Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...