Homeಅಂಕಣಗಳುಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಪರಿಸರ-ವಿಜ್ಞಾನದ ಸಂಗತಿಗಳನ್ನು ಬೆರೆಸಿ ಕಥೆಗಳನ್ನು ಬರೆಯುವ ಜನಪ್ರಿಯ ಕಾದಂಬರಿಕಾರ ಗಣೇಶಯ್ಯನವರ ಪುಸ್ತಕಗಳ ಬಿಡುಗಡೆಯಲ್ಲಿ ಮತ್ತೋರ್ವ ಜನಪ್ರಿಯ ಕಥೆಗಾರ ಜೋಗಿ (ಗಿರೀಶ್ ರಾವ್) ಆಡಿದ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ’ಸಾಹಿತ್ಯ ಸಮ್ಮೇಳನದಂತಹ ವೇದಿಕೆಗಳಲ್ಲಿ ಜಾತಿ ಪ್ರಾತಿನಿಧ್ಯದ ಪ್ರಶ್ನೆ ವ್ಯರ್ಥ ವಾಗ್ವಾದ. ಸಾಹಿತ್ಯದಲ್ಲಿ ನಮ್ಮ ಜಾತಿಯವರು ಎಷ್ಟಿದ್ದೀವಿ ಅಂತ ನೋಡ್ತೀವಿ; ಜ್ಞಾನ ನೋಡಲ್ಲ. ಮೊದಲಿದು ರಾಜಕಾರಣದಲ್ಲಿತ್ತು. ಅಲ್ಲಿದ್ದ ಜಾತಿವಾರು ವಿಂಗಡಣೆ ಈಗ ರಾಜಕೀಯಕ್ಕೆ ಬಂದುಬಿಟ್ಟಿದೆ. ಜಾತಿ ನೆಲೆಯಿಂದ ನೋಡುವುದು ಸುಳ್ಳು ವಾಗ್ವಾದಗಳನ್ನು ಹುಟ್ಟುಹಾಕುತ್ತೆ. ಈ ವಾಗ್ವಾದಗಳಲ್ಲಿ ಹುರುಳಿರುವುದಿಲ್ಲ. ಅದರಿಂದ ನಮಗೇನೂ ಸಿಕ್ಕುವುದಿಲ್ಲ. ಕೃತಿಯ ಕಾರಣಕ್ಕೆ ಯೋಗ್ಯತೆಯನ್ನು ಅಳೆದು ನ್ಯಾಯ ಸಲ್ಲಿಸಬೇಕು. ಆಗ ಯೋಚಿಸುವವನ ಬುದ್ಧಿಶಕ್ತಿಗೆ ಕೆಲಸ ಕೊಟ್ಟಂತೆ ಆಗುತ್ತದೆ’ ಹೀಗೆಲ್ಲಾ ಮಾತಾಡ್ತಾ ಪ್ರಾತಿನಿಧ್ಯದ ಪ್ರಶ್ನೆಗಳು ಆಳದ ಚಿಂತನೆಗಳಲ್ಲ ಬದಲಾಗಿ ಮೇಲ್ಮಟ್ಟದ ಚಿಂತನೆಗಳು ಎಂದು ಹೀಗಳೆದಿದ್ದಾರೆ. ಇಡೀ ವಿಶ್ವ ಪ್ರಾತಿನಿಧ್ಯದ ಪ್ರಶ್ನೆಗಳನ್ನು ಎತ್ತಿಕೊಂಡು ಚರ್ಚಿಸುತ್ತಿರುವಾಗ, ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಪ್ರಾತಿನಿಧ್ಯದ ಸಮಸ್ಯೆಗಳನ್ನು ಸರಿಪಡಿಸಲು ಅಧ್ಯಯನಗಳನ್ನು ನಡೆಸುತ್ತಿರುವಾಗ, ಕರ್ನಾಟಕದಲ್ಲಿ ಜೋಗಿಯಂತಹ ಜನಪ್ರಿಯ ಲೇಖಕ-ಪತ್ರಕರ್ತರಿಗೆ ಇದು ವ್ಯರ್ಥ ವಾಗ್ವಾದದಂತೆ ಕಾಣುವುದು ಏಕೆ? ಪ್ರಿವಿಲೆಜ್ ಸಮುದಾಯದಿಂದ ಬಂದಂತಹ ಇಂತಹ ಬರಹಗಾರರು ಸಮಾಜದ ಸಮಸ್ಯೆಗಳಿಗೆ ಬೆನ್ನುತಿರುಗಿಸಿ ತಮ್ಮದೇ ಲೋಕದಲ್ಲಿ ಮುಳುಗಿರುವ ಸಂಗತಿ ಮಾತ್ರವೇ ಇದು?

