Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...