Homeಅಂಕಣಗಳುಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಪರಿಸರ-ವಿಜ್ಞಾನದ ಸಂಗತಿಗಳನ್ನು ಬೆರೆಸಿ ಕಥೆಗಳನ್ನು ಬರೆಯುವ ಜನಪ್ರಿಯ ಕಾದಂಬರಿಕಾರ ಗಣೇಶಯ್ಯನವರ ಪುಸ್ತಕಗಳ ಬಿಡುಗಡೆಯಲ್ಲಿ ಮತ್ತೋರ್ವ ಜನಪ್ರಿಯ ಕಥೆಗಾರ ಜೋಗಿ (ಗಿರೀಶ್ ರಾವ್) ಆಡಿದ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ’ಸಾಹಿತ್ಯ ಸಮ್ಮೇಳನದಂತಹ ವೇದಿಕೆಗಳಲ್ಲಿ ಜಾತಿ ಪ್ರಾತಿನಿಧ್ಯದ ಪ್ರಶ್ನೆ ವ್ಯರ್ಥ ವಾಗ್ವಾದ. ಸಾಹಿತ್ಯದಲ್ಲಿ ನಮ್ಮ ಜಾತಿಯವರು ಎಷ್ಟಿದ್ದೀವಿ ಅಂತ ನೋಡ್ತೀವಿ; ಜ್ಞಾನ ನೋಡಲ್ಲ. ಮೊದಲಿದು ರಾಜಕಾರಣದಲ್ಲಿತ್ತು. ಅಲ್ಲಿದ್ದ ಜಾತಿವಾರು ವಿಂಗಡಣೆ ಈಗ ರಾಜಕೀಯಕ್ಕೆ ಬಂದುಬಿಟ್ಟಿದೆ. ಜಾತಿ ನೆಲೆಯಿಂದ ನೋಡುವುದು ಸುಳ್ಳು ವಾಗ್ವಾದಗಳನ್ನು ಹುಟ್ಟುಹಾಕುತ್ತೆ. ಈ ವಾಗ್ವಾದಗಳಲ್ಲಿ ಹುರುಳಿರುವುದಿಲ್ಲ. ಅದರಿಂದ ನಮಗೇನೂ ಸಿಕ್ಕುವುದಿಲ್ಲ. ಕೃತಿಯ ಕಾರಣಕ್ಕೆ ಯೋಗ್ಯತೆಯನ್ನು ಅಳೆದು ನ್ಯಾಯ ಸಲ್ಲಿಸಬೇಕು. ಆಗ ಯೋಚಿಸುವವನ ಬುದ್ಧಿಶಕ್ತಿಗೆ ಕೆಲಸ ಕೊಟ್ಟಂತೆ ಆಗುತ್ತದೆ’ ಹೀಗೆಲ್ಲಾ ಮಾತಾಡ್ತಾ ಪ್ರಾತಿನಿಧ್ಯದ ಪ್ರಶ್ನೆಗಳು ಆಳದ ಚಿಂತನೆಗಳಲ್ಲ ಬದಲಾಗಿ ಮೇಲ್ಮಟ್ಟದ ಚಿಂತನೆಗಳು ಎಂದು ಹೀಗಳೆದಿದ್ದಾರೆ. ಇಡೀ ವಿಶ್ವ ಪ್ರಾತಿನಿಧ್ಯದ ಪ್ರಶ್ನೆಗಳನ್ನು ಎತ್ತಿಕೊಂಡು ಚರ್ಚಿಸುತ್ತಿರುವಾಗ, ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಪ್ರಾತಿನಿಧ್ಯದ ಸಮಸ್ಯೆಗಳನ್ನು ಸರಿಪಡಿಸಲು ಅಧ್ಯಯನಗಳನ್ನು ನಡೆಸುತ್ತಿರುವಾಗ, ಕರ್ನಾಟಕದಲ್ಲಿ ಜೋಗಿಯಂತಹ ಜನಪ್ರಿಯ ಲೇಖಕ-ಪತ್ರಕರ್ತರಿಗೆ ಇದು ವ್ಯರ್ಥ ವಾಗ್ವಾದದಂತೆ ಕಾಣುವುದು ಏಕೆ? ಪ್ರಿವಿಲೆಜ್ ಸಮುದಾಯದಿಂದ ಬಂದಂತಹ ಇಂತಹ ಬರಹಗಾರರು ಸಮಾಜದ ಸಮಸ್ಯೆಗಳಿಗೆ ಬೆನ್ನುತಿರುಗಿಸಿ ತಮ್ಮದೇ ಲೋಕದಲ್ಲಿ ಮುಳುಗಿರುವ ಸಂಗತಿ ಮಾತ್ರವೇ ಇದು?

