Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

‘ಈ ದಿನ’ ವೆಬ್‌ಸೈಟ್ ಮಾಡಿರುವ ವರದಿಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹೀಗೆ ಪ್ರತಿಕ್ರಿಯೆ ನೀಡಿದರು...

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಸಚಿವರ ಮೌಖಿಕ ಆದೇಶದಲ್ಲೇ ಪಠ್ಯ ಪರಿಷ್ಕರಣೆಯನ್ನು ಮಾಡಿ ಮುಗಿಸಿ ಹಲವಾರು ಅಧ್ವಾನಗಳು ಆಗಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ರೋಹಿತ್ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಾಳಿಗೆ ತೂರಿ, ಏಕ ಪಕ್ಷೀಯವಾಗಿ ಪಠ್ಯಪುಸ್ತಕ ರಚಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ‘ಈ ದಿನ’ ವೆಬ್‌ಸೈಟ್‌ ವಿಶೇಷ ವರದಿ ಮಾಡಿದ್ದು, ಪರಿಶೀಲನಾ ಸಮಿತಿಯ ಸದಸ್ಯರು ಸೂಚಿಸಿದ್ದೇನು? ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಮಾಡಿದ್ದೇನು ಎಂಬ ಮಾಹಿತಿಯನ್ನು ವಿಸ್ತೃತವಾಗಿ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ, ರೋಹಿತ್ ಚಕ್ರತೀರ್ಥ ಐಐಟಿ ಹಾಗೂ ಸಿಇಟಿ ಪ್ರೊಫೆಸರ್‌. ಇದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ಸರ್ಕಾರ ರಚಿಸಿದ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೊರತಾಗಿಯೂ ಕೆಲವು ತಜ್ಞರು ಇದ್ದರು. ಅದರಲ್ಲಿ ಯಾರಾದರೂ ಅಧ್ಯಕ್ಷರಾಗಬಹುದಿತ್ತು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಸಮಿತಿಯ ಅಧ್ಯಕ್ಷರು ಮಾಡಿರುವ ಎಡವಟ್ಟುಗಳು ಮುನ್ನೆಲೆಗೆ ಬಂದಿವೆ.

ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರು ನೀಡಿದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವ ಯಾವ ವಿಷಯಗಳನ್ನು ತಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ  ಹದಿನೈದಕ್ಕೂ ಹೆಚ್ಚು ಪಠ್ಯಗಳನ್ನು ಅಧ್ಯಕ್ಷರೇ ಕೈಬಿಟ್ಟಿದ್ದಾರೆ.

ಉದಾಹರಣೆಗೆ ಎಂಟನೇ ತರಗತಿ ಕನ್ನಡ ಪಠ್ಯದಲ್ಲಿದ್ದ ಬಿ.ಟಿ.ಲಲತಾ ನಾಯಕ್‌ ಅವರ ಪದ್ಯವನ್ನು ಮುಂದುವರಿಸಬಹುದು ಎಂದು ಸಮಿತಿ ಸದಸ್ಯರು ಹೇಳಿದ್ದರು. ಆದರೆ ಅದನ್ನು ಕೈಬಿಟ್ಟು ಕುವೆಂಪು ಅವರ ‘ಬಹುಮಾನ’ ಪಠ್ಯವನ್ನು ಚಕ್ರತೀರ್ಥ ಸೇರಿಸಿದರು.

ಜವಾಹರಲಾಲ್‌ ನೆಹರೂ ಅವರ ‘ಮಗಳಿಗೆ ಪತ್ರಗಳು’ ಮುಂದುವರಿಸಲು ಸಮಿತಿ ಸದಸ್ಯರು ಒಪ್ಪಿದ್ದರು. ಚಕ್ರತೀರ್ಥ ಅದನ್ನು ಕೈಬಿಟ್ಟು ‘ಪಾರಂಪಳ್ಳಿ ನರಸಿಂಹ ಐತಾಳ’ರ ‘ಭೂಕೈಲಾಸ’ (ಪೌರಾಣಿಕ ನಾಟಕ)ವನ್ನು ಇರಿಸಿದ್ದಾರೆ.

