Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

‘ಈ ದಿನ’ ವೆಬ್‌ಸೈಟ್ ಮಾಡಿರುವ ವರದಿಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹೀಗೆ ಪ್ರತಿಕ್ರಿಯೆ ನೀಡಿದರು...

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಸಚಿವರ ಮೌಖಿಕ ಆದೇಶದಲ್ಲೇ ಪಠ್ಯ ಪರಿಷ್ಕರಣೆಯನ್ನು ಮಾಡಿ ಮುಗಿಸಿ ಹಲವಾರು ಅಧ್ವಾನಗಳು ಆಗಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ರೋಹಿತ್ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಾಳಿಗೆ ತೂರಿ, ಏಕ ಪಕ್ಷೀಯವಾಗಿ ಪಠ್ಯಪುಸ್ತಕ ರಚಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ‘ಈ ದಿನ’ ವೆಬ್‌ಸೈಟ್‌ ವಿಶೇಷ ವರದಿ ಮಾಡಿದ್ದು, ಪರಿಶೀಲನಾ ಸಮಿತಿಯ ಸದಸ್ಯರು ಸೂಚಿಸಿದ್ದೇನು? ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಮಾಡಿದ್ದೇನು ಎಂಬ ಮಾಹಿತಿಯನ್ನು ವಿಸ್ತೃತವಾಗಿ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ, ರೋಹಿತ್ ಚಕ್ರತೀರ್ಥ ಐಐಟಿ ಹಾಗೂ ಸಿಇಟಿ ಪ್ರೊಫೆಸರ್‌. ಇದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ಸರ್ಕಾರ ರಚಿಸಿದ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೊರತಾಗಿಯೂ ಕೆಲವು ತಜ್ಞರು ಇದ್ದರು. ಅದರಲ್ಲಿ ಯಾರಾದರೂ ಅಧ್ಯಕ್ಷರಾಗಬಹುದಿತ್ತು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಸಮಿತಿಯ ಅಧ್ಯಕ್ಷರು ಮಾಡಿರುವ ಎಡವಟ್ಟುಗಳು ಮುನ್ನೆಲೆಗೆ ಬಂದಿವೆ.

ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರು ನೀಡಿದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವ ಯಾವ ವಿಷಯಗಳನ್ನು ತಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ  ಹದಿನೈದಕ್ಕೂ ಹೆಚ್ಚು ಪಠ್ಯಗಳನ್ನು ಅಧ್ಯಕ್ಷರೇ ಕೈಬಿಟ್ಟಿದ್ದಾರೆ.

ಉದಾಹರಣೆಗೆ ಎಂಟನೇ ತರಗತಿ ಕನ್ನಡ ಪಠ್ಯದಲ್ಲಿದ್ದ ಬಿ.ಟಿ.ಲಲತಾ ನಾಯಕ್‌ ಅವರ ಪದ್ಯವನ್ನು ಮುಂದುವರಿಸಬಹುದು ಎಂದು ಸಮಿತಿ ಸದಸ್ಯರು ಹೇಳಿದ್ದರು. ಆದರೆ ಅದನ್ನು ಕೈಬಿಟ್ಟು ಕುವೆಂಪು ಅವರ ‘ಬಹುಮಾನ’ ಪಠ್ಯವನ್ನು ಚಕ್ರತೀರ್ಥ ಸೇರಿಸಿದರು.

ಜವಾಹರಲಾಲ್‌ ನೆಹರೂ ಅವರ ‘ಮಗಳಿಗೆ ಪತ್ರಗಳು’ ಮುಂದುವರಿಸಲು ಸಮಿತಿ ಸದಸ್ಯರು ಒಪ್ಪಿದ್ದರು. ಚಕ್ರತೀರ್ಥ ಅದನ್ನು ಕೈಬಿಟ್ಟು ‘ಪಾರಂಪಳ್ಳಿ ನರಸಿಂಹ ಐತಾಳ’ರ ‘ಭೂಕೈಲಾಸ’ (ಪೌರಾಣಿಕ ನಾಟಕ)ವನ್ನು ಇರಿಸಿದ್ದಾರೆ.

