HomeಮುಖಪುಟRSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ತಜ್ಞರಲ್ಲದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ ಜೋರು ಸದ್ದು ಕೇಳಿಬಂದಿದೆ. #RejectRSSTextBooks #RejectBrahminTextBooks ಎಂಬ ಹ್ಯಾಷ್‌ಟ್ಯಾಗ್‌ಗಳು ಭಾರತ ಮಟ್ಟದಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಪಠ್ಯಪುಸ್ತಕ ಸಮಿತಿಯಲ್ಲಿ ಇರುವವರು ಎಲ್ಲರೂ ಬ್ರಾಹ್ಮಣರೇ ಆಗಿದ್ದಾರೆ. 09 ಜನ ಬ್ರಾಹ್ಮಣ ಲೇಖಕರ ಪಠ್ಯ ಸೇರಿಸಲಾಗಿದೆ. 06 ಜನ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಜೀವನದುದ್ದಕ್ಕೂ ಸುಳ್ಳನ್ನೇ ಹೇಳಿಕೊಂಡು ಬಂದ ಚಕ್ರವರ್ತಿ ಸೂಲಿಬೆಲೆ ಪಠ್ಯ ಸೇರಿಸುವ ಮೂಲಕ ಮಕ್ಕಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಟ್ರೋಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷನನ್ನಾಗಿ ನೇಮಿಸಿದ್ದಾಗಲೇ ಕರ್ನಾಟಕ ಮರ್ಯಾದೆ ಹಾಳಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಟ್ವಿಟರ್‌ನಲ್ಲಿ #RejectRSSTextBooks #RejectBrahminTextBooks ಹ್ಯಾಷ್‌ಟ್ಯಾಗ್‌ಗಳು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಆಗಿದ್ದು, ಭಾರತ ಮಟ್ಟದಲ್ಲಿ ಟ್ರೆಂಡ್ ಆಗುತ್ತಿವೆ.

ವಿದ್ಯಾರ್ಥಿಗಳು ಕಲಿಯುವ ಇತಿಹಾಸದ ಪಠ್ಯಪುಸ್ತಕಗಳು ನಾಡಿನ ಭವಿಷ್ಯತ್ತಿಗೆ ಮಾರಕವಾಗಬಾರದು, ಪೂರಕವಾಗಿರಬೇಕು. ಹಿಂಸೆ, ದ್ವೇಷ, ಅಸೂಯೆಗಳ ಪುಷ್ಠಿಕರಿಸುವ ವೈದೀಕರಣವನ್ನ ಖಂಡಿಸಿಬೇಕಿದೆ. ಕನ್ನಡದ ಅಸ್ಮಿತೆಗೆ ಧಕ್ಕೆ ತರುವ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ತಡೆ ನೀಡಬೇಕು #RejectRSSTextBooks ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್‌ರವರು ಟ್ವೀಟ್ ಮಾಡಿದ್ದಾರೆ.

RSS ಮತ್ತು ನಕಲಿ ದೇಶಪ್ರೇಮಿಗಳನ್ನು ಪಠ್ಯದೊಳಗೆ ಸೇರಿಸಿ ಅವರ ವಿಷಕಾರಿ ನೀತಿಗಳನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ಸರ್ಕಾರಕ್ಕೆ ಯಾವುದರ ಬಗ್ಗೆಯೂ ಸ್ಪಷ್ಟತೆ ತಿಳುವಳಿಕೆ ಇಲ್ಲ. ಇಂತಹ ಅಪದ್ದಗಳಿಗೆ ಕಾರಣವಾಗಿರುವ ಸಚಿವ ಬಿ.ಸಿ ನಾಗೇಶ್ ಅಸಮರ್ಥರಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಉತ್ತೇಜಿಸುತ್ತಿದ್ದಾರೆ #RejectRSSTextBooks ಎಂದು ಮಾಜಿ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಆಧುನಿಕ ಶಿಕ್ಷಣವನ್ನು ತಂದುಕೊಟ್ಟವರು ಕ್ರಿಶ್ಚಿಯನ್ನರು. ಕರ್ನಾಟಕವನ್ನು ಜಾಗತಿಕ ಭೂಪಟಕ್ಕೆ ಸೇರಿಸಿದವರು ಮುಸ್ಲಿಮರು. ಕರ್ನಾಟಕದ ಮೂಲನಿವಾಸಿಗಳು ದಲಿತರು. ಪಠ್ಯಪುಸ್ತಕ ರಚನೆ ಮಾಡುವಾಗ ಸಮಿತಿಯಲ್ಲಿ ಇವರು ಇರಬೇಕಾದ್ದು ಅಗತ್ಯ. ಮಕ್ಕಳಿಗೆ ಜನಾಂಗ ದ್ವೇಷ ಕಲಿಸಬಾರದು #RejectRSSTextBooks #RejectBrahminTextBooks ಎಂದು ಹಿರಿಯ ಚಿಂತಕರು ಮತ್ತು ಜೆಎನ್‌ಯು ಕನ್ನಡ ಪೀಠದ ಅಧ್ಯಕ್ಷರಾಗಿದ್ದ ಪುರುಷೋತ್ತಮ ಬಿಳಿಮಲೆಯವರು ಬರೆದಿದ್ದಾರೆ.

