Homeಅಂಕಣಗಳುಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಪರಿಸರ-ವಿಜ್ಞಾನದ ಸಂಗತಿಗಳನ್ನು ಬೆರೆಸಿ ಕಥೆಗಳನ್ನು ಬರೆಯುವ ಜನಪ್ರಿಯ ಕಾದಂಬರಿಕಾರ ಗಣೇಶಯ್ಯನವರ ಪುಸ್ತಕಗಳ ಬಿಡುಗಡೆಯಲ್ಲಿ ಮತ್ತೋರ್ವ ಜನಪ್ರಿಯ ಕಥೆಗಾರ ಜೋಗಿ (ಗಿರೀಶ್ ರಾವ್) ಆಡಿದ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ’ಸಾಹಿತ್ಯ ಸಮ್ಮೇಳನದಂತಹ ವೇದಿಕೆಗಳಲ್ಲಿ ಜಾತಿ ಪ್ರಾತಿನಿಧ್ಯದ ಪ್ರಶ್ನೆ ವ್ಯರ್ಥ ವಾಗ್ವಾದ. ಸಾಹಿತ್ಯದಲ್ಲಿ ನಮ್ಮ ಜಾತಿಯವರು ಎಷ್ಟಿದ್ದೀವಿ ಅಂತ ನೋಡ್ತೀವಿ; ಜ್ಞಾನ ನೋಡಲ್ಲ. ಮೊದಲಿದು ರಾಜಕಾರಣದಲ್ಲಿತ್ತು. ಅಲ್ಲಿದ್ದ ಜಾತಿವಾರು ವಿಂಗಡಣೆ ಈಗ ರಾಜಕೀಯಕ್ಕೆ ಬಂದುಬಿಟ್ಟಿದೆ. ಜಾತಿ ನೆಲೆಯಿಂದ ನೋಡುವುದು ಸುಳ್ಳು ವಾಗ್ವಾದಗಳನ್ನು ಹುಟ್ಟುಹಾಕುತ್ತೆ. ಈ ವಾಗ್ವಾದಗಳಲ್ಲಿ ಹುರುಳಿರುವುದಿಲ್ಲ. ಅದರಿಂದ ನಮಗೇನೂ ಸಿಕ್ಕುವುದಿಲ್ಲ. ಕೃತಿಯ ಕಾರಣಕ್ಕೆ ಯೋಗ್ಯತೆಯನ್ನು ಅಳೆದು ನ್ಯಾಯ ಸಲ್ಲಿಸಬೇಕು. ಆಗ ಯೋಚಿಸುವವನ ಬುದ್ಧಿಶಕ್ತಿಗೆ ಕೆಲಸ ಕೊಟ್ಟಂತೆ ಆಗುತ್ತದೆ’ ಹೀಗೆಲ್ಲಾ ಮಾತಾಡ್ತಾ ಪ್ರಾತಿನಿಧ್ಯದ ಪ್ರಶ್ನೆಗಳು ಆಳದ ಚಿಂತನೆಗಳಲ್ಲ ಬದಲಾಗಿ ಮೇಲ್ಮಟ್ಟದ ಚಿಂತನೆಗಳು ಎಂದು ಹೀಗಳೆದಿದ್ದಾರೆ. ಇಡೀ ವಿಶ್ವ ಪ್ರಾತಿನಿಧ್ಯದ ಪ್ರಶ್ನೆಗಳನ್ನು ಎತ್ತಿಕೊಂಡು ಚರ್ಚಿಸುತ್ತಿರುವಾಗ, ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಪ್ರಾತಿನಿಧ್ಯದ ಸಮಸ್ಯೆಗಳನ್ನು ಸರಿಪಡಿಸಲು ಅಧ್ಯಯನಗಳನ್ನು ನಡೆಸುತ್ತಿರುವಾಗ, ಕರ್ನಾಟಕದಲ್ಲಿ ಜೋಗಿಯಂತಹ ಜನಪ್ರಿಯ ಲೇಖಕ-ಪತ್ರಕರ್ತರಿಗೆ ಇದು ವ್ಯರ್ಥ ವಾಗ್ವಾದದಂತೆ ಕಾಣುವುದು ಏಕೆ? ಪ್ರಿವಿಲೆಜ್ ಸಮುದಾಯದಿಂದ ಬಂದಂತಹ ಇಂತಹ ಬರಹಗಾರರು ಸಮಾಜದ ಸಮಸ್ಯೆಗಳಿಗೆ ಬೆನ್ನುತಿರುಗಿಸಿ ತಮ್ಮದೇ ಲೋಕದಲ್ಲಿ ಮುಳುಗಿರುವ ಸಂಗತಿ ಮಾತ್ರವೇ ಇದು?

