Homeಕರ್ನಾಟಕಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

- Advertisement -
- Advertisement -

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಕಿತ್ತು EWS ಕೋಟಾಗೆ ಸೇರಿಸುವ ಮೂಲಕ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯ ಮೇಲಿನ ಬಿಜೆಪಿ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕೂಡಲೇ ಹಿಂದುಳಿದ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಸಬೇಕು. ಇಲ್ಲದಿದ್ದಲ್ಲಿ ಬಿಜೆಪಿಯ ಅವನತಿ ಖಚಿತ ಎಂದು AISA, ASA, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟ, Collective, DVP, GIO, KVS, SIO ಮತ್ತು ಪರಿವರ್ತನ ವಿದ್ಯಾರ್ಥಿ ಸಂಘಟನೆಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ SIO ರಾಜ್ಯ ಮುಖಂಡ ಝೀಶಾನ್ ಸಿದ್ದಿಕಿ, “ಕೇಂದ್ರ ಗೃಹ ಮಂತ್ರಿಗಳಾದ ಅಮಿತ್‌ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಮುಸ್ಲಿಂಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲಾಗುತ್ತಿದೆ, ಆಂಧ್ರ ಸರ್ಕಾರ ಸಹ ರದ್ದು ಮಾಡಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಆದರೆ, ಆಂಧ್ರ ಪ್ರದೇಶದಲ್ಲಿ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ನ್ಯಾಯಾಲಯಗಳು ರದ್ದುಗೊಳಿಸಿದಕ್ಕೆ ಕಾರಣ ಮೀಸಲಾತಿಯನ್ನು ನೀಡಲು ಪಾಲಿಸಬೇಕಿದ್ದ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂಬ ಕಾರಣಗಳಿಗೆ. ಆದರೆ, ಕರ್ನಾಟಕದಲ್ಲಿ ಇದಕ್ಕೆ ಬೇರೆಯದೇ ಹಿನ್ನಲೆಯಿದೆ. ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಅವರು ಸಾಮಾಜಿಕವಾಗಿ-ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಮೀಸಲಾತಿ ನೀಡಲಾಗುತ್ತಿದೆ” ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಸ್ಲಿಂ ಸಮುದಾಯವು ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆಯೇ ಎಂಬ ಯಾವುದೇ ಆಧ್ಯಯನವನ್ನು ಕೈಗೊಳ್ಳದೆ ಮತ್ತು ಯಾವ ಸಮಿತಿಯ ಶಿಫಾರಸ್ಸಿಲ್ಲದೆ ಅವರಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಹೇಳುತ್ತಿರುವುದು ಸುಳ್ಳು. ಮುಸ್ಲಿಂಮರಿಗೆ ಮೀಸಲಾತಿಯನ್ನು ನೀಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶಿಫಾರಸ್ಸು ಮಾಡಿತ್ತು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳ್ಳು ನುಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿರಿಸಿದೆ.

ಸ್ವಾತಂತ್ರೋತ್ತರದಲ್ಲಿ ಕರ್ನಾಟಕವು ರಚಿಸಿದ ಎಲ್‌ ಜಿ ಹಾವನೂರು ಆಯೋಗವೊಂದನ್ನು ಹೊರತುಪಡಿಸಿ ಉಳಿದೆಲ್ಲಾ ಹಿಂದುಳಿದ ವರ್ಗಗಳ ಆಯೋಗಗಳು ಕೂಡ ವಿವಿಧ ಆಯಾಮಗಳನ್ನು ಆಧರಿಸಿ, ಅಧ್ಯಯನ ನಡೆಸಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಿದೆ. ಇದನ್ನೇ ನಂತರ ಸಾಚಾರ್‌ ಸಮಿತಿ ವರದಿ ಕೂಡ ಎತ್ತಿಹಿಡಿದಿದೆ ಎಂದರು ಅವರು ತಿಳಿಸಿದರು.