ಕನ್ನಡ ಮಕ್ಕಳು ಓದಬೇಕಿರುವುದು ಸಿದ್ದಲಿಂಗಯ್ಯನವರ ಬಂಡಾಯದ ಹಾಡುಗಳನ್ನು. ಸಂಸ್ಕಾರದ ಹೆಸರಲ್ಲಿ ಬರೀ ವೈದಿಕ ಆಚರಣೆಗಳು, ನಂಬಿಕೆಗಳನ್ನೇ ಕನ್ನಡ ಮಕ್ಕಳಿಗೆ ಕಲಿಸಿದರೆ ಅದು ತಪ್ಪು. ಸಂಸ್ಕಾರ ಬರೀ ಬ್ರಾಹ್ಮಣರಿಗಶ್ಟೇ ಇದೆಯಾ? ಇದೊಂದು ಹೊಣೆಗೇಡಿ ಪುರೋಹಿತಶಾಹಿ ಸರಕಾರ ಎಂದು ಚೈತನ್ಯ ಗೌಡ ಎಂಬುವವರು ಬರೆದಿದ್ದಾರೆ.

ಅರವಿಂದ ಮಾಲಗತ್ತಿಯವರ ಪದ್ಯವನ್ನು ಕಿತ್ತುಹಾಕಲಾಗಿದೆ ಎಂಬುದಷ್ಟೇ ಮುಖ್ಯ ವಿಷಯವಲ್ಲ, ಕಿತ್ತು ಹಾಕಿರುವುದು ಬುದ್ಧನ ಕುರಿತ ಪದ್ಯ. ಕ್ರೂರ ಜನಾಂಗೀಯವಾದಿಗಳಷ್ಟೇ ಹೀಗೆ ಮಾಡಬಲ್ಲರು ಎಂದು ಹೋರಾಟಗಾರರಾದ ದಿನೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸರ್ವಜನಾಂಗದ ಶಾಂತಿಯ ಬೀಡಾದ ಕರ್ನಾಟಕದ ಮಕ್ಕಳಿಗೆ ಒಳ್ಳೆಯ ಪಠ್ಯಪುಸ್ತಕ ಕೊಡುವಂಥ ಬಲಪಂಥೀಯ ವಿದ್ವಾಂಸರನ್ನು ಹುಡುಕಲು ಸರಕಾರಕ್ಕೆ ಅಸಾಧ್ಯವಾದುದು ಅವರ ಬೌದ್ಧಿಕ ದಾರಿದ್ರ್ಯವನ್ನು ಸೂಚಿಸುವುದೇ? ಚಕ್ರತೀರ್ಥ ಬಿಟ್ಟರೆ ಅವರಲ್ಲಿ ಯಾರೂ ಇಲ್ಲವೇ? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Twitter system is not voice of public..
    It’s RSS or any it sd be truth in calabash.. not appraisal of sm wrong history.
    Be courageous to know the real fact instead of trying to divide Brahman,Muslim,dalit etc..
    Don’t try to fill ur bank appraising anti communists.
    Twitter Andolan is to have good dreams by blaming truth

  2. Since 2014-15 this nation is witnessing intolerance . Brahminocracy , Brahmin egimony have ruined the 7 decade old Democracy.
    Textbook committee is luring Brahminical lessons into the Academic curriculum is highly condemnable.
    Karnataka education minister Mr. Nagesh must resign immediately for dropping some of the historical patriots lessons from kannada textbooks.
    Reject out right RSS textbooks…….

  3. What a shame! Although we call ourselves citizens of 21st century, we behave as if we never went through any civilization. We are to teach that love conquerors and hate destroys. Unfortunately, hate is become more sweeter than genuine love. People of goodwill please help each other to build a better society by electing sound minded people.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...