Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

‘ಈ ದಿನ’ ವೆಬ್‌ಸೈಟ್ ಮಾಡಿರುವ ವರದಿಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹೀಗೆ ಪ್ರತಿಕ್ರಿಯೆ ನೀಡಿದರು...

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಸಚಿವರ ಮೌಖಿಕ ಆದೇಶದಲ್ಲೇ ಪಠ್ಯ ಪರಿಷ್ಕರಣೆಯನ್ನು ಮಾಡಿ ಮುಗಿಸಿ ಹಲವಾರು ಅಧ್ವಾನಗಳು ಆಗಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ರೋಹಿತ್ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಾಳಿಗೆ ತೂರಿ, ಏಕ ಪಕ್ಷೀಯವಾಗಿ ಪಠ್ಯಪುಸ್ತಕ ರಚಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ‘ಈ ದಿನ’ ವೆಬ್‌ಸೈಟ್‌ ವಿಶೇಷ ವರದಿ ಮಾಡಿದ್ದು, ಪರಿಶೀಲನಾ ಸಮಿತಿಯ ಸದಸ್ಯರು ಸೂಚಿಸಿದ್ದೇನು? ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಮಾಡಿದ್ದೇನು ಎಂಬ ಮಾಹಿತಿಯನ್ನು ವಿಸ್ತೃತವಾಗಿ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ, ರೋಹಿತ್ ಚಕ್ರತೀರ್ಥ ಐಐಟಿ ಹಾಗೂ ಸಿಇಟಿ ಪ್ರೊಫೆಸರ್‌. ಇದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ಸರ್ಕಾರ ರಚಿಸಿದ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೊರತಾಗಿಯೂ ಕೆಲವು ತಜ್ಞರು ಇದ್ದರು. ಅದರಲ್ಲಿ ಯಾರಾದರೂ ಅಧ್ಯಕ್ಷರಾಗಬಹುದಿತ್ತು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಸಮಿತಿಯ ಅಧ್ಯಕ್ಷರು ಮಾಡಿರುವ ಎಡವಟ್ಟುಗಳು ಮುನ್ನೆಲೆಗೆ ಬಂದಿವೆ.

ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರು ನೀಡಿದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವ ಯಾವ ವಿಷಯಗಳನ್ನು ತಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ  ಹದಿನೈದಕ್ಕೂ ಹೆಚ್ಚು ಪಠ್ಯಗಳನ್ನು ಅಧ್ಯಕ್ಷರೇ ಕೈಬಿಟ್ಟಿದ್ದಾರೆ.

ಉದಾಹರಣೆಗೆ ಎಂಟನೇ ತರಗತಿ ಕನ್ನಡ ಪಠ್ಯದಲ್ಲಿದ್ದ ಬಿ.ಟಿ.ಲಲತಾ ನಾಯಕ್‌ ಅವರ ಪದ್ಯವನ್ನು ಮುಂದುವರಿಸಬಹುದು ಎಂದು ಸಮಿತಿ ಸದಸ್ಯರು ಹೇಳಿದ್ದರು. ಆದರೆ ಅದನ್ನು ಕೈಬಿಟ್ಟು ಕುವೆಂಪು ಅವರ ‘ಬಹುಮಾನ’ ಪಠ್ಯವನ್ನು ಚಕ್ರತೀರ್ಥ ಸೇರಿಸಿದರು.

ಜವಾಹರಲಾಲ್‌ ನೆಹರೂ ಅವರ ‘ಮಗಳಿಗೆ ಪತ್ರಗಳು’ ಮುಂದುವರಿಸಲು ಸಮಿತಿ ಸದಸ್ಯರು ಒಪ್ಪಿದ್ದರು. ಚಕ್ರತೀರ್ಥ ಅದನ್ನು ಕೈಬಿಟ್ಟು ‘ಪಾರಂಪಳ್ಳಿ ನರಸಿಂಹ ಐತಾಳ’ರ ‘ಭೂಕೈಲಾಸ’ (ಪೌರಾಣಿಕ ನಾಟಕ)ವನ್ನು ಇರಿಸಿದ್ದಾರೆ.

