Homeಮುಖಪುಟನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು: ವಿಶ್ವೇಶ್ವರ ಭಟ್‌ ಕುರಿತು ಪ್ರಕಾಶ್ ರಾಜ್ ಕಿಡಿನುಡಿ

ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು: ವಿಶ್ವೇಶ್ವರ ಭಟ್‌ ಕುರಿತು ಪ್ರಕಾಶ್ ರಾಜ್ ಕಿಡಿನುಡಿ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವ ಚರ್ಚೆಯ ಕಾವು ಇನ್ನೂ ಆರಿಲ್ಲ. ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಹೋಗಬಾರದೆಂದು ಮನವಿ ಮಾಡಿದ್ದ ಬಹುಭಾಷ ನಟ ಪ್ರಕಾಶ್ ರಾಜ್, “ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು” ಎಂದು ವಿಶ್ವೇಶ್ವರ ಭಟ್‌ ಕುರಿತು ಹೇಳಿದ್ದಾರೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ಇದೇ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ್ದ ಪ್ರಕಾಶ್ ರಾಜ್‌ರವರು, “ಸನ್ಮಾನ್ಯ ಸಿದ್ದರಾಮಯ್ಯನವರೇ.. ದಯವಿಟ್ಟು ಒಮ್ಮೆ ಯೋಚಿಸಿ .. ಇದು ತಮಗೆ ಶೊಭೆಯಲ್ಲ ಎಂದು ಮನವಿ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ವಿಶ್ವೇಶ್ವರ ಭಟ್, “ನೆನಪುಗಳು ಮಾಸುವುದಿಲ್ಲ! ನನ್ನ ಪುಸ್ತಕ ಬಿಡುಗಡೆಗೆ ಹೋಗಬೇಡಿ ಎನ್ನುವವರು, ನನ್ನೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇಕೋ? ಡಬಲ್ ಸ್ಟ್ಯಾಂಡರ್ಡ್ ಅಂದ್ರೆ ಇದೇ ನೋಡಿ. (ಅವರು ನನ್ನೊಂದಿಗೆ ಭಾಗವಹಿಸಿದ ಹಲವು ಕಾರ್ಯಕ್ರಮಗಳ ಇನ್ನೂ ಅನೇಕ ಫೋಟೋಗಳು ನನ್ನ ಸಂಗ್ರಹದಲ್ಲಿದೆ. ಆಸಕ್ತಿಯಿದ್ದರೆ ಹೇಳಿ, ಬಿಡುಗಡೆ ಮಾಡುವೆ.)” ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಕಾಶ್‌ ರಾಜ್, “Yes .. regrettable Memories of not knowing the poison within you … ನಿಮ್ಮೊಳಗಿನ ವಿಷ ಅರಿಯದ ..ವಿಷಾದ ಪಡಲೇಬೇಕಾದ ದಿನಗಳು” ಎಂದು ಮರು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...