ವಿಜ್ಞಾನ ಮತ್ತು ತಂತ್ರಜ್ಞಾನದ ಅಧ್ಯಯನ ಮತ್ತು ವರದಿಗಳನ್ನು ಪ್ರಕಟಿಸುವ ಬ್ರಿಟಿಷ್ ಮೂಲದ ’ನೇಚರ್’ ಜರ್ನಲ್ ಇತ್ತೀಚೆಗೆ “ಹೇಗೆ ಭಾರತೀಯ ಜಾತಿ ವ್ಯವಸ್ಥೆ ವಿಜ್ಞಾನದಲ್ಲಿ ವೈವಿಧ್ಯತೆಯನ್ನು ನಿರ್ಬಂಧಿಸುತ್ತದೆ- ಆರು ಚಾರ್ಟ್‌ಗಳಲ್ಲಿ” ಎಂಬ ಅಧ್ಯಯನಪೂರ್ಣ ಬರಹವನ್ನು ಪ್ರಕಟಿಸಿತು. ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಪ್ರಾತಿನಿಧ್ಯದಲ್ಲಿ ಇರುವ ಕೊರತೆಯನ್ನು ಅಂಕಿಅಂಶಗಳ ಮೂಲಕ ಬಿಚ್ಚಿಟ್ಟಿತು. ಪ್ರೊಫೆಸರ್‌ಗಳು ಮತ್ತು ವಿಜ್ಞಾನಿಗಳ ಹುದ್ದೆಗಳಲ್ಲಂತೂ ದಲಿತ, ಆದಿವಾಸಿ ಮತ್ತು ಹಿಂದುಳಿದವರ ಸಂಖ್ಯೆ 2%-5% ಮಾತ್ರ. ಈ ಪ್ರಾತಿನಿಧ್ಯದ ಕೊರತೆಯಿಂದ ಈ ದೇಶದ ವಿಜ್ಞಾನ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ. ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವುದೇ ದೊಡ್ಡದಾದ ಅಥವಾ ಮನುಕುಲವನ್ನು ಬದಲಾಯಿಸಿದ ಬೆಳವಣಿಗೆ ಈ ದೇಶದ ವಿಜ್ಞಾನ ಸಂಸ್ಥೆಗಳಿಂದ ಹೊರಬಂದಿದ್ದು ಇಲ್ಲವೇಇಲ್ಲವೆನ್ನುವಷ್ಟು ವಿರಳ. ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ಶಾಸ್ತ್ರ ವಿಭಾಗದಲ್ಲಿ ಆಯಾ ವರ್ಷ ನಡೆಯುವ ಬಹುಮುಖ್ಯ ಸಂಶೋಧನೆಗಳಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೈದವರಿಗೆ ಈ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ದೊರಕಿರುವುದನ್ನು ಎಣಿಸಲು ಬೆರೆಳೆಣಿಕೆಯ ಅಗತ್ಯವೂ ಇಲ್ಲ. ವಿವಿಧ ಜ್ಞಾನಕ್ಷೇತ್ರಗಳಲ್ಲಿ ಪರಿಣಿತರಾಗಿದ್ದ ಸಮುದಾಯಗಳನ್ನು ಕಡೆಗಣಿಸಿ ಮುಂದುವರಿದ ವಿಜ್ಞಾನ ಕ್ಷೇತ್ರದ ಬಾಳು ಇದು. ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಪಶ್ಚಿಮ ದೇಶಗಳಿಂದ ಸಿಕ್ಕುವ ಕೆಲಸಗಳಿಗೆ ಬಾಡಿಶಾಪಿಂಗ್ ಮಾಡುವ ಸಂಸ್ಥೆಗಳನ್ನು ಇಲ್ಲಿ ಕಟ್ಟಲಾಗಿದೆಯೇ ಹೊರತು, ಇಂಡಿಜೀನಸ್ ಎನ್ನುವ ತಂತ್ರಜ್ಞಾನ ಭಾರತದಿಂದ ಬೆಳೆದುಬಂದಿದೆಯೇ? ಇಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ವಿಜ್ಞಾನ ಕ್ಷೇತ್ರದಲ್ಲಿಯೂ ಜಾತಿ ಸಮುದಾಯಗಳ ಪ್ರಾತಿನಿಧ್ಯ ಏಕೆ ಬೇಕು? ಜ್ಞಾನವನ್ನು ಹುಡುಕೋಣ ಬನ್ನಿ ಎಂದು ಬೋಧನೆ ನೀಡುವ ಜೋಗಿಗಳ ಸಂಖ್ಯೆ ಇಲ್ಲಿಯೂ ಕಡಿಮೆಯೇನಿಲ್ಲ!

