Homeಮುಖಪುಟನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು: ವಿಶ್ವೇಶ್ವರ ಭಟ್‌ ಕುರಿತು ಪ್ರಕಾಶ್ ರಾಜ್ ಕಿಡಿನುಡಿ

ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು: ವಿಶ್ವೇಶ್ವರ ಭಟ್‌ ಕುರಿತು ಪ್ರಕಾಶ್ ರಾಜ್ ಕಿಡಿನುಡಿ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವ ಚರ್ಚೆಯ ಕಾವು ಇನ್ನೂ ಆರಿಲ್ಲ. ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಹೋಗಬಾರದೆಂದು ಮನವಿ ಮಾಡಿದ್ದ ಬಹುಭಾಷ ನಟ ಪ್ರಕಾಶ್ ರಾಜ್, “ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು” ಎಂದು ವಿಶ್ವೇಶ್ವರ ಭಟ್‌ ಕುರಿತು ಹೇಳಿದ್ದಾರೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ಇದೇ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ್ದ ಪ್ರಕಾಶ್ ರಾಜ್‌ರವರು, “ಸನ್ಮಾನ್ಯ ಸಿದ್ದರಾಮಯ್ಯನವರೇ.. ದಯವಿಟ್ಟು ಒಮ್ಮೆ ಯೋಚಿಸಿ .. ಇದು ತಮಗೆ ಶೊಭೆಯಲ್ಲ ಎಂದು ಮನವಿ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ವಿಶ್ವೇಶ್ವರ ಭಟ್, “ನೆನಪುಗಳು ಮಾಸುವುದಿಲ್ಲ! ನನ್ನ ಪುಸ್ತಕ ಬಿಡುಗಡೆಗೆ ಹೋಗಬೇಡಿ ಎನ್ನುವವರು, ನನ್ನೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇಕೋ? ಡಬಲ್ ಸ್ಟ್ಯಾಂಡರ್ಡ್ ಅಂದ್ರೆ ಇದೇ ನೋಡಿ. (ಅವರು ನನ್ನೊಂದಿಗೆ ಭಾಗವಹಿಸಿದ ಹಲವು ಕಾರ್ಯಕ್ರಮಗಳ ಇನ್ನೂ ಅನೇಕ ಫೋಟೋಗಳು ನನ್ನ ಸಂಗ್ರಹದಲ್ಲಿದೆ. ಆಸಕ್ತಿಯಿದ್ದರೆ ಹೇಳಿ, ಬಿಡುಗಡೆ ಮಾಡುವೆ.)” ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಕಾಶ್‌ ರಾಜ್, “Yes .. regrettable Memories of not knowing the poison within you … ನಿಮ್ಮೊಳಗಿನ ವಿಷ ಅರಿಯದ ..ವಿಷಾದ ಪಡಲೇಬೇಕಾದ ದಿನಗಳು” ಎಂದು ಮರು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...