Homeಕರ್ನಾಟಕಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

- Advertisement -
- Advertisement -

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಕಿತ್ತು EWS ಕೋಟಾಗೆ ಸೇರಿಸುವ ಮೂಲಕ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯ ಮೇಲಿನ ಬಿಜೆಪಿ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕೂಡಲೇ ಹಿಂದುಳಿದ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಸಬೇಕು. ಇಲ್ಲದಿದ್ದಲ್ಲಿ ಬಿಜೆಪಿಯ ಅವನತಿ ಖಚಿತ ಎಂದು AISA, ASA, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟ, Collective, DVP, GIO, KVS, SIO ಮತ್ತು ಪರಿವರ್ತನ ವಿದ್ಯಾರ್ಥಿ ಸಂಘಟನೆಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ SIO ರಾಜ್ಯ ಮುಖಂಡ ಝೀಶಾನ್ ಸಿದ್ದಿಕಿ, “ಕೇಂದ್ರ ಗೃಹ ಮಂತ್ರಿಗಳಾದ ಅಮಿತ್‌ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಮುಸ್ಲಿಂಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲಾಗುತ್ತಿದೆ, ಆಂಧ್ರ ಸರ್ಕಾರ ಸಹ ರದ್ದು ಮಾಡಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಆದರೆ, ಆಂಧ್ರ ಪ್ರದೇಶದಲ್ಲಿ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ನ್ಯಾಯಾಲಯಗಳು ರದ್ದುಗೊಳಿಸಿದಕ್ಕೆ ಕಾರಣ ಮೀಸಲಾತಿಯನ್ನು ನೀಡಲು ಪಾಲಿಸಬೇಕಿದ್ದ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂಬ ಕಾರಣಗಳಿಗೆ. ಆದರೆ, ಕರ್ನಾಟಕದಲ್ಲಿ ಇದಕ್ಕೆ ಬೇರೆಯದೇ ಹಿನ್ನಲೆಯಿದೆ. ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಅವರು ಸಾಮಾಜಿಕವಾಗಿ-ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಮೀಸಲಾತಿ ನೀಡಲಾಗುತ್ತಿದೆ” ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಸ್ಲಿಂ ಸಮುದಾಯವು ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆಯೇ ಎಂಬ ಯಾವುದೇ ಆಧ್ಯಯನವನ್ನು ಕೈಗೊಳ್ಳದೆ ಮತ್ತು ಯಾವ ಸಮಿತಿಯ ಶಿಫಾರಸ್ಸಿಲ್ಲದೆ ಅವರಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಹೇಳುತ್ತಿರುವುದು ಸುಳ್ಳು. ಮುಸ್ಲಿಂಮರಿಗೆ ಮೀಸಲಾತಿಯನ್ನು ನೀಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶಿಫಾರಸ್ಸು ಮಾಡಿತ್ತು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳ್ಳು ನುಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿರಿಸಿದೆ.

ಸ್ವಾತಂತ್ರೋತ್ತರದಲ್ಲಿ ಕರ್ನಾಟಕವು ರಚಿಸಿದ ಎಲ್‌ ಜಿ ಹಾವನೂರು ಆಯೋಗವೊಂದನ್ನು ಹೊರತುಪಡಿಸಿ ಉಳಿದೆಲ್ಲಾ ಹಿಂದುಳಿದ ವರ್ಗಗಳ ಆಯೋಗಗಳು ಕೂಡ ವಿವಿಧ ಆಯಾಮಗಳನ್ನು ಆಧರಿಸಿ, ಅಧ್ಯಯನ ನಡೆಸಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಿದೆ. ಇದನ್ನೇ ನಂತರ ಸಾಚಾರ್‌ ಸಮಿತಿ ವರದಿ ಕೂಡ ಎತ್ತಿಹಿಡಿದಿದೆ ಎಂದರು ಅವರು ತಿಳಿಸಿದರು.