ವಿಜ್ಞಾನ ಮತ್ತು ತಂತ್ರಜ್ಞಾನದ ಅಧ್ಯಯನ ಮತ್ತು ವರದಿಗಳನ್ನು ಪ್ರಕಟಿಸುವ ಬ್ರಿಟಿಷ್ ಮೂಲದ ’ನೇಚರ್’ ಜರ್ನಲ್ ಇತ್ತೀಚೆಗೆ “ಹೇಗೆ ಭಾರತೀಯ ಜಾತಿ ವ್ಯವಸ್ಥೆ ವಿಜ್ಞಾನದಲ್ಲಿ ವೈವಿಧ್ಯತೆಯನ್ನು ನಿರ್ಬಂಧಿಸುತ್ತದೆ- ಆರು ಚಾರ್ಟ್‌ಗಳಲ್ಲಿ” ಎಂಬ ಅಧ್ಯಯನಪೂರ್ಣ ಬರಹವನ್ನು ಪ್ರಕಟಿಸಿತು. ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಪ್ರಾತಿನಿಧ್ಯದಲ್ಲಿ ಇರುವ ಕೊರತೆಯನ್ನು ಅಂಕಿಅಂಶಗಳ ಮೂಲಕ ಬಿಚ್ಚಿಟ್ಟಿತು. ಪ್ರೊಫೆಸರ್‌ಗಳು ಮತ್ತು ವಿಜ್ಞಾನಿಗಳ ಹುದ್ದೆಗಳಲ್ಲಂತೂ ದಲಿತ, ಆದಿವಾಸಿ ಮತ್ತು ಹಿಂದುಳಿದವರ ಸಂಖ್ಯೆ 2%-5% ಮಾತ್ರ. ಈ ಪ್ರಾತಿನಿಧ್ಯದ ಕೊರತೆಯಿಂದ ಈ ದೇಶದ ವಿಜ್ಞಾನ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ. ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವುದೇ ದೊಡ್ಡದಾದ ಅಥವಾ ಮನುಕುಲವನ್ನು ಬದಲಾಯಿಸಿದ ಬೆಳವಣಿಗೆ ಈ ದೇಶದ ವಿಜ್ಞಾನ ಸಂಸ್ಥೆಗಳಿಂದ ಹೊರಬಂದಿದ್ದು ಇಲ್ಲವೇಇಲ್ಲವೆನ್ನುವಷ್ಟು ವಿರಳ. ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ಶಾಸ್ತ್ರ ವಿಭಾಗದಲ್ಲಿ ಆಯಾ ವರ್ಷ ನಡೆಯುವ ಬಹುಮುಖ್ಯ ಸಂಶೋಧನೆಗಳಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೈದವರಿಗೆ ಈ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ದೊರಕಿರುವುದನ್ನು ಎಣಿಸಲು ಬೆರೆಳೆಣಿಕೆಯ ಅಗತ್ಯವೂ ಇಲ್ಲ. ವಿವಿಧ ಜ್ಞಾನಕ್ಷೇತ್ರಗಳಲ್ಲಿ ಪರಿಣಿತರಾಗಿದ್ದ ಸಮುದಾಯಗಳನ್ನು ಕಡೆಗಣಿಸಿ ಮುಂದುವರಿದ ವಿಜ್ಞಾನ ಕ್ಷೇತ್ರದ ಬಾಳು ಇದು. ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಪಶ್ಚಿಮ ದೇಶಗಳಿಂದ ಸಿಕ್ಕುವ ಕೆಲಸಗಳಿಗೆ ಬಾಡಿಶಾಪಿಂಗ್ ಮಾಡುವ ಸಂಸ್ಥೆಗಳನ್ನು ಇಲ್ಲಿ ಕಟ್ಟಲಾಗಿದೆಯೇ ಹೊರತು, ಇಂಡಿಜೀನಸ್ ಎನ್ನುವ ತಂತ್ರಜ್ಞಾನ ಭಾರತದಿಂದ ಬೆಳೆದುಬಂದಿದೆಯೇ? ಇಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ವಿಜ್ಞಾನ ಕ್ಷೇತ್ರದಲ್ಲಿಯೂ ಜಾತಿ ಸಮುದಾಯಗಳ ಪ್ರಾತಿನಿಧ್ಯ ಏಕೆ ಬೇಕು? ಜ್ಞಾನವನ್ನು ಹುಡುಕೋಣ ಬನ್ನಿ ಎಂದು ಬೋಧನೆ ನೀಡುವ ಜೋಗಿಗಳ ಸಂಖ್ಯೆ ಇಲ್ಲಿಯೂ ಕಡಿಮೆಯೇನಿಲ್ಲ!

