Homeಕರ್ನಾಟಕಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

‘ಈ ದಿನ’ ವೆಬ್‌ಸೈಟ್ ಮಾಡಿರುವ ವರದಿಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹೀಗೆ ಪ್ರತಿಕ್ರಿಯೆ ನೀಡಿದರು...

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಸಚಿವರ ಮೌಖಿಕ ಆದೇಶದಲ್ಲೇ ಪಠ್ಯ ಪರಿಷ್ಕರಣೆಯನ್ನು ಮಾಡಿ ಮುಗಿಸಿ ಹಲವಾರು ಅಧ್ವಾನಗಳು ಆಗಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ರೋಹಿತ್ ಚಕ್ರತೀರ್ಥ ಅವರು ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗಾಳಿಗೆ ತೂರಿ, ಏಕ ಪಕ್ಷೀಯವಾಗಿ ಪಠ್ಯಪುಸ್ತಕ ರಚಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ‘ಈ ದಿನ’ ವೆಬ್‌ಸೈಟ್‌ ವಿಶೇಷ ವರದಿ ಮಾಡಿದ್ದು, ಪರಿಶೀಲನಾ ಸಮಿತಿಯ ಸದಸ್ಯರು ಸೂಚಿಸಿದ್ದೇನು? ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಮಾಡಿದ್ದೇನು ಎಂಬ ಮಾಹಿತಿಯನ್ನು ವಿಸ್ತೃತವಾಗಿ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ, ರೋಹಿತ್ ಚಕ್ರತೀರ್ಥ ಐಐಟಿ ಹಾಗೂ ಸಿಇಟಿ ಪ್ರೊಫೆಸರ್‌. ಇದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ಸರ್ಕಾರ ರಚಿಸಿದ ಪರಿಶೀಲನಾ ಸಮಿತಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೊರತಾಗಿಯೂ ಕೆಲವು ತಜ್ಞರು ಇದ್ದರು. ಅದರಲ್ಲಿ ಯಾರಾದರೂ ಅಧ್ಯಕ್ಷರಾಗಬಹುದಿತ್ತು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಸಮಿತಿಯ ಅಧ್ಯಕ್ಷರು ಮಾಡಿರುವ ಎಡವಟ್ಟುಗಳು ಮುನ್ನೆಲೆಗೆ ಬಂದಿವೆ.

ರೋಹಿತ್‌ ಚಕ್ರತೀರ್ಥ ಅವರು ಸಮಿತಿ ಸದಸ್ಯರು ನೀಡಿದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವ ಯಾವ ವಿಷಯಗಳನ್ನು ತಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ  ಹದಿನೈದಕ್ಕೂ ಹೆಚ್ಚು ಪಠ್ಯಗಳನ್ನು ಅಧ್ಯಕ್ಷರೇ ಕೈಬಿಟ್ಟಿದ್ದಾರೆ.

ಉದಾಹರಣೆಗೆ ಎಂಟನೇ ತರಗತಿ ಕನ್ನಡ ಪಠ್ಯದಲ್ಲಿದ್ದ ಬಿ.ಟಿ.ಲಲತಾ ನಾಯಕ್‌ ಅವರ ಪದ್ಯವನ್ನು ಮುಂದುವರಿಸಬಹುದು ಎಂದು ಸಮಿತಿ ಸದಸ್ಯರು ಹೇಳಿದ್ದರು. ಆದರೆ ಅದನ್ನು ಕೈಬಿಟ್ಟು ಕುವೆಂಪು ಅವರ ‘ಬಹುಮಾನ’ ಪಠ್ಯವನ್ನು ಚಕ್ರತೀರ್ಥ ಸೇರಿಸಿದರು.

ಜವಾಹರಲಾಲ್‌ ನೆಹರೂ ಅವರ ‘ಮಗಳಿಗೆ ಪತ್ರಗಳು’ ಮುಂದುವರಿಸಲು ಸಮಿತಿ ಸದಸ್ಯರು ಒಪ್ಪಿದ್ದರು. ಚಕ್ರತೀರ್ಥ ಅದನ್ನು ಕೈಬಿಟ್ಟು ‘ಪಾರಂಪಳ್ಳಿ ನರಸಿಂಹ ಐತಾಳ’ರ ‘ಭೂಕೈಲಾಸ’ (ಪೌರಾಣಿಕ ನಾಟಕ)ವನ್ನು ಇರಿಸಿದ್ದಾರೆ.

