HomeಮುಖಪುಟRSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ತಜ್ಞರಲ್ಲದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ ಜೋರು ಸದ್ದು ಕೇಳಿಬಂದಿದೆ. #RejectRSSTextBooks #RejectBrahminTextBooks ಎಂಬ ಹ್ಯಾಷ್‌ಟ್ಯಾಗ್‌ಗಳು ಭಾರತ ಮಟ್ಟದಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಪಠ್ಯಪುಸ್ತಕ ಸಮಿತಿಯಲ್ಲಿ ಇರುವವರು ಎಲ್ಲರೂ ಬ್ರಾಹ್ಮಣರೇ ಆಗಿದ್ದಾರೆ. 09 ಜನ ಬ್ರಾಹ್ಮಣ ಲೇಖಕರ ಪಠ್ಯ ಸೇರಿಸಲಾಗಿದೆ. 06 ಜನ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಜೀವನದುದ್ದಕ್ಕೂ ಸುಳ್ಳನ್ನೇ ಹೇಳಿಕೊಂಡು ಬಂದ ಚಕ್ರವರ್ತಿ ಸೂಲಿಬೆಲೆ ಪಠ್ಯ ಸೇರಿಸುವ ಮೂಲಕ ಮಕ್ಕಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಟ್ರೋಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷನನ್ನಾಗಿ ನೇಮಿಸಿದ್ದಾಗಲೇ ಕರ್ನಾಟಕ ಮರ್ಯಾದೆ ಹಾಳಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಟ್ವಿಟರ್‌ನಲ್ಲಿ #RejectRSSTextBooks #RejectBrahminTextBooks ಹ್ಯಾಷ್‌ಟ್ಯಾಗ್‌ಗಳು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಆಗಿದ್ದು, ಭಾರತ ಮಟ್ಟದಲ್ಲಿ ಟ್ರೆಂಡ್ ಆಗುತ್ತಿವೆ.

ವಿದ್ಯಾರ್ಥಿಗಳು ಕಲಿಯುವ ಇತಿಹಾಸದ ಪಠ್ಯಪುಸ್ತಕಗಳು ನಾಡಿನ ಭವಿಷ್ಯತ್ತಿಗೆ ಮಾರಕವಾಗಬಾರದು, ಪೂರಕವಾಗಿರಬೇಕು. ಹಿಂಸೆ, ದ್ವೇಷ, ಅಸೂಯೆಗಳ ಪುಷ್ಠಿಕರಿಸುವ ವೈದೀಕರಣವನ್ನ ಖಂಡಿಸಿಬೇಕಿದೆ. ಕನ್ನಡದ ಅಸ್ಮಿತೆಗೆ ಧಕ್ಕೆ ತರುವ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ತಡೆ ನೀಡಬೇಕು #RejectRSSTextBooks ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್‌ರವರು ಟ್ವೀಟ್ ಮಾಡಿದ್ದಾರೆ.

RSS ಮತ್ತು ನಕಲಿ ದೇಶಪ್ರೇಮಿಗಳನ್ನು ಪಠ್ಯದೊಳಗೆ ಸೇರಿಸಿ ಅವರ ವಿಷಕಾರಿ ನೀತಿಗಳನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ಸರ್ಕಾರಕ್ಕೆ ಯಾವುದರ ಬಗ್ಗೆಯೂ ಸ್ಪಷ್ಟತೆ ತಿಳುವಳಿಕೆ ಇಲ್ಲ. ಇಂತಹ ಅಪದ್ದಗಳಿಗೆ ಕಾರಣವಾಗಿರುವ ಸಚಿವ ಬಿ.ಸಿ ನಾಗೇಶ್ ಅಸಮರ್ಥರಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಉತ್ತೇಜಿಸುತ್ತಿದ್ದಾರೆ #RejectRSSTextBooks ಎಂದು ಮಾಜಿ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಆಧುನಿಕ ಶಿಕ್ಷಣವನ್ನು ತಂದುಕೊಟ್ಟವರು ಕ್ರಿಶ್ಚಿಯನ್ನರು. ಕರ್ನಾಟಕವನ್ನು ಜಾಗತಿಕ ಭೂಪಟಕ್ಕೆ ಸೇರಿಸಿದವರು ಮುಸ್ಲಿಮರು. ಕರ್ನಾಟಕದ ಮೂಲನಿವಾಸಿಗಳು ದಲಿತರು. ಪಠ್ಯಪುಸ್ತಕ ರಚನೆ ಮಾಡುವಾಗ ಸಮಿತಿಯಲ್ಲಿ ಇವರು ಇರಬೇಕಾದ್ದು ಅಗತ್ಯ. ಮಕ್ಕಳಿಗೆ ಜನಾಂಗ ದ್ವೇಷ ಕಲಿಸಬಾರದು #RejectRSSTextBooks #RejectBrahminTextBooks ಎಂದು ಹಿರಿಯ ಚಿಂತಕರು ಮತ್ತು ಜೆಎನ್‌ಯು ಕನ್ನಡ ಪೀಠದ ಅಧ್ಯಕ್ಷರಾಗಿದ್ದ ಪುರುಷೋತ್ತಮ ಬಿಳಿಮಲೆಯವರು ಬರೆದಿದ್ದಾರೆ.