ಭಾರತದ ಮತ್ತು ಕರ್ನಾಟಕದ ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ. ಮಾಧ್ಯಮ ಕ್ಷೇತ್ರಗಳಲ್ಲಿ ಸಂಪಾದಕರು ಯಾವ ಸಮುದಾಯದಿಂದ ಬಂದವರು ಎಂದು ಹುಡುಕುತ್ತಾ ಹೋದರೆ 90%ಗಿಂತಲೂ ಹೆಚ್ಚು ಜನ 3% ಜನಸಂಖ್ಯೆಯ ಸಮುದಾಯಕ್ಕೆ ಸೇರಿದವರು ಎಂಬುದು ಅಚ್ಚರಿಯಾಗೇನೂ ಉಳಿದಿಲ್ಲ. ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರಗಳು ಒಂದಕ್ಕೊಂದು ಬೆಸೆದುಕೊಂಡಿರುವಂತಹವು. ಮಾಧ್ಯಮ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಸಮುದಾಯದ ವ್ಯಕ್ತಿಗಳಿಂದ ಸಾಹಿತ್ಯ ಕ್ಷೇತ್ರದ ಅದೇ ಸಮುದಾಯದ ವ್ಯಕ್ತಿಗಳು ವಿಜೃಂಭಿಸುವುದು ಅಲಿಖಿತ ಒಪ್ಪಂದ. ಹೀಗೆ ಕರ್ನಾಟಕದಲ್ಲಿಯೂ ಒಂದೇ ಸಮುದಾಯದ ಹೆಚ್ಚು ಸಾಹಿತಿಗಳು ಪಾರಮ್ಯ ಗಳಿಸಿದರು. ದೇವರಾಜ ಅರಸರ ಕಾಲಘಟ್ಟದಲ್ಲಿ ಆದ ರಾಜಕೀಯ ಬೆಳವಣಿಗೆ ಮಾತ್ರ ಸಾಹಿತ್ಯದಲ್ಲಿ ದಲಿತ ಮತ್ತು ಶೂದ್ರ ಸಂವೇದನೆಗೆ ಸ್ವಲ್ಪ ಅವಕಾಶ ಕೊಟ್ಟಿತು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಲಂಕೇಶ್, ತೇಜಸ್ವಿ, ಚಂಪಾ ಮುಂತಾದ ದಲಿತ ಹಾಗೂ ಶೂದ್ರ ಸಾಹಿತಿಗಳಿಂದ (ಕುವೆಂಪು ಇವರೆಲ್ಲರಿಗೂ ಪೂರ್ವದಲ್ಲಿ ಇಂತಹ ಸಂವೇದನೆಗೆ ಕಾರಣರಾಗಿದ್ದರು) ಕನ್ನಡ ಸಾಹಿತ್ಯ ವೈವಿಧ್ಯಮಯವೂ, ಜನಪರವೂ ಆಗಿದ್ದು ಇತಿಹಾಸ. ಈ ಇತಿಹಾಸದ ಬಳವಳಿ ಎಂಬಂತೆ ಇಂದಿನ ಯುವಜನತೆ ಎಲ್ಲ ಕ್ಷೇತ್ರದಲ್ಲಿಯೂ ಎಲ್ಲ ಸಮುದಾಯಗಳಿಗೂ ಸರಿಯಾದ ಪ್ರಾತಿನಿಧ್ಯದ ಬೇಡಿಕೆಯಿಡುತ್ತಿದೆ. ಇದು ಹಲವರಿಗೆ ನುಂಗಲಾರದ ತುತ್ತಾಗಿದೆ.

ಇಂದು ರಾಜಕೀಯವೂ ಬಹುಸಂಖ್ಯಾತ ಪ್ರಭುತ್ವದ ಸುಪರ್ದಿಗೆ ಹೊರಳಿರುವಾಗ, ಪ್ರತಿಗಾಮಿ ಸಾಹಿತಿಗಳು ಮತ್ತೆ ತಮ್ಮ ದನಿಯನ್ನು ಜೋರುಮಾಡುತ್ತಿದ್ದಾರೆ. ಇದು ಈ ಸಾಹಿತಿಗಳ ಅಜ್ಞಾನದ ಪ್ರದರ್ಶನ ಮಾತ್ರವಾಗಿರದೆ, ಇಲ್ಲಿಯವರೆಗೆ ಸಾಧಿಸಲಾಗಿರುವ ತುಸು ಪ್ರಗತಿಗೂ ಗೆದ್ದಲು ಹಿಡಿಸುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ್ಯ ಮತ್ತು ಪ್ರಾತಿನಿಧ್ಯ ಎಂಬ ಐಡಿಯಾಗಳ ನಡುವಿನ ಸಂಘರ್ಷ ದಿನೇದಿನೇ ತೀವ್ರವಾಗುತ್ತಿದೆ. ಪ್ರಗತಿಪರವಾದ ಪ್ರಾತಿನಿಧ್ಯದ ಐಡಿಯಾದ ಕೂಗು ಬ್ರಾಹ್ಮಣ್ಯದ ಪ್ರತಿಗಾಮಿಗಳಿಗೆ ಕೇಳಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...