ಬಿಜೆಪಿ ಸರ್ಕಾರವು ಒಳಮೀಸಲಾತಿಯ ಅನುಷ್ಟಾನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಹೊಸ ಮೀಸಲಾತಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಪ್ರವರ್ಗವನ್ನು ಬದಲಿಸುವ ವಿಚಾರ, ಹೀಗೆ ಎಲ್ಲಾ ವಿಚಾರಗಳಲ್ಲಿಯೂ ಮೂರು ವರ್ಷಕ್ಕೂ ಹೆಚ್ಚು ಕಾಲ ಕಣ್ಣು ಮುಚ್ಚಿ ಕುಳಿತು ಈಗ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಉಳಿದಿರುವಾಗ ಮೀಸಲಾತಿ ನೀತಿಯನ್ನು ಬದಲಾಯಿಸಿದೆ ಎಂಬುದನ್ನು ಗಮನಿಸಿದರೆ ತಾನು ನೆಲೆಗೊಂಡಿರುವ ಏಕೈಕ ದಕ್ಷಿಣ ರಾಜ್ಯದಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೆದರಿ ಬಿಜೆಪಿ ಹೀಗೆ ಮಾಡಿದೆ ಎಂಬುದು ಸ್ಪಷ್ಟ. ಅಂದರೆ ಮೀಸಲಾತಿ ನೀತಿಯ ಹೆಸರಿನಲ್ಲಿ ಚುನಾವಣೆಯಲ್ಲಿ ವೋಟು ಪಡೆಯಲ್ಲಿಕ್ಕೆ ನಡೆಸುತ್ತಿರುವ ಪ್ರಹಸನವಿದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದು ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಮತ್ತೊಂದು ದಾಳಿ ಎಂಬುದನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಶಿಕ್ಷಣದ ಹಕ್ಕಿನ ಮೇಲಿನ ದಾಳಿ ಎಂದು ನಾವು ಅರಿತಿದ್ದೇವೆ. ಹಿಜಾಬ್‌ ಹೆಸರನಲ್ಲಿ ಗಲಭೆಯೆಬ್ಬಿಸಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಹಾಗೂ ಮೌಲಾನಾ ಆಜಾದ್‌ ನ್ಯಾಷನಲ್‌ ಫೆಲೋಷಿಪ್‌ ಮತ್ತು ಪಿ.ಹೆಚ್.ಡಿ ಸಂಶೋಧನಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿದ್ದರ ಮುಂದುವರಿಕೆಯ ಭಾಗವೇ ಇದಾಗಿದೆ ಎಂದರು.

ಸಂವಿಧಾನದ ಮೂಲ ತತ್ವವಾದ ಸಾಮಜಿಕ-ಆರ್ಥಿಕ ಹಾಗೂ ರಾಜಕೀಯ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವ ವನ್ನು ಗೌರವಿಸುವ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮತ್ತೊಂದರ ವಿರುದ್ಧ ಎತ್ತಿಕಟ್ಟಲು ಬಿಜೆಪಿಯು ನಡೆಸಿರುವ ಹುನ್ನಾರವನ್ನು ಅರಿತಿದ್ದೇವೆ ಹಾಗೂ ಕರ್ನಾಟಕದ ಜನತೆ, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಈ ಕೋಮು ಸಂಚನ್ನು ಮೀರಿ ಕುವೆಂಪು ಅವರು ಸಾರಿದ ವಿಶ್ವಮಾನವತೆಯನ್ನು ಎತ್ತಿಹಿಡಯಲಿದ್ದಾರೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದರು.

ನಮ್ಮೆಲ್ಲಾ ವಿದ್ಯಾರ್ಥಿ ಸಂಘಟನೆಗಳು, ಎಲ್ಲಾ ಸಮುದಾಯಗಳ ಜೊತೆಗೆ ಹೆಜ್ಜೆಯನ್ನಿರಿಸುತ್ತಲೇ, ಮೀಸಲಾತಿಯನ್ನೂ ಹಾಗೂ ಆ ಮೂಲಕ ಸಾಮಾಜಿಕ ನ್ಯಾಯವನ್ನೂ ಮುಸ್ಲಿಂಮರಿಗೆ ಮಾತ್ರವಲ್ಲದೇ ಕರ್ನಾಟಕದ ಪ್ರತಿಯೊಬ್ಬರ ಕೈಗೆಟಕುವಂತೆ ಮಾಡಲು ಪಣತೊಡುತ್ತೇವೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ AIFRTEಯ ಶಂಶಾಂಕ್ ಎಸ್.ಆರ್, AISAದ ಆರತ್ರಿಕ, GIOನ ಮುಬ್ಬಾರ, ಬೆಂಗಳೂರು ವಿಶ್ವಾವಿದ್ಯಾಲಯ ವಿದ್ಯಾರ್ಥಿ ಸಂಘದ ಲೋಕೇಶ್ ರಾಮ್ ಮತ್ತು ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...