Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...