Homeಮುಖಪುಟಕುಡಿಯುವ ನೀರಿನ ಪೂರೈಕೆ ಮೂಲಭೂತ ಹಕ್ಕು: ಬಾಂಬೆ ಹೈಕೋರ್ಟ್

ಕುಡಿಯುವ ನೀರಿನ ಪೂರೈಕೆ ಮೂಲಭೂತ ಹಕ್ಕು: ಬಾಂಬೆ ಹೈಕೋರ್ಟ್

- Advertisement -
- Advertisement -

ನಿಯಮಿತ ಕುಡಿಯುವ ನೀರಿನ ಪೂರೈಕೆ ಮೂಲಭೂತ ಹಕ್ಕಾಗಿದೆ. ಆದರೆ, ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕವೂ ಜನರು ಕುಡಿಯುವ ನೀರನ್ನು ಪಡೆಯಲು ನ್ಯಾಯಾಲಯದ ಬಾಗಿಲು ತಟ್ಟಬೇಕಾಗಿರುವುದು ದುರದೃಷ್ಟಕರ ಎಂದು ಬಾಂಬೆ ಹೈಕೋರ್ಟ್ ಬುಧವಾರ ವಿಷಾದ ವ್ಯಕ್ತಪಡಿಸಿದೆ.

ಥಾಣೆ ಜಿಲ್ಲೆಯ ಭೀವಂಡಿ ಪಟ್ಟಣದ ಕಾಂಬೆ ಹಳ್ಳಿಯ ನಿವಾಸಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಎಸ್.ಜೆ ಕಥಾವಲ್ಲಾ ಮತ್ತು ಮಿಲಿಂದ್ ಜಾಧವ್ ಅವರ ವಿಭಾಗೀಯ ಪೀಠವು ಈ ಹೇಳಿಕೆಗಳನ್ನು ನೀಡಿದೆ.

ಥಾಣೆ ಜಿಲ್ಲಾ ಪರಿಷತ್ ಮತ್ತು ಭೀವಂಡಿ ನಿಜಂಪುರ ಮಹಾನಗರ ಪಾಲಿಕೆಯ ಜಂಟಿ ಸಹಭಾಗಿತ್ವದ STEM ವಾಟರ್ ಡಿಸ್ಟ್ರಿಬ್ಯೂಷನ್ ಮತ್ತು ಇನ್ಫ್ರಾ ಕಂಪನಿಗೆ ಪ್ರತಿದಿನ ಕುಡಿಯುವ ನೀರನ್ನು ಪೂರೈಸಲು ನಿರ್ದೇಶನ ನೀಡುವಂತೆ ಕಾಂಬೆ ಹಳ್ಳಿಯ ನಿವಾಸಿಗಳು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಲೈಂಗಿಕ ಉದ್ದೇಶವಿಲ್ಲದೆ ಮಗುವಿನ ಕೆನ್ನೆ ಮುಟ್ಟುವುದು ಲೈಂಗಿಕ ದೌರ್ಜನ್ಯವಲ್ಲ-ಬಾಂಬೆ ಹೈಕೋರ್ಟ್

ಅರ್ಜಿದಾರರಾದ ಕಾಂಬೆ ಹಳ್ಳಿಯ ನಿವಾಸಿಗಳು, ತಮನೆ ಪ್ರಸ್ತುತ ತಿಂಗಳಿಗೆ ಎರಡು ಬಾರಿ ಮಾತ್ರ ನೀರು ಪೂರೈಸಲಾಗುತ್ತಿದೆ. ಅದೂ ಕೇವಲ ಎರಡು ಗಂಟೆಗಳ ಕಾಲ ನೀರು ಸರಬರಾಜು ಮಾಡುತ್ತಿದ್ದಾರೆ ಎಂದು ವಾದಿಸಿದರು.

STEM ನ ವ್ಯವಸ್ಥಾಪಕ ನಿರ್ದೇಶಕ ಭೋಸಾಹೇಬ್ ದಾಂಗ್ಡೆ, ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಒಂದು ನಿರ್ದಿಷ್ಟ ಸ್ಥಳದಿಂದ ಅರ್ಜಿದಾರರ ಮನೆಗಳಿಗೆ ನೀರು ವಿತರಿಸುವುದು ಹಳ್ಳಿಯ ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಕಳೆದ ಕೆಲವು ವರ್ಷಗಳಿಂದ ಅಲ್ಲಿನ ಜನಸಂಖ್ಯೆಯ ಏರಿಕೆಯಿಂದಾಗಿ ಗ್ರಾಮದಲ್ಲಿ ನೀರಿನ ಬೇಡಿಕೆ ಹೆಚ್ಚಾಗಿದೆ  ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

“ಪ್ರತಿದಿನ ಕನಿಷ್ಠ ಕೆಲವು ಗಂಟೆಗಳ ಕಾಲ ನೀರನ್ನು ಪೂರೈಸಬೇಕು. ಇದು ಅವರ ಮೂಲಭೂತ ಹಕ್ಕು. ಜನರು ಈ ರೀತಿ ನೀರಿಲ್ಲದೆ ಬಳಲುವಂತಿಲ್ಲ. ನೀರು ಪೂರೈಕೆಗಾಗಿ ಅರ್ಜಿದಾರರು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ನ್ಯಾಯಾಲಯದ ಬಾಗಿಲು ತಟ್ಟಬೇಕಾಗಿರುವುದು ನಿಜಕ್ಕೂ ದುರದೃಷ್ಟಕರ” ಎಂದು ಹೈಕೋರ್ಟ್ ಹೇಳಿದೆ.

ಎಸ್‌ಟಿಇಎಂ ಕಂಪನಿಯು ಸ್ಥಳೀಯ ರಾಜಕಾರಣಿಗಳಿಗೆ ಮತ್ತು ಟ್ಯಾಂಕರ್ ಲಾಬಿಗೆ ಕಾನೂನುಬಾಹಿರವಾಗಿ ನೀರು ಪೂರೈಸುತ್ತಿದೆ.ಮುಖ್ಯ ಪೈಪ್‌ಲೈನ್‌ನಲ್ಲಿ ಅಕ್ರಮವಾಗಿ 300 ಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಮಾಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ, ಅವರ ಮೇಲೆ ಹೆಚ್ಚಿನ ಗೌರವವಿದೆ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...