ಒಂಬತ್ತನೇ ತರಗತಿ ಕನ್ನಡ ಪಠ್ಯದಲ್ಲಿ ‘ರಾಮಸ್ವಾಮಿ ಅಯ್ಯಂಗಾರ್‌’ ಅವರ ‘ಕನ್ನಡ ಮೌಲ್ವಿ’ ಬದಲಿಗೆ ವಿದ್ವಾನ್‌ ಡಾ.ಎನ್.ರಂಗನಾಥ ಶರ್ಮರವರ ‘ರಾಮರಾಜ್ಯ’, ‘ಧರ್ಮ ಸಮದೃಷ್ಟಿ ವಿಜಯನಗರ ಶಾಸನ’ ಬದಲಿಗೆ ಭೈರಪ್ಪನವರ ‘ನಾನು ಕಂಡಂತೆ ಡಾ.ಬಿ.ಜಿ.ಎಲ್.ಸ್ವಾಮಿ’ ಸೇರ್ಪಡೆ,  ಎಲ್‌.ಬಸವರಾಜು ಅವರ ‘ಊರು ಭಂಗ’ ಬದಲಿಗೆ ಡಾ.ಗಜಾನನ ಶರ್ಮ ಅವರ ‘ಚೆನ್ನಾಭೈರಾದೇವಿ’- ಹೀಗೆ ಪಠ್ಯಗಳನ್ನು ಬದಲಿಸಲಾಗಿದೆ. ಪಠ್ಯವನ್ನು ಮುಂದುವರಿಸಬಹುದೆಂದು ಸಮಿತಿ ಸದಸ್ಯರು ಹೇಳಿದ್ದರೂ ಅದನ್ನು ಕೈಬಿಟ್ಟಿರುವ ಸಾಲು ಸಾಲು ಉದಾಹರಣೆಗಳನ್ನು ‘ಈ ದಿನ’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಈ ದಿನ’ ವರದಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, “ಕಳೆದೆರಡು ವಾರಗಳಿಂದ ಪತ್ರಿಕೆಗಳಿಗೆ ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ನಾನು ಸರ್ಕಾರಕ್ಕೆ ಉತ್ತರ ಕೊಟ್ಟಾಗಿದೆ. ನನ್ನ ಮತ್ತು ಸರ್ಕಾರ ನಡುವೆ ಮಾತುಕತೆ ನಡೆದಿದೆ. ಯಾರೋ ಬಂದು ಕೇಳಿದರೆ ಉತ್ತರ ಕೊಡುತ್ತಾ ಕೂರಲು ಆಗುತ್ತಾ? ಈ ವರದಿ ನಿಜವೋ ಸುಳ್ಳೋ ಎಂಬ ಪ್ರಶ್ನೆಯೇ ಬರುವುದಿಲ್ಲ. ಪ್ರತಿಯೊಂದಕ್ಕೂ ನಾನು ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ನನ್ನ ವರದಿಯ ಶಿಫಾರಸ್ಸುಗಳನ್ನು ತೆಗೆದುಕೊಳ್ಳುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು”  ಎಂದು ಸ್ಪಷ್ಟಪಡಿಸಿದರು.

“ಮಾಧ್ಯಮಗಳು ಸುಮ್ಮಸುಮ್ಮನೆ ವರದಿಗಳನ್ನು ಮಾಡುತ್ತಿವೆ. ಸಾಕ್ಷಿ ಇಲ್ಲದೆ ವರದಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಾದ ದೊಡ್ಡ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, “ನಿಮ್ಮ ದೃಷ್ಟಿಯಲ್ಲಿ ಇದು ದೊಡ್ಡ ಪ್ರತಿಭಟನೆಯಾಗಿರಬಹುದು. ನನಗೆ ಅದೆಲ್ಲ ಏನೂ ಅಲ್ಲ” ಎಂದು ಉತ್ತರಿಸಿದರು.

ಪಠ್ಯವಿವಾದಕ್ಕೆ ಸಂಬಂಧಿಸಿದಂತ  ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿದ್ದರು. “ನಮಗೆ ಸೂಚನೆ ಇದೆ. ಅಧ್ಯಕ್ಷರು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಮಿತಿ ವಿಸರ್ಜನೆಯಾಗಿದೆ” ಎಂದು ಬಹುತೇಕರು ಪ್ರತಿಕ್ರಿಯೆ ನೀಡಿದ್ದರು.

ರೋಹಿತ್‌ ಚಕ್ರತೀರ್ಥ ಅವರ ಮೇಲೆ ಬಂದಿರುವ ಈ ಆರೋಪ ನಿಜವೇ ಎಂದು ತಿಳಿಯಲು ಸಮಿತಿಯ ಕೆಲವು ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಯಾರೋಬ್ಬರೂ ಕರೆಯನ್ನು ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಬಂದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...