧ್ಯಮ ಕ್ಷೇತ್ರಗಳಲ್ಲಿ ಸಂಪಾದಕರು ಯಾವ ಸಮುದಾಯದಿಂದ ಬಂದವರು ಎಂದು ಹುಡುಕುತ್ತಾ ಹೋದರೆ 90%ಗಿಂತಲೂ ಹೆಚ್ಚು ಜನ 3% ಜನಸಂಖ್ಯೆಯ ಸಮುದಾಯಕ್ಕೆ ಸೇರಿದವರು ಎಂಬುದು ಅಚ್ಚರಿಯಾಗೇನೂ ಉಳಿದಿಲ್ಲ. ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರಗಳು ಒಂದಕ್ಕೊಂದು ಬೆಸೆದುಕೊಂಡಿರುವಂತಹವು. ಮಾಧ್ಯಮ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಸಮುದಾಯದ ವ್ಯಕ್ತಿಗಳಿಂದ ಸಾಹಿತ್ಯ ಕ್ಷೇತ್ರದ ಅದೇ ಸಮುದಾಯದ ವ್ಯಕ್ತಿಗಳು ವಿಜೃಂಭಿಸುವುದು ಅಲಿಖಿತ ಒಪ್ಪಂದ. ಹೀಗೆ ಕರ್ನಾಟಕದಲ್ಲಿಯೂ ಒಂದೇ ಸಮುದಾಯದ ಹೆಚ್ಚು ಸಾಹಿತಿಗಳು ಪಾರಮ್ಯ ಗಳಿಸಿದರು. ದೇವರಾಜ ಅರಸರ ಕಾಲಘಟ್ಟದಲ್ಲಿ ಆದ ರಾಜಕೀಯ ಬೆಳವಣಿಗೆ ಮಾತ್ರ ಸಾಹಿತ್ಯದಲ್ಲಿ ದಲಿತ ಮತ್ತು ಶೂದ್ರ ಸಂವೇದನೆಗೆ ಸ್ವಲ್ಪ ಅವಕಾಶ ಕೊಟ್ಟಿತು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಲಂಕೇಶ್, ತೇಜಸ್ವಿ, ಚಂಪಾ ಮುಂತಾದ ದಲಿತ ಹಾಗೂ ಶೂದ್ರ ಸಾಹಿತಿಗಳಿಂದ (ಕುವೆಂಪು ಇವರೆಲ್ಲರಿಗೂ ಪೂರ್ವದಲ್ಲಿ ಇಂತಹ ಸಂವೇದನೆಗೆ ಕಾರಣರಾಗಿದ್ದರು) ಕನ್ನಡ ಸಾಹಿತ್ಯ ವೈವಿಧ್ಯಮಯವೂ, ಜನಪರವೂ ಆಗಿದ್ದು ಇತಿಹಾಸ. ಈ ಇತಿಹಾಸದ ಬಳವಳಿ ಎಂಬಂತೆ ಇಂದಿನ ಯುವಜನತೆ ಎಲ್ಲ ಕ್ಷೇತ್ರದಲ್ಲಿಯೂ ಎಲ್ಲ ಸಮುದಾಯಗಳಿಗೂ ಸರಿಯಾದ ಪ್ರಾತಿನಿಧ್ಯದ ಬೇಡಿಕೆಯಿಡುತ್ತಿದೆ. ಇದು ಹಲವರಿಗೆ ನುಂಗಲಾರದ ತುತ್ತಾಗಿದೆ.

ಇಂದು ರಾಜಕೀಯವೂ ಬಹುಸಂಖ್ಯಾತ ಪ್ರಭುತ್ವದ ಸುಪರ್ದಿಗೆ ಹೊರಳಿರುವಾಗ, ಪ್ರತಿಗಾಮಿ ಸಾಹಿತಿಗಳು ಮತ್ತೆ ತಮ್ಮ ದನಿಯನ್ನು ಜೋರುಮಾಡುತ್ತಿದ್ದಾರೆ. ಇದು ಈ ಸಾಹಿತಿಗಳ ಅಜ್ಞಾನದ ಪ್ರದರ್ಶನ ಮಾತ್ರವಾಗಿರದೆ, ಇಲ್ಲಿಯವರೆಗೆ ಸಾಧಿಸಲಾಗಿರುವ ತುಸು ಪ್ರಗತಿಗೂ ಗೆದ್ದಲು ಹಿಡಿಸುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ್ಯ ಮತ್ತು ಪ್ರಾತಿನಿಧ್ಯ ಎಂಬ ಐಡಿಯಾಗಳ ನಡುವಿನ ಸಂಘರ್ಷ ದಿನೇದಿನೇ ತೀವ್ರವಾಗುತ್ತಿದೆ. ಪ್ರಗತಿಪರವಾದ ಪ್ರಾತಿನಿಧ್ಯದ ಐಡಿಯಾದ ಕೂಗು ಬ್ರಾಹ್ಮಣ್ಯದ ಪ್ರತಿಗಾಮಿಗಳಿಗೆ ಕೇಳಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...