Homeಕರ್ನಾಟಕರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

- Advertisement -
- Advertisement -

ಸಿಡಿ ಹಗರಣದಲ್ಲಿ ಸಿಲುಕಿ ಸಚಿವ ಸಂಪುಟದಿಂದ ಹೊರಬಿದ್ದಿರುವ ಮಾಜಿ ಜಲಸಂಪನ್ಮೂಲ ಸಚಿವ ಮತ್ತು ರಾಜ್ಯ ಬಿಜೆಪಿಯ ಪ್ರಭಾವಿ ನಾಯಕ ರಮೇಶ್ ಜಾರಕಿಹೋಳಿ ಸಚಿವ ಸಂಪುಟ ಸೇರ್ಪಡೆಗೆ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಿಡಿ ಹಗರಣದಲ್ಲಿ ಅತ್ಯಾಚಾರ ಆರೋಪ ಆ ಸಂಬಂಧ ತನಿಖೆಯನ್ನು ಎದುರಿಸುತ್ತಿರುವ ರಮೇಶ್ ಜಾರಕಿಹೋಳಿಯವರು ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎಂದು ಬಿಜೆಪಿಯ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸದ ಸಂದರ್ಭದಲ್ಲಿ ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆ ವಿಷಯವನ್ನು ಪ್ರಸ್ತಾಪಿಸಲಿದ್ದೇವೆ ಎಂದು ಬಿಜೆಪಿಯ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. ಜೂನ್ 16 ಬುಧವಾರದಂದು 3 ದಿನಗಳ ಕಾಲ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೋಳಿ ವಿಚಾರ, ಮುಖ್ಯಮಂತ್ರಿ ಬದಲಾವಣೆ ಗೊಂದಲ, ಸಚಿವ ಸಂಪುಣ ವಿಸ್ತರಣೆ ಹೀಗೆ ಹಲವು ರಾಜಕೀಯ ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ಆದರೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಬೇಡಿಕೆ ಮತ್ತು ದೂರುಗಳಿಗೆ ಹೇಗೆ ಸ್ಪಂದಿಸುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ.

ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ರಮೇಶ್ ಜಾರಕಿಹೋಳಿ ಮಹತ್ವದ ಪಾತ್ರವಹಿಸಿದ್ದಾರೆ. ಈಗ ಅವರ ವಿರುದ್ಧ ಕೇಳಿ ಬಂದಿರುವ ಆರೋಪ ರಾಜಕೀಯ ಪ್ರೇರಿತವಾದದ್ದು ಮತ್ತು ಆರೋಪದಲ್ಲಿ ಯಾವುದೇ ಹುರುಳಿಲ್ಲದಿರುವುದು ಮೇಲ್ನೋಟದಲ್ಲಿಯೇ ಕಂಡುಬರುತ್ತದೆ. ಇದನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೆಸರು ಹೇಳಲಿಚ್ಚಿಸದ ಬಿಜೆಪಿ ಪ್ರಭಾವಿ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : ಮುಂಬೈ : ಪೊಲೀಸ್ ಅಧಿಕಾರಿಯ ಮೇಲೆ ಅತ್ಯಾಚಾರ- ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ  ಜನ ಶಾಸಕರಲ್ಲಿ ರಮೇಶ್ ಜಾರಕಿಹೋಳಿ ಅತ್ಯಂತ ಮುಖ್ಯವಾದ ವ್ಯಕ್ತಿ. ಹಿಂದೆ ಅವರು ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕೆಡವಿ ಬಿಜೆಪಿ ಜೊತೆ ಕೈಜೋಡಿಸಿದ್ದರು. ಸಿಡಿ ಹಗರಣದ ನಂತರ ರಮೇಶ್ ಜಾರಕಿಹೋಳಿ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಆದರೆ ತೆರೆ ಮರೆಯಲ್ಲಿ ಮಾತ್ರ ತಮ್ಮ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಬಿಜೆಪಿಯಲ್ಲಿನ ಒಂದು ವರ್ಗ ಮೊದಲಿನಿಂದಲೂ ರಮೇಶ್ ಜಾರಕಿಹೋಳಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವ ಅನೇಕರು ಇಂದಿಗೂ ರಮೇಶ್ ಜಾರಕಿಹೋಳಿಯವರನ್ನು ತಮ್ಮ ನಾಯಕರೆಂದೇ ತಿಳಿದಿದ್ದಾರೆ. ವಲಸೆ ನಾಯಕರಲ್ಲಿ ಕೆಲವರು ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪನವರಲ್ಲಿ ಜಾರಕಿಹೋಳಿ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಈ ಸಂಬಂಧ ಯಾವುದೇ ಭರವಸೆಗಳನ್ನು ನೀಡಿಲ್ಲ ಎಂದು ಹೇಳಲಾಗುತ್ತಿದೆ.

ಸಿಡಿ ಹಗರಣದಿಂದ ಸಾಕಷ್ಟು ಮುಜುಗರವನ್ನು ಅನುಭವಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿ ತಮ್ಮ ಸಚಿವ ಸಂಪುಟ ಸೇರ್ಪಡೆಯ ಕುರಿತಾಗಿಯೂ ಪ್ರತಿಕ್ರಿಯಿಸುತ್ತಿಲ್ಲ.  ಯಾವುದೇ ಪತ್ರಿಕಾ ಹೇಳಿಕೆಗಳಿಗೆ ಮತ್ತು ಸಂಪರ್ಕಕ್ಕೆ ಸಿಗುತ್ತಿಲ್ಲ. ಆದರೆ ಬಿಜೆಪಿಯ ಮೂಲಗಳ ಪ್ರಕಾರ ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ತೆರೆಮರೆಯ ಕಸರತ್ತು ನಡೆಸುತ್ತಿರುವುದಂತು ನಿಜ. ಮೂಲ ಬಿಜೆಪಿಗರ ಆಕ್ಷೇಪ, ವಲಸೆ ಸಚಿವರ ಒತ್ತಡ ಇದರ ನಡುವೆಯಲ್ಲಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆಹಾಕುತ್ತದೆ? ಸಚಿವ ಸಂಪುಟ ವಿಸ್ತರಣೆಗೆ ಸದ್ಯದಲ್ಲೇ ದಿನ ನಿಗದಿಯಾಗಲಿದೆಯೇ? ಇದೆಲ್ಲಕ್ಕೂ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್  ಸಿಂಗ್ ಬೆಂಗಳೂರು ಭೇಟಿಯನಂತರವಷ್ಟೆ ಉತ್ತರ ಸಿಗಲಿದೆ.


ಇದನ್ನೂ ಓದಿ: ಜಗತ್ತಿಗೆ ಬೋಧಿಸುವುದನ್ನು ಭಾರತದಲ್ಲಿ ಪಾಲಿಸಿ: ಮೋದಿಗೆ ಪಿ. ಚಿದಂಬರಂ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...