Homeಚಳವಳಿಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

ಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

- Advertisement -
- Advertisement -

ಸ್ವಾತಂತ್ರ್ಯಕ್ಕೂ ಮುಂಚೆ ನಾವು ಈಸ್ಟ್ ಇಂಡಿಯಾ ಕಂಪನಿಯ ಗುಲಾಮರಾಗಿದ್ದೆವು, ಆದರೆ ಸ್ವಾತಂತ್ರ್ಯ ನಂತರವೂ ಸಹ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳ ಗುಲಾಮರಾಗಿರಬೇಕೆಂದು ಸರ್ಕಾರ ಬಯಸುತ್ತಿದೆ. ಅದನ್ನು ತಪ್ಪಿಸುವುದಕ್ಕಾಗಿ ಹೋರಾಡುತ್ತಿರುವ ಗಣಿ ಕಾರ್ಮಿಕರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘವು ಸಂಡೂರಿನಿಂದ ಬಳ್ಳಾರಿವರೆಗೆ ನಡೆಸುತ್ತಿರುವ 70 ಕಿ.ಮೀಗಳ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಿಮ್ಮ ಹೋರಾಟವು ನರ್ಮದಾ ಉಳಿಸಿ ಹೋರಾಟದಂತೆಯೆ ಬಹಳ ಕಷ್ಟದಿಂದ ಕೂಡಿದೆ. ಆದರೆ ಅಷ್ಟೇ ಪ್ರಮುಖವಾದ ಹೋರಾಟವಾಗಿದೆ. ಇದು ನಮ್ಮ ದುಡಿಮೆಯ ಪಾಲನ್ನು ಕೇಳುವ ಹೋರಾಟವಾಗಿದೆ. ಇಡೀ ದೇಶದಲ್ಲಿ ನೀರು, ಕಾಡು, ಜಮೀನನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇದಕ್ಕೆ ಗಣಿ ಮಾಫಿಯಾದ ಅನ್ಯಾಯವೂ ಕೂಡ ಕಾರಣವಾಗಿದೆ. ಸಂತೋಷ್ ಹೆಗ್ಡೆಯಂತಹ ನ್ಯಾಯಮೂರ್ತಿಗಳು ಈ ಕುರಿತು ವಿಸ್ತೃತ ವರದಿ ಮಾಡಿದ್ದರೆ. ಹಾಗಾಗಿ ಬಳ್ಳಾರಿಯಂತಹ ಜಿಲ್ಲೆಯಲ್ಲಿ ಇಂತಹ ಹೋರಾಟಗಳ ಅಗತ್ಯವಿದೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪಾದಯಾತ್ರೆ ನಡೆಯುತ್ತಿದೆ.

ವಕೀಲರಾದ ಮೈತ್ರೇಯಿ ಕೃಷ್ಣನ್, ಐಟಿಐ ಕಾರ್ಮಿಕರ ಒಕ್ಕೂಟದ ಹೇಮಂತ್, ಆದಿವಾಸಿ ಸಂಘರ್ಷ ಮೋರ್ಚಾದ ಮೋಹನ್ ಸೇರಿದಂತೆ ಹೋರಾಟಕ್ಕೆ ನಟ ಚೇತನ್ ಕೂಡ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ಸಂಘಟನೆಯ ಬೆಂಬಲದೊಂದಿಗೆ ಸಂಡೂರಿನ ಎಪಿಎಂಸಿ ಮಾರುಕಟ್ಟೆಯಿಂದ ಆರಂಭವಾದ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ವಡ್ಡುವಿನಿಂದ ಇಂದು ಕಾರ್ಮಿಕರು ಹೆಜ್ಜೆ ಹಾಕಲಿದ್ದು ನಾಳೆ ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...