Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

‘ಈ ದಿನ’ ವೆಬ್‌ಸೈಟ್ ಮಾಡಿರುವ ವರದಿಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹೀಗೆ ಪ್ರತಿಕ್ರಿಯೆ ನೀಡಿದರು...

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಸಚಿವರ ಮೌಖಿಕ ಆದೇಶದಲ್ಲೇ ಪಠ್ಯ ಪರಿಷ್ಕರಣೆಯನ್ನು ಮಾಡಿ ಮುಗಿಸಿ ಹಲವಾರು ಅಧ್ವಾನಗಳು ಆಗಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ರೋಹಿತ್ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಾಳಿಗೆ ತೂರಿ, ಏಕ ಪಕ್ಷೀಯವಾಗಿ ಪಠ್ಯಪುಸ್ತಕ ರಚಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ‘ಈ ದಿನ’ ವೆಬ್‌ಸೈಟ್‌ ವಿಶೇಷ ವರದಿ ಮಾಡಿದ್ದು, ಪರಿಶೀಲನಾ ಸಮಿತಿಯ ಸದಸ್ಯರು ಸೂಚಿಸಿದ್ದೇನು? ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಮಾಡಿದ್ದೇನು ಎಂಬ ಮಾಹಿತಿಯನ್ನು ವಿಸ್ತೃತವಾಗಿ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ, ರೋಹಿತ್ ಚಕ್ರತೀರ್ಥ ಐಐಟಿ ಹಾಗೂ ಸಿಇಟಿ ಪ್ರೊಫೆಸರ್‌. ಇದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ಸರ್ಕಾರ ರಚಿಸಿದ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೊರತಾಗಿಯೂ ಕೆಲವು ತಜ್ಞರು ಇದ್ದರು. ಅದರಲ್ಲಿ ಯಾರಾದರೂ ಅಧ್ಯಕ್ಷರಾಗಬಹುದಿತ್ತು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಸಮಿತಿಯ ಅಧ್ಯಕ್ಷರು ಮಾಡಿರುವ ಎಡವಟ್ಟುಗಳು ಮುನ್ನೆಲೆಗೆ ಬಂದಿವೆ.

ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರು ನೀಡಿದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವ ಯಾವ ವಿಷಯಗಳನ್ನು ತಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ  ಹದಿನೈದಕ್ಕೂ ಹೆಚ್ಚು ಪಠ್ಯಗಳನ್ನು ಅಧ್ಯಕ್ಷರೇ ಕೈಬಿಟ್ಟಿದ್ದಾರೆ.

ಉದಾಹರಣೆಗೆ ಎಂಟನೇ ತರಗತಿ ಕನ್ನಡ ಪಠ್ಯದಲ್ಲಿದ್ದ ಬಿ.ಟಿ.ಲಲತಾ ನಾಯಕ್‌ ಅವರ ಪದ್ಯವನ್ನು ಮುಂದುವರಿಸಬಹುದು ಎಂದು ಸಮಿತಿ ಸದಸ್ಯರು ಹೇಳಿದ್ದರು. ಆದರೆ ಅದನ್ನು ಕೈಬಿಟ್ಟು ಕುವೆಂಪು ಅವರ ‘ಬಹುಮಾನ’ ಪಠ್ಯವನ್ನು ಚಕ್ರತೀರ್ಥ ಸೇರಿಸಿದರು.

ಜವಾಹರಲಾಲ್‌ ನೆಹರೂ ಅವರ ‘ಮಗಳಿಗೆ ಪತ್ರಗಳು’ ಮುಂದುವರಿಸಲು ಸಮಿತಿ ಸದಸ್ಯರು ಒಪ್ಪಿದ್ದರು. ಚಕ್ರತೀರ್ಥ ಅದನ್ನು ಕೈಬಿಟ್ಟು ‘ಪಾರಂಪಳ್ಳಿ ನರಸಿಂಹ ಐತಾಳ’ರ ‘ಭೂಕೈಲಾಸ’ (ಪೌರಾಣಿಕ ನಾಟಕ)ವನ್ನು ಇರಿಸಿದ್ದಾರೆ.

