Homeಚಳವಳಿಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

ಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

- Advertisement -
- Advertisement -

ಸ್ವಾತಂತ್ರ್ಯಕ್ಕೂ ಮುಂಚೆ ನಾವು ಈಸ್ಟ್ ಇಂಡಿಯಾ ಕಂಪನಿಯ ಗುಲಾಮರಾಗಿದ್ದೆವು, ಆದರೆ ಸ್ವಾತಂತ್ರ್ಯ ನಂತರವೂ ಸಹ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳ ಗುಲಾಮರಾಗಿರಬೇಕೆಂದು ಸರ್ಕಾರ ಬಯಸುತ್ತಿದೆ. ಅದನ್ನು ತಪ್ಪಿಸುವುದಕ್ಕಾಗಿ ಹೋರಾಡುತ್ತಿರುವ ಗಣಿ ಕಾರ್ಮಿಕರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘವು ಸಂಡೂರಿನಿಂದ ಬಳ್ಳಾರಿವರೆಗೆ ನಡೆಸುತ್ತಿರುವ 70 ಕಿ.ಮೀಗಳ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಿಮ್ಮ ಹೋರಾಟವು ನರ್ಮದಾ ಉಳಿಸಿ ಹೋರಾಟದಂತೆಯೆ ಬಹಳ ಕಷ್ಟದಿಂದ ಕೂಡಿದೆ. ಆದರೆ ಅಷ್ಟೇ ಪ್ರಮುಖವಾದ ಹೋರಾಟವಾಗಿದೆ. ಇದು ನಮ್ಮ ದುಡಿಮೆಯ ಪಾಲನ್ನು ಕೇಳುವ ಹೋರಾಟವಾಗಿದೆ. ಇಡೀ ದೇಶದಲ್ಲಿ ನೀರು, ಕಾಡು, ಜಮೀನನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇದಕ್ಕೆ ಗಣಿ ಮಾಫಿಯಾದ ಅನ್ಯಾಯವೂ ಕೂಡ ಕಾರಣವಾಗಿದೆ. ಸಂತೋಷ್ ಹೆಗ್ಡೆಯಂತಹ ನ್ಯಾಯಮೂರ್ತಿಗಳು ಈ ಕುರಿತು ವಿಸ್ತೃತ ವರದಿ ಮಾಡಿದ್ದರೆ. ಹಾಗಾಗಿ ಬಳ್ಳಾರಿಯಂತಹ ಜಿಲ್ಲೆಯಲ್ಲಿ ಇಂತಹ ಹೋರಾಟಗಳ ಅಗತ್ಯವಿದೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪಾದಯಾತ್ರೆ ನಡೆಯುತ್ತಿದೆ.

ವಕೀಲರಾದ ಮೈತ್ರೇಯಿ ಕೃಷ್ಣನ್, ಐಟಿಐ ಕಾರ್ಮಿಕರ ಒಕ್ಕೂಟದ ಹೇಮಂತ್, ಆದಿವಾಸಿ ಸಂಘರ್ಷ ಮೋರ್ಚಾದ ಮೋಹನ್ ಸೇರಿದಂತೆ ಹೋರಾಟಕ್ಕೆ ನಟ ಚೇತನ್ ಕೂಡ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ಸಂಘಟನೆಯ ಬೆಂಬಲದೊಂದಿಗೆ ಸಂಡೂರಿನ ಎಪಿಎಂಸಿ ಮಾರುಕಟ್ಟೆಯಿಂದ ಆರಂಭವಾದ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ವಡ್ಡುವಿನಿಂದ ಇಂದು ಕಾರ್ಮಿಕರು ಹೆಜ್ಜೆ ಹಾಕಲಿದ್ದು ನಾಳೆ ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...