ವಿಜ್ಞಾನ ಮತ್ತು ತಂತ್ರಜ್ಞಾನದ ಅಧ್ಯಯನ ಮತ್ತು ವರದಿಗಳನ್ನು ಪ್ರಕಟಿಸುವ ಬ್ರಿಟಿಷ್ ಮೂಲದ ’ನೇಚರ್’ ಜರ್ನಲ್ ಇತ್ತೀಚೆಗೆ “ಹೇಗೆ ಭಾರತೀಯ ಜಾತಿ ವ್ಯವಸ್ಥೆ ವಿಜ್ಞಾನದಲ್ಲಿ ವೈವಿಧ್ಯತೆಯನ್ನು ನಿರ್ಬಂಧಿಸುತ್ತದೆ- ಆರು ಚಾರ್ಟ್‌ಗಳಲ್ಲಿ” ಎಂಬ ಅಧ್ಯಯನಪೂರ್ಣ ಬರಹವನ್ನು ಪ್ರಕಟಿಸಿತು. ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಪ್ರಾತಿನಿಧ್ಯದಲ್ಲಿ ಇರುವ ಕೊರತೆಯನ್ನು ಅಂಕಿಅಂಶಗಳ ಮೂಲಕ ಬಿಚ್ಚಿಟ್ಟಿತು. ಪ್ರೊಫೆಸರ್‌ಗಳು ಮತ್ತು ವಿಜ್ಞಾನಿಗಳ ಹುದ್ದೆಗಳಲ್ಲಂತೂ ದಲಿತ, ಆದಿವಾಸಿ ಮತ್ತು ಹಿಂದುಳಿದವರ ಸಂಖ್ಯೆ 2%-5% ಮಾತ್ರ. ಈ ಪ್ರಾತಿನಿಧ್ಯದ ಕೊರತೆಯಿಂದ ಈ ದೇಶದ ವಿಜ್ಞಾನ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ. ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವುದೇ ದೊಡ್ಡದಾದ ಅಥವಾ ಮನುಕುಲವನ್ನು ಬದಲಾಯಿಸಿದ ಬೆಳವಣಿಗೆ ಈ ದೇಶದ ವಿಜ್ಞಾನ ಸಂಸ್ಥೆಗಳಿಂದ ಹೊರಬಂದಿದ್ದು ಇಲ್ಲವೇಇಲ್ಲವೆನ್ನುವಷ್ಟು ವಿರಳ. ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ಶಾಸ್ತ್ರ ವಿಭಾಗದಲ್ಲಿ ಆಯಾ ವರ್ಷ ನಡೆಯುವ ಬಹುಮುಖ್ಯ ಸಂಶೋಧನೆಗಳಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೈದವರಿಗೆ ಈ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ದೊರಕಿರುವುದನ್ನು ಎಣಿಸಲು ಬೆರೆಳೆಣಿಕೆಯ ಅಗತ್ಯವೂ ಇಲ್ಲ. ವಿವಿಧ ಜ್ಞಾನಕ್ಷೇತ್ರಗಳಲ್ಲಿ ಪರಿಣಿತರಾಗಿದ್ದ ಸಮುದಾಯಗಳನ್ನು ಕಡೆಗಣಿಸಿ ಮುಂದುವರಿದ ವಿಜ್ಞಾನ ಕ್ಷೇತ್ರದ ಬಾಳು ಇದು. ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಪಶ್ಚಿಮ ದೇಶಗಳಿಂದ ಸಿಕ್ಕುವ ಕೆಲಸಗಳಿಗೆ ಬಾಡಿಶಾಪಿಂಗ್ ಮಾಡುವ ಸಂಸ್ಥೆಗಳನ್ನು ಇಲ್ಲಿ ಕಟ್ಟಲಾಗಿದೆಯೇ ಹೊರತು, ಇಂಡಿಜೀನಸ್ ಎನ್ನುವ ತಂತ್ರಜ್ಞಾನ ಭಾರತದಿಂದ ಬೆಳೆದುಬಂದಿದೆಯೇ? ಇಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ವಿಜ್ಞಾನ ಕ್ಷೇತ್ರದಲ್ಲಿಯೂ ಜಾತಿ ಸಮುದಾಯಗಳ ಪ್ರಾತಿನಿಧ್ಯ ಏಕೆ ಬೇಕು? ಜ್ಞಾನವನ್ನು ಹುಡುಕೋಣ ಬನ್ನಿ ಎಂದು ಬೋಧನೆ ನೀಡುವ ಜೋಗಿಗಳ ಸಂಖ್ಯೆ ಇಲ್ಲಿಯೂ ಕಡಿಮೆಯೇನಿಲ್ಲ!

