Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...