ಒಂಬತ್ತನೇ ತರಗತಿ ಕನ್ನಡ ಪಠ್ಯದಲ್ಲಿ ‘ರಾಮಸ್ವಾಮಿ ಅಯ್ಯಂಗಾರ್‌’ ಅವರ ‘ಕನ್ನಡ ಮೌಲ್ವಿ’ ಬದಲಿಗೆ ವಿದ್ವಾನ್‌ ಡಾ.ಎನ್.ರಂಗನಾಥ ಶರ್ಮರವರ ‘ರಾಮರಾಜ್ಯ’, ‘ಧರ್ಮ ಸಮದೃಷ್ಟಿ ವಿಜಯನಗರ ಶಾಸನ’ ಬದಲಿಗೆ ಭೈರಪ್ಪನವರ ‘ನಾನು ಕಂಡಂತೆ ಡಾ.ಬಿ.ಜಿ.ಎಲ್.ಸ್ವಾಮಿ’ ಸೇರ್ಪಡೆ,  ಎಲ್‌.ಬಸವರಾಜು ಅವರ ‘ಊರು ಭಂಗ’ ಬದಲಿಗೆ ಡಾ.ಗಜಾನನ ಶರ್ಮ ಅವರ ‘ಚೆನ್ನಾಭೈರಾದೇವಿ’- ಹೀಗೆ ಪಠ್ಯಗಳನ್ನು ಬದಲಿಸಲಾಗಿದೆ. ಪಠ್ಯವನ್ನು ಮುಂದುವರಿಸಬಹುದೆಂದು ಸಮಿತಿ ಸದಸ್ಯರು ಹೇಳಿದ್ದರೂ ಅದನ್ನು ಕೈಬಿಟ್ಟಿರುವ ಸಾಲು ಸಾಲು ಉದಾಹರಣೆಗಳನ್ನು ‘ಈ ದಿನ’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಈ ದಿನ’ ವರದಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, “ಕಳೆದೆರಡು ವಾರಗಳಿಂದ ಪತ್ರಿಕೆಗಳಿಗೆ ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ನಾನು ಸರ್ಕಾರಕ್ಕೆ ಉತ್ತರ ಕೊಟ್ಟಾಗಿದೆ. ನನ್ನ ಮತ್ತು ಸರ್ಕಾರ ನಡುವೆ ಮಾತುಕತೆ ನಡೆದಿದೆ. ಯಾರೋ ಬಂದು ಕೇಳಿದರೆ ಉತ್ತರ ಕೊಡುತ್ತಾ ಕೂರಲು ಆಗುತ್ತಾ? ಈ ವರದಿ ನಿಜವೋ ಸುಳ್ಳೋ ಎಂಬ ಪ್ರಶ್ನೆಯೇ ಬರುವುದಿಲ್ಲ. ಪ್ರತಿಯೊಂದಕ್ಕೂ ನಾನು ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ನನ್ನ ವರದಿಯ ಶಿಫಾರಸ್ಸುಗಳನ್ನು ತೆಗೆದುಕೊಳ್ಳುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು”  ಎಂದು ಸ್ಪಷ್ಟಪಡಿಸಿದರು.

“ಮಾಧ್ಯಮಗಳು ಸುಮ್ಮಸುಮ್ಮನೆ ವರದಿಗಳನ್ನು ಮಾಡುತ್ತಿವೆ. ಸಾಕ್ಷಿ ಇಲ್ಲದೆ ವರದಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಾದ ದೊಡ್ಡ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, “ನಿಮ್ಮ ದೃಷ್ಟಿಯಲ್ಲಿ ಇದು ದೊಡ್ಡ ಪ್ರತಿಭಟನೆಯಾಗಿರಬಹುದು. ನನಗೆ ಅದೆಲ್ಲ ಏನೂ ಅಲ್ಲ” ಎಂದು ಉತ್ತರಿಸಿದರು.

ಪಠ್ಯವಿವಾದಕ್ಕೆ ಸಂಬಂಧಿಸಿದಂತ  ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿದ್ದರು. “ನಮಗೆ ಸೂಚನೆ ಇದೆ. ಅಧ್ಯಕ್ಷರು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಮಿತಿ ವಿಸರ್ಜನೆಯಾಗಿದೆ” ಎಂದು ಬಹುತೇಕರು ಪ್ರತಿಕ್ರಿಯೆ ನೀಡಿದ್ದರು.

ರೋಹಿತ್‌ ಚಕ್ರತೀರ್ಥ ಅವರ ಮೇಲೆ ಬಂದಿರುವ ಈ ಆರೋಪ ನಿಜವೇ ಎಂದು ತಿಳಿಯಲು ಸಮಿತಿಯ ಕೆಲವು ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಯಾರೋಬ್ಬರೂ ಕರೆಯನ್ನು ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಬಂದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...