Homeಚಳವಳಿವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

ವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

- Advertisement -
- Advertisement -

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ಸರ್ಕಾರ ತಿರಸ್ಕರಿಸಿದ್ದು, ಈ ರಾಜೀನಾಮೆ ಮಾನ್ಯವಾಗಿಲ್ಲ ಎಂದು ಹೇಳಿದೆ. ರಾಜೀನಾಮೆಗಳನ್ನು ಸೇವಾ ನಿಯಮಗಳ ಪ್ರಕಾರ ಪ್ರತ್ಯೇಕವಾಗಿ ಸಲ್ಲಿಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರ ಶನಿವಾರ ಹೇಳಿದೆ. ವೈದ್ಯರ ಸಾಮೂಹಿಕ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಈ ಆಸ್ಪತ್ರೆಗಳ ವೈದ್ಯರು ಕೂಡ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಅವರು ಸಾಮೂಹಿಕ ರಾಜೀನಾಮೆಗಳನ್ನು ಸರ್ಕಾರ ಅಂಗೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜೀನಾಮೆಗಳು ನಿಯಮ ಪುಸ್ತಕದ ಪ್ರಕಾರ ಉದ್ಯೋಗಿ ಮತ್ತು ಉದ್ಯೋಗದಾತರ ನಡುವಿನ ವೈಯಕ್ತಿಕ ವಿಷಯವಾಗಿದೆ. ಈ ಸಾಮೂಹಿಕ ಪತ್ರಗಳಿಗೆ ಯಾವುದೇ ಕಾನೂನು ಮೌಲ್ಯವಿಲ್ಲ” ಎಂದು ಬಂಡೋಪಾಧ್ಯಾಯ ಹೇಳಿದರು, ಈ ರಾಜೀನಾಮೆಗಳನ್ನು “ತಪ್ಪು ಗ್ರಹಿಕೆ” ಎಂದು ಅವರು ತಳ್ಳಿಹಾಕಿದ್ದಾರೆ.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

“ನಾವು ವಿವಿಧ ಸರ್ಕಾರಿ ಆಸ್ಪತ್ರೆಗಳಿಂದ ಬೇರೆ ಬೇರೆ ಪತ್ರವನ್ನು ಸ್ವೀಕರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ. ಸಾಮೂಹಿಕ ರಾಜೀನಾಮೆಗಳು ಕಾನೂನುಬದ್ಧವಾಗಿ ಮಾನ್ಯವಾಗಿಲ್ಲ ಎಂದು ಸರ್ಕಾರವು ಹೇಳುತ್ತಿದೆ. ಅವುಗಳನ್ನು ವೈಯಕ್ತಿಕ ಆಧಾರದ ಮೇಲೆ ಸಲ್ಲಿಸಲಾಗಿಲ್ಲ ಎಂದು ಸರ್ಕಾರ ಹೇಳಿದೆ.

ಈ ವಾರದ ಆರಂಭದಲ್ಲಿ, ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಹಿರಿಯ ವೈದ್ಯರ ಗುಂಪು ತಮ್ಮ ಪ್ರತಿಭಟನಾ ನಿರತ ಕಿರಿಯ ಸಹೋದ್ಯೋಗಿಗಳಿಗೆ ಬೆಂಬಲವಾಗಿ ಸಾಮೂಹಿಕವಾಗಿ ಸಹಿ ಮಾಡಿದ “ಸಾಮೂಹಿಕ ರಾಜೀನಾಮೆ” ಪತ್ರವನ್ನು ಕಳುಹಿಸಿತ್ತು. ತರುವಾಯ, ಇದೇ ರೀತಿಯ ಪತ್ರಗಳನ್ನು ಇತರ ಸರ್ಕಾರಿ ಆಸ್ಪತ್ರೆಗಳಿಂದ ವೈದ್ಯರು ಕಳುಹಿಸಿದ್ದಾರೆ.

ಹತ್ಯೆಗೀಡಾದ ತಮ್ಮ ಸಹೋದ್ಯೋಗಿಗೆ ನ್ಯಾಯ, ರಾಜ್ಯ ಆರೋಗ್ಯ ಕಾರ್ಯದರ್ಶಿ ರಾಜೀನಾಮೆ, ಕೆಲಸದ ಸ್ಥಳದಲ್ಲಿ ಭದ್ರತೆ ಹೆಚ್ಚಿಸುವಂತೆ ಒತ್ತಾಯಿಸಿ ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಆಮರಣ ಉಪವಾಸ ನಡೆಸುತ್ತಿದ್ದಾರೆ.

ವಿಡಿಯೊ ನೋಡಿ: ನಮಗೆ ನೆಲೆ ಇಲ್ಲವಾಗಿದೆ, ಒಳಮೀಸಲಾತಿ ಜಾರಿಯಾಗಲಿ; ಅಲೆಮಾರಿ ಮುಖಂಡ ಭೀಮಸಿ ಘಂಟಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...