Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

‘ಈ ದಿನ’ ವೆಬ್‌ಸೈಟ್ ಮಾಡಿರುವ ವರದಿಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹೀಗೆ ಪ್ರತಿಕ್ರಿಯೆ ನೀಡಿದರು...

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಸಚಿವರ ಮೌಖಿಕ ಆದೇಶದಲ್ಲೇ ಪಠ್ಯ ಪರಿಷ್ಕರಣೆಯನ್ನು ಮಾಡಿ ಮುಗಿಸಿ ಹಲವಾರು ಅಧ್ವಾನಗಳು ಆಗಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ರೋಹಿತ್ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಾಳಿಗೆ ತೂರಿ, ಏಕ ಪಕ್ಷೀಯವಾಗಿ ಪಠ್ಯಪುಸ್ತಕ ರಚಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ‘ಈ ದಿನ’ ವೆಬ್‌ಸೈಟ್‌ ವಿಶೇಷ ವರದಿ ಮಾಡಿದ್ದು, ಪರಿಶೀಲನಾ ಸಮಿತಿಯ ಸದಸ್ಯರು ಸೂಚಿಸಿದ್ದೇನು? ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಮಾಡಿದ್ದೇನು ಎಂಬ ಮಾಹಿತಿಯನ್ನು ವಿಸ್ತೃತವಾಗಿ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ, ರೋಹಿತ್ ಚಕ್ರತೀರ್ಥ ಐಐಟಿ ಹಾಗೂ ಸಿಇಟಿ ಪ್ರೊಫೆಸರ್‌. ಇದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ಸರ್ಕಾರ ರಚಿಸಿದ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೊರತಾಗಿಯೂ ಕೆಲವು ತಜ್ಞರು ಇದ್ದರು. ಅದರಲ್ಲಿ ಯಾರಾದರೂ ಅಧ್ಯಕ್ಷರಾಗಬಹುದಿತ್ತು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಸಮಿತಿಯ ಅಧ್ಯಕ್ಷರು ಮಾಡಿರುವ ಎಡವಟ್ಟುಗಳು ಮುನ್ನೆಲೆಗೆ ಬಂದಿವೆ.

ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರು ನೀಡಿದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವ ಯಾವ ವಿಷಯಗಳನ್ನು ತಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ  ಹದಿನೈದಕ್ಕೂ ಹೆಚ್ಚು ಪಠ್ಯಗಳನ್ನು ಅಧ್ಯಕ್ಷರೇ ಕೈಬಿಟ್ಟಿದ್ದಾರೆ.

ಉದಾಹರಣೆಗೆ ಎಂಟನೇ ತರಗತಿ ಕನ್ನಡ ಪಠ್ಯದಲ್ಲಿದ್ದ ಬಿ.ಟಿ.ಲಲತಾ ನಾಯಕ್‌ ಅವರ ಪದ್ಯವನ್ನು ಮುಂದುವರಿಸಬಹುದು ಎಂದು ಸಮಿತಿ ಸದಸ್ಯರು ಹೇಳಿದ್ದರು. ಆದರೆ ಅದನ್ನು ಕೈಬಿಟ್ಟು ಕುವೆಂಪು ಅವರ ‘ಬಹುಮಾನ’ ಪಠ್ಯವನ್ನು ಚಕ್ರತೀರ್ಥ ಸೇರಿಸಿದರು.

ಜವಾಹರಲಾಲ್‌ ನೆಹರೂ ಅವರ ‘ಮಗಳಿಗೆ ಪತ್ರಗಳು’ ಮುಂದುವರಿಸಲು ಸಮಿತಿ ಸದಸ್ಯರು ಒಪ್ಪಿದ್ದರು. ಚಕ್ರತೀರ್ಥ ಅದನ್ನು ಕೈಬಿಟ್ಟು ‘ಪಾರಂಪಳ್ಳಿ ನರಸಿಂಹ ಐತಾಳ’ರ ‘ಭೂಕೈಲಾಸ’ (ಪೌರಾಣಿಕ ನಾಟಕ)ವನ್ನು ಇರಿಸಿದ್ದಾರೆ.