ಭಾರತದ ಮತ್ತು ಕರ್ನಾಟಕದ ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ. ಮಾಧ್ಯಮ ಕ್ಷೇತ್ರಗಳಲ್ಲಿ ಸಂಪಾದಕರು ಯಾವ ಸಮುದಾಯದಿಂದ ಬಂದವರು ಎಂದು ಹುಡುಕುತ್ತಾ ಹೋದರೆ 90%ಗಿಂತಲೂ ಹೆಚ್ಚು ಜನ 3% ಜನಸಂಖ್ಯೆಯ ಸಮುದಾಯಕ್ಕೆ ಸೇರಿದವರು ಎಂಬುದು ಅಚ್ಚರಿಯಾಗೇನೂ ಉಳಿದಿಲ್ಲ. ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರಗಳು ಒಂದಕ್ಕೊಂದು ಬೆಸೆದುಕೊಂಡಿರುವಂತಹವು. ಮಾಧ್ಯಮ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಸಮುದಾಯದ ವ್ಯಕ್ತಿಗಳಿಂದ ಸಾಹಿತ್ಯ ಕ್ಷೇತ್ರದ ಅದೇ ಸಮುದಾಯದ ವ್ಯಕ್ತಿಗಳು ವಿಜೃಂಭಿಸುವುದು ಅಲಿಖಿತ ಒಪ್ಪಂದ. ಹೀಗೆ ಕರ್ನಾಟಕದಲ್ಲಿಯೂ ಒಂದೇ ಸಮುದಾಯದ ಹೆಚ್ಚು ಸಾಹಿತಿಗಳು ಪಾರಮ್ಯ ಗಳಿಸಿದರು. ದೇವರಾಜ ಅರಸರ ಕಾಲಘಟ್ಟದಲ್ಲಿ ಆದ ರಾಜಕೀಯ ಬೆಳವಣಿಗೆ ಮಾತ್ರ ಸಾಹಿತ್ಯದಲ್ಲಿ ದಲಿತ ಮತ್ತು ಶೂದ್ರ ಸಂವೇದನೆಗೆ ಸ್ವಲ್ಪ ಅವಕಾಶ ಕೊಟ್ಟಿತು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಲಂಕೇಶ್, ತೇಜಸ್ವಿ, ಚಂಪಾ ಮುಂತಾದ ದಲಿತ ಹಾಗೂ ಶೂದ್ರ ಸಾಹಿತಿಗಳಿಂದ (ಕುವೆಂಪು ಇವರೆಲ್ಲರಿಗೂ ಪೂರ್ವದಲ್ಲಿ ಇಂತಹ ಸಂವೇದನೆಗೆ ಕಾರಣರಾಗಿದ್ದರು) ಕನ್ನಡ ಸಾಹಿತ್ಯ ವೈವಿಧ್ಯಮಯವೂ, ಜನಪರವೂ ಆಗಿದ್ದು ಇತಿಹಾಸ. ಈ ಇತಿಹಾಸದ ಬಳವಳಿ ಎಂಬಂತೆ ಇಂದಿನ ಯುವಜನತೆ ಎಲ್ಲ ಕ್ಷೇತ್ರದಲ್ಲಿಯೂ ಎಲ್ಲ ಸಮುದಾಯಗಳಿಗೂ ಸರಿಯಾದ ಪ್ರಾತಿನಿಧ್ಯದ ಬೇಡಿಕೆಯಿಡುತ್ತಿದೆ. ಇದು ಹಲವರಿಗೆ ನುಂಗಲಾರದ ತುತ್ತಾಗಿದೆ.

ಇಂದು ರಾಜಕೀಯವೂ ಬಹುಸಂಖ್ಯಾತ ಪ್ರಭುತ್ವದ ಸುಪರ್ದಿಗೆ ಹೊರಳಿರುವಾಗ, ಪ್ರತಿಗಾಮಿ ಸಾಹಿತಿಗಳು ಮತ್ತೆ ತಮ್ಮ ದನಿಯನ್ನು ಜೋರುಮಾಡುತ್ತಿದ್ದಾರೆ. ಇದು ಈ ಸಾಹಿತಿಗಳ ಅಜ್ಞಾನದ ಪ್ರದರ್ಶನ ಮಾತ್ರವಾಗಿರದೆ, ಇಲ್ಲಿಯವರೆಗೆ ಸಾಧಿಸಲಾಗಿರುವ ತುಸು ಪ್ರಗತಿಗೂ ಗೆದ್ದಲು ಹಿಡಿಸುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ್ಯ ಮತ್ತು ಪ್ರಾತಿನಿಧ್ಯ ಎಂಬ ಐಡಿಯಾಗಳ ನಡುವಿನ ಸಂಘರ್ಷ ದಿನೇದಿನೇ ತೀವ್ರವಾಗುತ್ತಿದೆ. ಪ್ರಗತಿಪರವಾದ ಪ್ರಾತಿನಿಧ್ಯದ ಐಡಿಯಾದ ಕೂಗು ಬ್ರಾಹ್ಮಣ್ಯದ ಪ್ರತಿಗಾಮಿಗಳಿಗೆ ಕೇಳಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...