ಒಂಬತ್ತನೇ ತರಗತಿ ಕನ್ನಡ ಪಠ್ಯದಲ್ಲಿ ‘ರಾಮಸ್ವಾಮಿ ಅಯ್ಯಂಗಾರ್‌’ ಅವರ ‘ಕನ್ನಡ ಮೌಲ್ವಿ’ ಬದಲಿಗೆ ವಿದ್ವಾನ್‌ ಡಾ.ಎನ್.ರಂಗನಾಥ ಶರ್ಮರವರ ‘ರಾಮರಾಜ್ಯ’, ‘ಧರ್ಮ ಸಮದೃಷ್ಟಿ ವಿಜಯನಗರ ಶಾಸನ’ ಬದಲಿಗೆ ಭೈರಪ್ಪನವರ ‘ನಾನು ಕಂಡಂತೆ ಡಾ.ಬಿ.ಜಿ.ಎಲ್.ಸ್ವಾಮಿ’ ಸೇರ್ಪಡೆ,  ಎಲ್‌.ಬಸವರಾಜು ಅವರ ‘ಊರು ಭಂಗ’ ಬದಲಿಗೆ ಡಾ.ಗಜಾನನ ಶರ್ಮ ಅವರ ‘ಚೆನ್ನಾಭೈರಾದೇವಿ’- ಹೀಗೆ ಪಠ್ಯಗಳನ್ನು ಬದಲಿಸಲಾಗಿದೆ. ಪಠ್ಯವನ್ನು ಮುಂದುವರಿಸಬಹುದೆಂದು ಸಮಿತಿ ಸದಸ್ಯರು ಹೇಳಿದ್ದರೂ ಅದನ್ನು ಕೈಬಿಟ್ಟಿರುವ ಸಾಲು ಸಾಲು ಉದಾಹರಣೆಗಳನ್ನು ‘ಈ ದಿನ’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಈ ದಿನ’ ವರದಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, “ಕಳೆದೆರಡು ವಾರಗಳಿಂದ ಪತ್ರಿಕೆಗಳಿಗೆ ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ನಾನು ಸರ್ಕಾರಕ್ಕೆ ಉತ್ತರ ಕೊಟ್ಟಾಗಿದೆ. ನನ್ನ ಮತ್ತು ಸರ್ಕಾರ ನಡುವೆ ಮಾತುಕತೆ ನಡೆದಿದೆ. ಯಾರೋ ಬಂದು ಕೇಳಿದರೆ ಉತ್ತರ ಕೊಡುತ್ತಾ ಕೂರಲು ಆಗುತ್ತಾ? ಈ ವರದಿ ನಿಜವೋ ಸುಳ್ಳೋ ಎಂಬ ಪ್ರಶ್ನೆಯೇ ಬರುವುದಿಲ್ಲ. ಪ್ರತಿಯೊಂದಕ್ಕೂ ನಾನು ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ನನ್ನ ವರದಿಯ ಶಿಫಾರಸ್ಸುಗಳನ್ನು ತೆಗೆದುಕೊಳ್ಳುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು”  ಎಂದು ಸ್ಪಷ್ಟಪಡಿಸಿದರು.

“ಮಾಧ್ಯಮಗಳು ಸುಮ್ಮಸುಮ್ಮನೆ ವರದಿಗಳನ್ನು ಮಾಡುತ್ತಿವೆ. ಸಾಕ್ಷಿ ಇಲ್ಲದೆ ವರದಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಾದ ದೊಡ್ಡ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, “ನಿಮ್ಮ ದೃಷ್ಟಿಯಲ್ಲಿ ಇದು ದೊಡ್ಡ ಪ್ರತಿಭಟನೆಯಾಗಿರಬಹುದು. ನನಗೆ ಅದೆಲ್ಲ ಏನೂ ಅಲ್ಲ” ಎಂದು ಉತ್ತರಿಸಿದರು.

ಪಠ್ಯವಿವಾದಕ್ಕೆ ಸಂಬಂಧಿಸಿದಂತ  ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿದ್ದರು. “ನಮಗೆ ಸೂಚನೆ ಇದೆ. ಅಧ್ಯಕ್ಷರು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಮಿತಿ ವಿಸರ್ಜನೆಯಾಗಿದೆ” ಎಂದು ಬಹುತೇಕರು ಪ್ರತಿಕ್ರಿಯೆ ನೀಡಿದ್ದರು.

ರೋಹಿತ್‌ ಚಕ್ರತೀರ್ಥ ಅವರ ಮೇಲೆ ಬಂದಿರುವ ಈ ಆರೋಪ ನಿಜವೇ ಎಂದು ತಿಳಿಯಲು ಸಮಿತಿಯ ಕೆಲವು ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಯಾರೋಬ್ಬರೂ ಕರೆಯನ್ನು ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಬಂದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...