ಒಂಬತ್ತನೇ ತರಗತಿ ಕನ್ನಡ ಪಠ್ಯದಲ್ಲಿ ‘ರಾಮಸ್ವಾಮಿ ಅಯ್ಯಂಗಾರ್‌’ ಅವರ ‘ಕನ್ನಡ ಮೌಲ್ವಿ’ ಬದಲಿಗೆ ವಿದ್ವಾನ್‌ ಡಾ.ಎನ್.ರಂಗನಾಥ ಶರ್ಮರವರ ‘ರಾಮರಾಜ್ಯ’, ‘ಧರ್ಮ ಸಮದೃಷ್ಟಿ ವಿಜಯನಗರ ಶಾಸನ’ ಬದಲಿಗೆ ಭೈರಪ್ಪನವರ ‘ನಾನು ಕಂಡಂತೆ ಡಾ.ಬಿ.ಜಿ.ಎಲ್.ಸ್ವಾಮಿ’ ಸೇರ್ಪಡೆ,  ಎಲ್‌.ಬಸವರಾಜು ಅವರ ‘ಊರು ಭಂಗ’ ಬದಲಿಗೆ ಡಾ.ಗಜಾನನ ಶರ್ಮ ಅವರ ‘ಚೆನ್ನಾಭೈರಾದೇವಿ’- ಹೀಗೆ ಪಠ್ಯಗಳನ್ನು ಬದಲಿಸಲಾಗಿದೆ. ಪಠ್ಯವನ್ನು ಮುಂದುವರಿಸಬಹುದೆಂದು ಸಮಿತಿ ಸದಸ್ಯರು ಹೇಳಿದ್ದರೂ ಅದನ್ನು ಕೈಬಿಟ್ಟಿರುವ ಸಾಲು ಸಾಲು ಉದಾಹರಣೆಗಳನ್ನು ‘ಈ ದಿನ’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಈ ದಿನ’ ವರದಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, “ಕಳೆದೆರಡು ವಾರಗಳಿಂದ ಪತ್ರಿಕೆಗಳಿಗೆ ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ನಾನು ಸರ್ಕಾರಕ್ಕೆ ಉತ್ತರ ಕೊಟ್ಟಾಗಿದೆ. ನನ್ನ ಮತ್ತು ಸರ್ಕಾರ ನಡುವೆ ಮಾತುಕತೆ ನಡೆದಿದೆ. ಯಾರೋ ಬಂದು ಕೇಳಿದರೆ ಉತ್ತರ ಕೊಡುತ್ತಾ ಕೂರಲು ಆಗುತ್ತಾ? ಈ ವರದಿ ನಿಜವೋ ಸುಳ್ಳೋ ಎಂಬ ಪ್ರಶ್ನೆಯೇ ಬರುವುದಿಲ್ಲ. ಪ್ರತಿಯೊಂದಕ್ಕೂ ನಾನು ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ನನ್ನ ವರದಿಯ ಶಿಫಾರಸ್ಸುಗಳನ್ನು ತೆಗೆದುಕೊಳ್ಳುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು”  ಎಂದು ಸ್ಪಷ್ಟಪಡಿಸಿದರು.

“ಮಾಧ್ಯಮಗಳು ಸುಮ್ಮಸುಮ್ಮನೆ ವರದಿಗಳನ್ನು ಮಾಡುತ್ತಿವೆ. ಸಾಕ್ಷಿ ಇಲ್ಲದೆ ವರದಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಾದ ದೊಡ್ಡ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, “ನಿಮ್ಮ ದೃಷ್ಟಿಯಲ್ಲಿ ಇದು ದೊಡ್ಡ ಪ್ರತಿಭಟನೆಯಾಗಿರಬಹುದು. ನನಗೆ ಅದೆಲ್ಲ ಏನೂ ಅಲ್ಲ” ಎಂದು ಉತ್ತರಿಸಿದರು.

ಪಠ್ಯವಿವಾದಕ್ಕೆ ಸಂಬಂಧಿಸಿದಂತ  ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿದ್ದರು. “ನಮಗೆ ಸೂಚನೆ ಇದೆ. ಅಧ್ಯಕ್ಷರು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಮಿತಿ ವಿಸರ್ಜನೆಯಾಗಿದೆ” ಎಂದು ಬಹುತೇಕರು ಪ್ರತಿಕ್ರಿಯೆ ನೀಡಿದ್ದರು.

ರೋಹಿತ್‌ ಚಕ್ರತೀರ್ಥ ಅವರ ಮೇಲೆ ಬಂದಿರುವ ಈ ಆರೋಪ ನಿಜವೇ ಎಂದು ತಿಳಿಯಲು ಸಮಿತಿಯ ಕೆಲವು ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಯಾರೋಬ್ಬರೂ ಕರೆಯನ್ನು ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಬಂದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...