ಬಿಜೆಪಿ ಸರ್ಕಾರವು ಒಳಮೀಸಲಾತಿಯ ಅನುಷ್ಟಾನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಹೊಸ ಮೀಸಲಾತಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಪ್ರವರ್ಗವನ್ನು ಬದಲಿಸುವ ವಿಚಾರ, ಹೀಗೆ ಎಲ್ಲಾ ವಿಚಾರಗಳಲ್ಲಿಯೂ ಮೂರು ವರ್ಷಕ್ಕೂ ಹೆಚ್ಚು ಕಾಲ ಕಣ್ಣು ಮುಚ್ಚಿ ಕುಳಿತು ಈಗ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಉಳಿದಿರುವಾಗ ಮೀಸಲಾತಿ ನೀತಿಯನ್ನು ಬದಲಾಯಿಸಿದೆ ಎಂಬುದನ್ನು ಗಮನಿಸಿದರೆ ತಾನು ನೆಲೆಗೊಂಡಿರುವ ಏಕೈಕ ದಕ್ಷಿಣ ರಾಜ್ಯದಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೆದರಿ ಬಿಜೆಪಿ ಹೀಗೆ ಮಾಡಿದೆ ಎಂಬುದು ಸ್ಪಷ್ಟ. ಅಂದರೆ ಮೀಸಲಾತಿ ನೀತಿಯ ಹೆಸರಿನಲ್ಲಿ ಚುನಾವಣೆಯಲ್ಲಿ ವೋಟು ಪಡೆಯಲ್ಲಿಕ್ಕೆ ನಡೆಸುತ್ತಿರುವ ಪ್ರಹಸನವಿದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದು ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಮತ್ತೊಂದು ದಾಳಿ ಎಂಬುದನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಶಿಕ್ಷಣದ ಹಕ್ಕಿನ ಮೇಲಿನ ದಾಳಿ ಎಂದು ನಾವು ಅರಿತಿದ್ದೇವೆ. ಹಿಜಾಬ್‌ ಹೆಸರನಲ್ಲಿ ಗಲಭೆಯೆಬ್ಬಿಸಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಹಾಗೂ ಮೌಲಾನಾ ಆಜಾದ್‌ ನ್ಯಾಷನಲ್‌ ಫೆಲೋಷಿಪ್‌ ಮತ್ತು ಪಿ.ಹೆಚ್.ಡಿ ಸಂಶೋಧನಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿದ್ದರ ಮುಂದುವರಿಕೆಯ ಭಾಗವೇ ಇದಾಗಿದೆ ಎಂದರು.

ಸಂವಿಧಾನದ ಮೂಲ ತತ್ವವಾದ ಸಾಮಜಿಕ-ಆರ್ಥಿಕ ಹಾಗೂ ರಾಜಕೀಯ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವ ವನ್ನು ಗೌರವಿಸುವ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮತ್ತೊಂದರ ವಿರುದ್ಧ ಎತ್ತಿಕಟ್ಟಲು ಬಿಜೆಪಿಯು ನಡೆಸಿರುವ ಹುನ್ನಾರವನ್ನು ಅರಿತಿದ್ದೇವೆ ಹಾಗೂ ಕರ್ನಾಟಕದ ಜನತೆ, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಈ ಕೋಮು ಸಂಚನ್ನು ಮೀರಿ ಕುವೆಂಪು ಅವರು ಸಾರಿದ ವಿಶ್ವಮಾನವತೆಯನ್ನು ಎತ್ತಿಹಿಡಯಲಿದ್ದಾರೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದರು.

ನಮ್ಮೆಲ್ಲಾ ವಿದ್ಯಾರ್ಥಿ ಸಂಘಟನೆಗಳು, ಎಲ್ಲಾ ಸಮುದಾಯಗಳ ಜೊತೆಗೆ ಹೆಜ್ಜೆಯನ್ನಿರಿಸುತ್ತಲೇ, ಮೀಸಲಾತಿಯನ್ನೂ ಹಾಗೂ ಆ ಮೂಲಕ ಸಾಮಾಜಿಕ ನ್ಯಾಯವನ್ನೂ ಮುಸ್ಲಿಂಮರಿಗೆ ಮಾತ್ರವಲ್ಲದೇ ಕರ್ನಾಟಕದ ಪ್ರತಿಯೊಬ್ಬರ ಕೈಗೆಟಕುವಂತೆ ಮಾಡಲು ಪಣತೊಡುತ್ತೇವೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ AIFRTEಯ ಶಂಶಾಂಕ್ ಎಸ್.ಆರ್, AISAದ ಆರತ್ರಿಕ, GIOನ ಮುಬ್ಬಾರ, ಬೆಂಗಳೂರು ವಿಶ್ವಾವಿದ್ಯಾಲಯ ವಿದ್ಯಾರ್ಥಿ ಸಂಘದ ಲೋಕೇಶ್ ರಾಮ್ ಮತ್ತು ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...