ಕನ್ನಡ ಮಕ್ಕಳು ಓದಬೇಕಿರುವುದು ಸಿದ್ದಲಿಂಗಯ್ಯನವರ ಬಂಡಾಯದ ಹಾಡುಗಳನ್ನು. ಸಂಸ್ಕಾರದ ಹೆಸರಲ್ಲಿ ಬರೀ ವೈದಿಕ ಆಚರಣೆಗಳು, ನಂಬಿಕೆಗಳನ್ನೇ ಕನ್ನಡ ಮಕ್ಕಳಿಗೆ ಕಲಿಸಿದರೆ ಅದು ತಪ್ಪು. ಸಂಸ್ಕಾರ ಬರೀ ಬ್ರಾಹ್ಮಣರಿಗಶ್ಟೇ ಇದೆಯಾ? ಇದೊಂದು ಹೊಣೆಗೇಡಿ ಪುರೋಹಿತಶಾಹಿ ಸರಕಾರ ಎಂದು ಚೈತನ್ಯ ಗೌಡ ಎಂಬುವವರು ಬರೆದಿದ್ದಾರೆ.

ಅರವಿಂದ ಮಾಲಗತ್ತಿಯವರ ಪದ್ಯವನ್ನು ಕಿತ್ತುಹಾಕಲಾಗಿದೆ ಎಂಬುದಷ್ಟೇ ಮುಖ್ಯ ವಿಷಯವಲ್ಲ, ಕಿತ್ತು ಹಾಕಿರುವುದು ಬುದ್ಧನ ಕುರಿತ ಪದ್ಯ. ಕ್ರೂರ ಜನಾಂಗೀಯವಾದಿಗಳಷ್ಟೇ ಹೀಗೆ ಮಾಡಬಲ್ಲರು ಎಂದು ಹೋರಾಟಗಾರರಾದ ದಿನೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸರ್ವಜನಾಂಗದ ಶಾಂತಿಯ ಬೀಡಾದ ಕರ್ನಾಟಕದ ಮಕ್ಕಳಿಗೆ ಒಳ್ಳೆಯ ಪಠ್ಯಪುಸ್ತಕ ಕೊಡುವಂಥ ಬಲಪಂಥೀಯ ವಿದ್ವಾಂಸರನ್ನು ಹುಡುಕಲು ಸರಕಾರಕ್ಕೆ ಅಸಾಧ್ಯವಾದುದು ಅವರ ಬೌದ್ಧಿಕ ದಾರಿದ್ರ್ಯವನ್ನು ಸೂಚಿಸುವುದೇ? ಚಕ್ರತೀರ್ಥ ಬಿಟ್ಟರೆ ಅವರಲ್ಲಿ ಯಾರೂ ಇಲ್ಲವೇ? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Twitter system is not voice of public..
    It’s RSS or any it sd be truth in calabash.. not appraisal of sm wrong history.
    Be courageous to know the real fact instead of trying to divide Brahman,Muslim,dalit etc..
    Don’t try to fill ur bank appraising anti communists.
    Twitter Andolan is to have good dreams by blaming truth

  2. Since 2014-15 this nation is witnessing intolerance . Brahminocracy , Brahmin egimony have ruined the 7 decade old Democracy.
    Textbook committee is luring Brahminical lessons into the Academic curriculum is highly condemnable.
    Karnataka education minister Mr. Nagesh must resign immediately for dropping some of the historical patriots lessons from kannada textbooks.
    Reject out right RSS textbooks…….

  3. What a shame! Although we call ourselves citizens of 21st century, we behave as if we never went through any civilization. We are to teach that love conquerors and hate destroys. Unfortunately, hate is become more sweeter than genuine love. People of goodwill please help each other to build a better society by electing sound minded people.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...