Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...