Homeಕರ್ನಾಟಕರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

- Advertisement -
- Advertisement -

ಸಿಡಿ ಹಗರಣದಲ್ಲಿ ಸಿಲುಕಿ ಸಚಿವ ಸಂಪುಟದಿಂದ ಹೊರಬಿದ್ದಿರುವ ಮಾಜಿ ಜಲಸಂಪನ್ಮೂಲ ಸಚಿವ ಮತ್ತು ರಾಜ್ಯ ಬಿಜೆಪಿಯ ಪ್ರಭಾವಿ ನಾಯಕ ರಮೇಶ್ ಜಾರಕಿಹೋಳಿ ಸಚಿವ ಸಂಪುಟ ಸೇರ್ಪಡೆಗೆ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಿಡಿ ಹಗರಣದಲ್ಲಿ ಅತ್ಯಾಚಾರ ಆರೋಪ ಆ ಸಂಬಂಧ ತನಿಖೆಯನ್ನು ಎದುರಿಸುತ್ತಿರುವ ರಮೇಶ್ ಜಾರಕಿಹೋಳಿಯವರು ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎಂದು ಬಿಜೆಪಿಯ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸದ ಸಂದರ್ಭದಲ್ಲಿ ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆ ವಿಷಯವನ್ನು ಪ್ರಸ್ತಾಪಿಸಲಿದ್ದೇವೆ ಎಂದು ಬಿಜೆಪಿಯ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. ಜೂನ್ 16 ಬುಧವಾರದಂದು 3 ದಿನಗಳ ಕಾಲ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೋಳಿ ವಿಚಾರ, ಮುಖ್ಯಮಂತ್ರಿ ಬದಲಾವಣೆ ಗೊಂದಲ, ಸಚಿವ ಸಂಪುಣ ವಿಸ್ತರಣೆ ಹೀಗೆ ಹಲವು ರಾಜಕೀಯ ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ಆದರೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಬೇಡಿಕೆ ಮತ್ತು ದೂರುಗಳಿಗೆ ಹೇಗೆ ಸ್ಪಂದಿಸುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ.

ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ರಮೇಶ್ ಜಾರಕಿಹೋಳಿ ಮಹತ್ವದ ಪಾತ್ರವಹಿಸಿದ್ದಾರೆ. ಈಗ ಅವರ ವಿರುದ್ಧ ಕೇಳಿ ಬಂದಿರುವ ಆರೋಪ ರಾಜಕೀಯ ಪ್ರೇರಿತವಾದದ್ದು ಮತ್ತು ಆರೋಪದಲ್ಲಿ ಯಾವುದೇ ಹುರುಳಿಲ್ಲದಿರುವುದು ಮೇಲ್ನೋಟದಲ್ಲಿಯೇ ಕಂಡುಬರುತ್ತದೆ. ಇದನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೆಸರು ಹೇಳಲಿಚ್ಚಿಸದ ಬಿಜೆಪಿ ಪ್ರಭಾವಿ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : ಮುಂಬೈ : ಪೊಲೀಸ್ ಅಧಿಕಾರಿಯ ಮೇಲೆ ಅತ್ಯಾಚಾರ- ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ  ಜನ ಶಾಸಕರಲ್ಲಿ ರಮೇಶ್ ಜಾರಕಿಹೋಳಿ ಅತ್ಯಂತ ಮುಖ್ಯವಾದ ವ್ಯಕ್ತಿ. ಹಿಂದೆ ಅವರು ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕೆಡವಿ ಬಿಜೆಪಿ ಜೊತೆ ಕೈಜೋಡಿಸಿದ್ದರು. ಸಿಡಿ ಹಗರಣದ ನಂತರ ರಮೇಶ್ ಜಾರಕಿಹೋಳಿ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಆದರೆ ತೆರೆ ಮರೆಯಲ್ಲಿ ಮಾತ್ರ ತಮ್ಮ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಬಿಜೆಪಿಯಲ್ಲಿನ ಒಂದು ವರ್ಗ ಮೊದಲಿನಿಂದಲೂ ರಮೇಶ್ ಜಾರಕಿಹೋಳಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವ ಅನೇಕರು ಇಂದಿಗೂ ರಮೇಶ್ ಜಾರಕಿಹೋಳಿಯವರನ್ನು ತಮ್ಮ ನಾಯಕರೆಂದೇ ತಿಳಿದಿದ್ದಾರೆ. ವಲಸೆ ನಾಯಕರಲ್ಲಿ ಕೆಲವರು ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪನವರಲ್ಲಿ ಜಾರಕಿಹೋಳಿ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಈ ಸಂಬಂಧ ಯಾವುದೇ ಭರವಸೆಗಳನ್ನು ನೀಡಿಲ್ಲ ಎಂದು ಹೇಳಲಾಗುತ್ತಿದೆ.

ಸಿಡಿ ಹಗರಣದಿಂದ ಸಾಕಷ್ಟು ಮುಜುಗರವನ್ನು ಅನುಭವಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿ ತಮ್ಮ ಸಚಿವ ಸಂಪುಟ ಸೇರ್ಪಡೆಯ ಕುರಿತಾಗಿಯೂ ಪ್ರತಿಕ್ರಿಯಿಸುತ್ತಿಲ್ಲ.  ಯಾವುದೇ ಪತ್ರಿಕಾ ಹೇಳಿಕೆಗಳಿಗೆ ಮತ್ತು ಸಂಪರ್ಕಕ್ಕೆ ಸಿಗುತ್ತಿಲ್ಲ. ಆದರೆ ಬಿಜೆಪಿಯ ಮೂಲಗಳ ಪ್ರಕಾರ ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ತೆರೆಮರೆಯ ಕಸರತ್ತು ನಡೆಸುತ್ತಿರುವುದಂತು ನಿಜ. ಮೂಲ ಬಿಜೆಪಿಗರ ಆಕ್ಷೇಪ, ವಲಸೆ ಸಚಿವರ ಒತ್ತಡ ಇದರ ನಡುವೆಯಲ್ಲಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆಹಾಕುತ್ತದೆ? ಸಚಿವ ಸಂಪುಟ ವಿಸ್ತರಣೆಗೆ ಸದ್ಯದಲ್ಲೇ ದಿನ ನಿಗದಿಯಾಗಲಿದೆಯೇ? ಇದೆಲ್ಲಕ್ಕೂ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್  ಸಿಂಗ್ ಬೆಂಗಳೂರು ಭೇಟಿಯನಂತರವಷ್ಟೆ ಉತ್ತರ ಸಿಗಲಿದೆ.


ಇದನ್ನೂ ಓದಿ: ಜಗತ್ತಿಗೆ ಬೋಧಿಸುವುದನ್ನು ಭಾರತದಲ್ಲಿ ಪಾಲಿಸಿ: ಮೋದಿಗೆ ಪಿ. ಚಿದಂಬರಂ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...