Homeಚಳವಳಿವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

ವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

- Advertisement -
- Advertisement -

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ಸರ್ಕಾರ ತಿರಸ್ಕರಿಸಿದ್ದು, ಈ ರಾಜೀನಾಮೆ ಮಾನ್ಯವಾಗಿಲ್ಲ ಎಂದು ಹೇಳಿದೆ. ರಾಜೀನಾಮೆಗಳನ್ನು ಸೇವಾ ನಿಯಮಗಳ ಪ್ರಕಾರ ಪ್ರತ್ಯೇಕವಾಗಿ ಸಲ್ಲಿಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರ ಶನಿವಾರ ಹೇಳಿದೆ. ವೈದ್ಯರ ಸಾಮೂಹಿಕ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಈ ಆಸ್ಪತ್ರೆಗಳ ವೈದ್ಯರು ಕೂಡ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಅವರು ಸಾಮೂಹಿಕ ರಾಜೀನಾಮೆಗಳನ್ನು ಸರ್ಕಾರ ಅಂಗೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜೀನಾಮೆಗಳು ನಿಯಮ ಪುಸ್ತಕದ ಪ್ರಕಾರ ಉದ್ಯೋಗಿ ಮತ್ತು ಉದ್ಯೋಗದಾತರ ನಡುವಿನ ವೈಯಕ್ತಿಕ ವಿಷಯವಾಗಿದೆ. ಈ ಸಾಮೂಹಿಕ ಪತ್ರಗಳಿಗೆ ಯಾವುದೇ ಕಾನೂನು ಮೌಲ್ಯವಿಲ್ಲ” ಎಂದು ಬಂಡೋಪಾಧ್ಯಾಯ ಹೇಳಿದರು, ಈ ರಾಜೀನಾಮೆಗಳನ್ನು “ತಪ್ಪು ಗ್ರಹಿಕೆ” ಎಂದು ಅವರು ತಳ್ಳಿಹಾಕಿದ್ದಾರೆ.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

“ನಾವು ವಿವಿಧ ಸರ್ಕಾರಿ ಆಸ್ಪತ್ರೆಗಳಿಂದ ಬೇರೆ ಬೇರೆ ಪತ್ರವನ್ನು ಸ್ವೀಕರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ. ಸಾಮೂಹಿಕ ರಾಜೀನಾಮೆಗಳು ಕಾನೂನುಬದ್ಧವಾಗಿ ಮಾನ್ಯವಾಗಿಲ್ಲ ಎಂದು ಸರ್ಕಾರವು ಹೇಳುತ್ತಿದೆ. ಅವುಗಳನ್ನು ವೈಯಕ್ತಿಕ ಆಧಾರದ ಮೇಲೆ ಸಲ್ಲಿಸಲಾಗಿಲ್ಲ ಎಂದು ಸರ್ಕಾರ ಹೇಳಿದೆ.

ಈ ವಾರದ ಆರಂಭದಲ್ಲಿ, ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಹಿರಿಯ ವೈದ್ಯರ ಗುಂಪು ತಮ್ಮ ಪ್ರತಿಭಟನಾ ನಿರತ ಕಿರಿಯ ಸಹೋದ್ಯೋಗಿಗಳಿಗೆ ಬೆಂಬಲವಾಗಿ ಸಾಮೂಹಿಕವಾಗಿ ಸಹಿ ಮಾಡಿದ “ಸಾಮೂಹಿಕ ರಾಜೀನಾಮೆ” ಪತ್ರವನ್ನು ಕಳುಹಿಸಿತ್ತು. ತರುವಾಯ, ಇದೇ ರೀತಿಯ ಪತ್ರಗಳನ್ನು ಇತರ ಸರ್ಕಾರಿ ಆಸ್ಪತ್ರೆಗಳಿಂದ ವೈದ್ಯರು ಕಳುಹಿಸಿದ್ದಾರೆ.

ಹತ್ಯೆಗೀಡಾದ ತಮ್ಮ ಸಹೋದ್ಯೋಗಿಗೆ ನ್ಯಾಯ, ರಾಜ್ಯ ಆರೋಗ್ಯ ಕಾರ್ಯದರ್ಶಿ ರಾಜೀನಾಮೆ, ಕೆಲಸದ ಸ್ಥಳದಲ್ಲಿ ಭದ್ರತೆ ಹೆಚ್ಚಿಸುವಂತೆ ಒತ್ತಾಯಿಸಿ ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಆಮರಣ ಉಪವಾಸ ನಡೆಸುತ್ತಿದ್ದಾರೆ.

ವಿಡಿಯೊ ನೋಡಿ: ನಮಗೆ ನೆಲೆ ಇಲ್ಲವಾಗಿದೆ, ಒಳಮೀಸಲಾತಿ ಜಾರಿಯಾಗಲಿ; ಅಲೆಮಾರಿ ಮುಖಂಡ ಭೀಮಸಿ ಘಂಟಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...