Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...