ಒಂಬತ್ತನೇ ತರಗತಿ ಕನ್ನಡ ಪಠ್ಯದಲ್ಲಿ ‘ರಾಮಸ್ವಾಮಿ ಅಯ್ಯಂಗಾರ್‌’ ಅವರ ‘ಕನ್ನಡ ಮೌಲ್ವಿ’ ಬದಲಿಗೆ ವಿದ್ವಾನ್‌ ಡಾ.ಎನ್.ರಂಗನಾಥ ಶರ್ಮರವರ ‘ರಾಮರಾಜ್ಯ’, ‘ಧರ್ಮ ಸಮದೃಷ್ಟಿ ವಿಜಯನಗರ ಶಾಸನ’ ಬದಲಿಗೆ ಭೈರಪ್ಪನವರ ‘ನಾನು ಕಂಡಂತೆ ಡಾ.ಬಿ.ಜಿ.ಎಲ್.ಸ್ವಾಮಿ’ ಸೇರ್ಪಡೆ,  ಎಲ್‌.ಬಸವರಾಜು ಅವರ ‘ಊರು ಭಂಗ’ ಬದಲಿಗೆ ಡಾ.ಗಜಾನನ ಶರ್ಮ ಅವರ ‘ಚೆನ್ನಾಭೈರಾದೇವಿ’- ಹೀಗೆ ಪಠ್ಯಗಳನ್ನು ಬದಲಿಸಲಾಗಿದೆ. ಪಠ್ಯವನ್ನು ಮುಂದುವರಿಸಬಹುದೆಂದು ಸಮಿತಿ ಸದಸ್ಯರು ಹೇಳಿದ್ದರೂ ಅದನ್ನು ಕೈಬಿಟ್ಟಿರುವ ಸಾಲು ಸಾಲು ಉದಾಹರಣೆಗಳನ್ನು ‘ಈ ದಿನ’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಈ ದಿನ’ ವರದಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, “ಕಳೆದೆರಡು ವಾರಗಳಿಂದ ಪತ್ರಿಕೆಗಳಿಗೆ ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ನಾನು ಸರ್ಕಾರಕ್ಕೆ ಉತ್ತರ ಕೊಟ್ಟಾಗಿದೆ. ನನ್ನ ಮತ್ತು ಸರ್ಕಾರ ನಡುವೆ ಮಾತುಕತೆ ನಡೆದಿದೆ. ಯಾರೋ ಬಂದು ಕೇಳಿದರೆ ಉತ್ತರ ಕೊಡುತ್ತಾ ಕೂರಲು ಆಗುತ್ತಾ? ಈ ವರದಿ ನಿಜವೋ ಸುಳ್ಳೋ ಎಂಬ ಪ್ರಶ್ನೆಯೇ ಬರುವುದಿಲ್ಲ. ಪ್ರತಿಯೊಂದಕ್ಕೂ ನಾನು ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ನನ್ನ ವರದಿಯ ಶಿಫಾರಸ್ಸುಗಳನ್ನು ತೆಗೆದುಕೊಳ್ಳುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು”  ಎಂದು ಸ್ಪಷ್ಟಪಡಿಸಿದರು.

“ಮಾಧ್ಯಮಗಳು ಸುಮ್ಮಸುಮ್ಮನೆ ವರದಿಗಳನ್ನು ಮಾಡುತ್ತಿವೆ. ಸಾಕ್ಷಿ ಇಲ್ಲದೆ ವರದಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಾದ ದೊಡ್ಡ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, “ನಿಮ್ಮ ದೃಷ್ಟಿಯಲ್ಲಿ ಇದು ದೊಡ್ಡ ಪ್ರತಿಭಟನೆಯಾಗಿರಬಹುದು. ನನಗೆ ಅದೆಲ್ಲ ಏನೂ ಅಲ್ಲ” ಎಂದು ಉತ್ತರಿಸಿದರು.

ಪಠ್ಯವಿವಾದಕ್ಕೆ ಸಂಬಂಧಿಸಿದಂತ  ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿದ್ದರು. “ನಮಗೆ ಸೂಚನೆ ಇದೆ. ಅಧ್ಯಕ್ಷರು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಮಿತಿ ವಿಸರ್ಜನೆಯಾಗಿದೆ” ಎಂದು ಬಹುತೇಕರು ಪ್ರತಿಕ್ರಿಯೆ ನೀಡಿದ್ದರು.

ರೋಹಿತ್‌ ಚಕ್ರತೀರ್ಥ ಅವರ ಮೇಲೆ ಬಂದಿರುವ ಈ ಆರೋಪ ನಿಜವೇ ಎಂದು ತಿಳಿಯಲು ಸಮಿತಿಯ ಕೆಲವು ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಯಾರೋಬ್ಬರೂ ಕರೆಯನ್ನು ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಬಂದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...