Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...