ಒಂಬತ್ತನೇ ತರಗತಿ ಕನ್ನಡ ಪಠ್ಯದಲ್ಲಿ ‘ರಾಮಸ್ವಾಮಿ ಅಯ್ಯಂಗಾರ್‌’ ಅವರ ‘ಕನ್ನಡ ಮೌಲ್ವಿ’ ಬದಲಿಗೆ ವಿದ್ವಾನ್‌ ಡಾ.ಎನ್.ರಂಗನಾಥ ಶರ್ಮರವರ ‘ರಾಮರಾಜ್ಯ’, ‘ಧರ್ಮ ಸಮದೃಷ್ಟಿ ವಿಜಯನಗರ ಶಾಸನ’ ಬದಲಿಗೆ ಭೈರಪ್ಪನವರ ‘ನಾನು ಕಂಡಂತೆ ಡಾ.ಬಿ.ಜಿ.ಎಲ್.ಸ್ವಾಮಿ’ ಸೇರ್ಪಡೆ,  ಎಲ್‌.ಬಸವರಾಜು ಅವರ ‘ಊರು ಭಂಗ’ ಬದಲಿಗೆ ಡಾ.ಗಜಾನನ ಶರ್ಮ ಅವರ ‘ಚೆನ್ನಾಭೈರಾದೇವಿ’- ಹೀಗೆ ಪಠ್ಯಗಳನ್ನು ಬದಲಿಸಲಾಗಿದೆ. ಪಠ್ಯವನ್ನು ಮುಂದುವರಿಸಬಹುದೆಂದು ಸಮಿತಿ ಸದಸ್ಯರು ಹೇಳಿದ್ದರೂ ಅದನ್ನು ಕೈಬಿಟ್ಟಿರುವ ಸಾಲು ಸಾಲು ಉದಾಹರಣೆಗಳನ್ನು ‘ಈ ದಿನ’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಈ ದಿನ’ ವರದಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, “ಕಳೆದೆರಡು ವಾರಗಳಿಂದ ಪತ್ರಿಕೆಗಳಿಗೆ ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ನಾನು ಸರ್ಕಾರಕ್ಕೆ ಉತ್ತರ ಕೊಟ್ಟಾಗಿದೆ. ನನ್ನ ಮತ್ತು ಸರ್ಕಾರ ನಡುವೆ ಮಾತುಕತೆ ನಡೆದಿದೆ. ಯಾರೋ ಬಂದು ಕೇಳಿದರೆ ಉತ್ತರ ಕೊಡುತ್ತಾ ಕೂರಲು ಆಗುತ್ತಾ? ಈ ವರದಿ ನಿಜವೋ ಸುಳ್ಳೋ ಎಂಬ ಪ್ರಶ್ನೆಯೇ ಬರುವುದಿಲ್ಲ. ಪ್ರತಿಯೊಂದಕ್ಕೂ ನಾನು ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ನನ್ನ ವರದಿಯ ಶಿಫಾರಸ್ಸುಗಳನ್ನು ತೆಗೆದುಕೊಳ್ಳುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು”  ಎಂದು ಸ್ಪಷ್ಟಪಡಿಸಿದರು.

“ಮಾಧ್ಯಮಗಳು ಸುಮ್ಮಸುಮ್ಮನೆ ವರದಿಗಳನ್ನು ಮಾಡುತ್ತಿವೆ. ಸಾಕ್ಷಿ ಇಲ್ಲದೆ ವರದಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಾದ ದೊಡ್ಡ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, “ನಿಮ್ಮ ದೃಷ್ಟಿಯಲ್ಲಿ ಇದು ದೊಡ್ಡ ಪ್ರತಿಭಟನೆಯಾಗಿರಬಹುದು. ನನಗೆ ಅದೆಲ್ಲ ಏನೂ ಅಲ್ಲ” ಎಂದು ಉತ್ತರಿಸಿದರು.

ಪಠ್ಯವಿವಾದಕ್ಕೆ ಸಂಬಂಧಿಸಿದಂತ  ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿದ್ದರು. “ನಮಗೆ ಸೂಚನೆ ಇದೆ. ಅಧ್ಯಕ್ಷರು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಮಿತಿ ವಿಸರ್ಜನೆಯಾಗಿದೆ” ಎಂದು ಬಹುತೇಕರು ಪ್ರತಿಕ್ರಿಯೆ ನೀಡಿದ್ದರು.

ರೋಹಿತ್‌ ಚಕ್ರತೀರ್ಥ ಅವರ ಮೇಲೆ ಬಂದಿರುವ ಈ ಆರೋಪ ನಿಜವೇ ಎಂದು ತಿಳಿಯಲು ಸಮಿತಿಯ ಕೆಲವು ಸದಸ್ಯರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಯಾರೋಬ್ಬರೂ ಕರೆಯನ್ನು ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಬಂದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....