Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...