ಭಾರತದ ಮತ್ತು ಕರ್ನಾಟಕದ ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ. ಮಾಧ್ಯಮ ಕ್ಷೇತ್ರಗಳಲ್ಲಿ ಸಂಪಾದಕರು ಯಾವ ಸಮುದಾಯದಿಂದ ಬಂದವರು ಎಂದು ಹುಡುಕುತ್ತಾ ಹೋದರೆ 90%ಗಿಂತಲೂ ಹೆಚ್ಚು ಜನ 3% ಜನಸಂಖ್ಯೆಯ ಸಮುದಾಯಕ್ಕೆ ಸೇರಿದವರು ಎಂಬುದು ಅಚ್ಚರಿಯಾಗೇನೂ ಉಳಿದಿಲ್ಲ. ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರಗಳು ಒಂದಕ್ಕೊಂದು ಬೆಸೆದುಕೊಂಡಿರುವಂತಹವು. ಮಾಧ್ಯಮ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಸಮುದಾಯದ ವ್ಯಕ್ತಿಗಳಿಂದ ಸಾಹಿತ್ಯ ಕ್ಷೇತ್ರದ ಅದೇ ಸಮುದಾಯದ ವ್ಯಕ್ತಿಗಳು ವಿಜೃಂಭಿಸುವುದು ಅಲಿಖಿತ ಒಪ್ಪಂದ. ಹೀಗೆ ಕರ್ನಾಟಕದಲ್ಲಿಯೂ ಒಂದೇ ಸಮುದಾಯದ ಹೆಚ್ಚು ಸಾಹಿತಿಗಳು ಪಾರಮ್ಯ ಗಳಿಸಿದರು. ದೇವರಾಜ ಅರಸರ ಕಾಲಘಟ್ಟದಲ್ಲಿ ಆದ ರಾಜಕೀಯ ಬೆಳವಣಿಗೆ ಮಾತ್ರ ಸಾಹಿತ್ಯದಲ್ಲಿ ದಲಿತ ಮತ್ತು ಶೂದ್ರ ಸಂವೇದನೆಗೆ ಸ್ವಲ್ಪ ಅವಕಾಶ ಕೊಟ್ಟಿತು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಲಂಕೇಶ್, ತೇಜಸ್ವಿ, ಚಂಪಾ ಮುಂತಾದ ದಲಿತ ಹಾಗೂ ಶೂದ್ರ ಸಾಹಿತಿಗಳಿಂದ (ಕುವೆಂಪು ಇವರೆಲ್ಲರಿಗೂ ಪೂರ್ವದಲ್ಲಿ ಇಂತಹ ಸಂವೇದನೆಗೆ ಕಾರಣರಾಗಿದ್ದರು) ಕನ್ನಡ ಸಾಹಿತ್ಯ ವೈವಿಧ್ಯಮಯವೂ, ಜನಪರವೂ ಆಗಿದ್ದು ಇತಿಹಾಸ. ಈ ಇತಿಹಾಸದ ಬಳವಳಿ ಎಂಬಂತೆ ಇಂದಿನ ಯುವಜನತೆ ಎಲ್ಲ ಕ್ಷೇತ್ರದಲ್ಲಿಯೂ ಎಲ್ಲ ಸಮುದಾಯಗಳಿಗೂ ಸರಿಯಾದ ಪ್ರಾತಿನಿಧ್ಯದ ಬೇಡಿಕೆಯಿಡುತ್ತಿದೆ. ಇದು ಹಲವರಿಗೆ ನುಂಗಲಾರದ ತುತ್ತಾಗಿದೆ.

ಇಂದು ರಾಜಕೀಯವೂ ಬಹುಸಂಖ್ಯಾತ ಪ್ರಭುತ್ವದ ಸುಪರ್ದಿಗೆ ಹೊರಳಿರುವಾಗ, ಪ್ರತಿಗಾಮಿ ಸಾಹಿತಿಗಳು ಮತ್ತೆ ತಮ್ಮ ದನಿಯನ್ನು ಜೋರುಮಾಡುತ್ತಿದ್ದಾರೆ. ಇದು ಈ ಸಾಹಿತಿಗಳ ಅಜ್ಞಾನದ ಪ್ರದರ್ಶನ ಮಾತ್ರವಾಗಿರದೆ, ಇಲ್ಲಿಯವರೆಗೆ ಸಾಧಿಸಲಾಗಿರುವ ತುಸು ಪ್ರಗತಿಗೂ ಗೆದ್ದಲು ಹಿಡಿಸುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ್ಯ ಮತ್ತು ಪ್ರಾತಿನಿಧ್ಯ ಎಂಬ ಐಡಿಯಾಗಳ ನಡುವಿನ ಸಂಘರ್ಷ ದಿನೇದಿನೇ ತೀವ್ರವಾಗುತ್ತಿದೆ. ಪ್ರಗತಿಪರವಾದ ಪ್ರಾತಿನಿಧ್ಯದ ಐಡಿಯಾದ ಕೂಗು ಬ್ರಾಹ್ಮಣ್ಯದ ಪ್ರತಿಗಾಮಿಗಳಿಗೆ ಕೇಳಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...