Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...