Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...