Homeಕರ್ನಾಟಕಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

- Advertisement -
- Advertisement -

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಕಿತ್ತು EWS ಕೋಟಾಗೆ ಸೇರಿಸುವ ಮೂಲಕ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯ ಮೇಲಿನ ಬಿಜೆಪಿ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕೂಡಲೇ ಹಿಂದುಳಿದ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಸಬೇಕು. ಇಲ್ಲದಿದ್ದಲ್ಲಿ ಬಿಜೆಪಿಯ ಅವನತಿ ಖಚಿತ ಎಂದು AISA, ASA, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟ, Collective, DVP, GIO, KVS, SIO ಮತ್ತು ಪರಿವರ್ತನ ವಿದ್ಯಾರ್ಥಿ ಸಂಘಟನೆಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ SIO ರಾಜ್ಯ ಮುಖಂಡ ಝೀಶಾನ್ ಸಿದ್ದಿಕಿ, “ಕೇಂದ್ರ ಗೃಹ ಮಂತ್ರಿಗಳಾದ ಅಮಿತ್‌ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಮುಸ್ಲಿಂಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲಾಗುತ್ತಿದೆ, ಆಂಧ್ರ ಸರ್ಕಾರ ಸಹ ರದ್ದು ಮಾಡಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಆದರೆ, ಆಂಧ್ರ ಪ್ರದೇಶದಲ್ಲಿ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ನ್ಯಾಯಾಲಯಗಳು ರದ್ದುಗೊಳಿಸಿದಕ್ಕೆ ಕಾರಣ ಮೀಸಲಾತಿಯನ್ನು ನೀಡಲು ಪಾಲಿಸಬೇಕಿದ್ದ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂಬ ಕಾರಣಗಳಿಗೆ. ಆದರೆ, ಕರ್ನಾಟಕದಲ್ಲಿ ಇದಕ್ಕೆ ಬೇರೆಯದೇ ಹಿನ್ನಲೆಯಿದೆ. ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಅವರು ಸಾಮಾಜಿಕವಾಗಿ-ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಮೀಸಲಾತಿ ನೀಡಲಾಗುತ್ತಿದೆ” ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಸ್ಲಿಂ ಸಮುದಾಯವು ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆಯೇ ಎಂಬ ಯಾವುದೇ ಆಧ್ಯಯನವನ್ನು ಕೈಗೊಳ್ಳದೆ ಮತ್ತು ಯಾವ ಸಮಿತಿಯ ಶಿಫಾರಸ್ಸಿಲ್ಲದೆ ಅವರಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಹೇಳುತ್ತಿರುವುದು ಸುಳ್ಳು. ಮುಸ್ಲಿಂಮರಿಗೆ ಮೀಸಲಾತಿಯನ್ನು ನೀಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶಿಫಾರಸ್ಸು ಮಾಡಿತ್ತು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳ್ಳು ನುಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿರಿಸಿದೆ.

ಸ್ವಾತಂತ್ರೋತ್ತರದಲ್ಲಿ ಕರ್ನಾಟಕವು ರಚಿಸಿದ ಎಲ್‌ ಜಿ ಹಾವನೂರು ಆಯೋಗವೊಂದನ್ನು ಹೊರತುಪಡಿಸಿ ಉಳಿದೆಲ್ಲಾ ಹಿಂದುಳಿದ ವರ್ಗಗಳ ಆಯೋಗಗಳು ಕೂಡ ವಿವಿಧ ಆಯಾಮಗಳನ್ನು ಆಧರಿಸಿ, ಅಧ್ಯಯನ ನಡೆಸಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಿದೆ. ಇದನ್ನೇ ನಂತರ ಸಾಚಾರ್‌ ಸಮಿತಿ ವರದಿ ಕೂಡ ಎತ್ತಿಹಿಡಿದಿದೆ ಎಂದರು ಅವರು ತಿಳಿಸಿದರು.

ಬಿಜೆಪಿ ಸರ್ಕಾರವು ಒಳಮೀಸಲಾತಿಯ ಅನುಷ್ಟಾನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಹೊಸ ಮೀಸಲಾತಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಪ್ರವರ್ಗವನ್ನು ಬದಲಿಸುವ ವಿಚಾರ, ಹೀಗೆ ಎಲ್ಲಾ ವಿಚಾರಗಳಲ್ಲಿಯೂ ಮೂರು ವರ್ಷಕ್ಕೂ ಹೆಚ್ಚು ಕಾಲ ಕಣ್ಣು ಮುಚ್ಚಿ ಕುಳಿತು ಈಗ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಉಳಿದಿರುವಾಗ ಮೀಸಲಾತಿ ನೀತಿಯನ್ನು ಬದಲಾಯಿಸಿದೆ ಎಂಬುದನ್ನು ಗಮನಿಸಿದರೆ ತಾನು ನೆಲೆಗೊಂಡಿರುವ ಏಕೈಕ ದಕ್ಷಿಣ ರಾಜ್ಯದಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೆದರಿ ಬಿಜೆಪಿ ಹೀಗೆ ಮಾಡಿದೆ ಎಂಬುದು ಸ್ಪಷ್ಟ. ಅಂದರೆ ಮೀಸಲಾತಿ ನೀತಿಯ ಹೆಸರಿನಲ್ಲಿ ಚುನಾವಣೆಯಲ್ಲಿ ವೋಟು ಪಡೆಯಲ್ಲಿಕ್ಕೆ ನಡೆಸುತ್ತಿರುವ ಪ್ರಹಸನವಿದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದು ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಮತ್ತೊಂದು ದಾಳಿ ಎಂಬುದನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಶಿಕ್ಷಣದ ಹಕ್ಕಿನ ಮೇಲಿನ ದಾಳಿ ಎಂದು ನಾವು ಅರಿತಿದ್ದೇವೆ. ಹಿಜಾಬ್‌ ಹೆಸರನಲ್ಲಿ ಗಲಭೆಯೆಬ್ಬಿಸಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಹಾಗೂ ಮೌಲಾನಾ ಆಜಾದ್‌ ನ್ಯಾಷನಲ್‌ ಫೆಲೋಷಿಪ್‌ ಮತ್ತು ಪಿ.ಹೆಚ್.ಡಿ ಸಂಶೋಧನಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿದ್ದರ ಮುಂದುವರಿಕೆಯ ಭಾಗವೇ ಇದಾಗಿದೆ ಎಂದರು.

ಸಂವಿಧಾನದ ಮೂಲ ತತ್ವವಾದ ಸಾಮಜಿಕ-ಆರ್ಥಿಕ ಹಾಗೂ ರಾಜಕೀಯ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವ ವನ್ನು ಗೌರವಿಸುವ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮತ್ತೊಂದರ ವಿರುದ್ಧ ಎತ್ತಿಕಟ್ಟಲು ಬಿಜೆಪಿಯು ನಡೆಸಿರುವ ಹುನ್ನಾರವನ್ನು ಅರಿತಿದ್ದೇವೆ ಹಾಗೂ ಕರ್ನಾಟಕದ ಜನತೆ, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಈ ಕೋಮು ಸಂಚನ್ನು ಮೀರಿ ಕುವೆಂಪು ಅವರು ಸಾರಿದ ವಿಶ್ವಮಾನವತೆಯನ್ನು ಎತ್ತಿಹಿಡಯಲಿದ್ದಾರೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದರು.

ನಮ್ಮೆಲ್ಲಾ ವಿದ್ಯಾರ್ಥಿ ಸಂಘಟನೆಗಳು, ಎಲ್ಲಾ ಸಮುದಾಯಗಳ ಜೊತೆಗೆ ಹೆಜ್ಜೆಯನ್ನಿರಿಸುತ್ತಲೇ, ಮೀಸಲಾತಿಯನ್ನೂ ಹಾಗೂ ಆ ಮೂಲಕ ಸಾಮಾಜಿಕ ನ್ಯಾಯವನ್ನೂ ಮುಸ್ಲಿಂಮರಿಗೆ ಮಾತ್ರವಲ್ಲದೇ ಕರ್ನಾಟಕದ ಪ್ರತಿಯೊಬ್ಬರ ಕೈಗೆಟಕುವಂತೆ ಮಾಡಲು ಪಣತೊಡುತ್ತೇವೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ AIFRTEಯ ಶಂಶಾಂಕ್ ಎಸ್.ಆರ್, AISAದ ಆರತ್ರಿಕ, GIOನ ಮುಬ್ಬಾರ, ಬೆಂಗಳೂರು ವಿಶ್ವಾವಿದ್ಯಾಲಯ ವಿದ್ಯಾರ್ಥಿ ಸಂಘದ ಲೋಕೇಶ್ ರಾಮ್ ಮತ್ತು ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...