Homeಕರ್ನಾಟಕ#RejectBrahminTextBooks ಟ್ವಿಟರ್‌ ಅಭಿಯಾನ ಇಂದು

#RejectBrahminTextBooks ಟ್ವಿಟರ್‌ ಅಭಿಯಾನ ಇಂದು

- Advertisement -
- Advertisement -

ಒಂದೇ ಜಾತಿಯವರು ಒಳಗೊಂಡಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ರೂಪಿಸಿರುವ ಪಠ್ಯವು ತಾರತಮ್ಯದಿಂದ ಕೂಡಿದ್ದು, ಅದರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಲಿಂಗ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಕುರಿತು ಲಘುವಾದ ಧೋರಣೆ ತಾಳಿರುವ ಸಮಿತಿ ರಚಿಸಿರುವ ಪಠ್ಯಗಳನ್ನು ಬಹಿಷ್ಕರಿಸಲು ಕರೆ ನೀಡಲಾಗಿದ್ದು, #RejectBrahminTextBooks ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವಿಟರ್‌ ಅಭಿಯಾನವನ್ನು ಆಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ (ಇಂದು) ಸಂಜೆ 5 ಗಂಟೆಗೆ ಅಭಿಯಾನ ನಡೆಯಲಿದ್ದು #RejectBrahminTextBooks ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡುವಂತೆ ಸಮಾನತೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಯಶಗಳನ್ನು ಉಳಿಸಲು ಹೋರಾಡುತ್ತಿರುವ ಮನಸ್ಸುಗಳು ಕರೆ ನೀಡಿವೆ.

“ಪಠ್ಯಪುಸ್ತಕಗಳಲ್ಲಿ ಒಂದು ಜಾತಿಯ ಲೇಖಕರ ವಿಜೃಂಭಣೆ, ಕೇಸರೀಕರಣ- ವೈದೀಕರಣ, ಕರ್ನಾಟಕದ, ಭಾರತದ ಸಮಾಜ ಸುಧಾರಕರ ಕುರಿತಾದ ಪಾಠಗಲನ್ನು ತೆಗೆದು ಹಾಕಿರುವುದನ್ನು ಖಂಡಿಸಿ ಈ ಅಭಿಯಾನ ಕೈಗೊಳ್ಳಲಾಗಿದೆ” ಎಂಬ ಪೋಸ್ಟರ್‌ಗಳು ವೈರಲ್‌ ಆಗುತ್ತಿವೆ.

“ಕೋಮವಾದದ ಪಠ್ಯಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು” ಎಂಬ ಆಗ್ರಹ ಜೋರಾಗಿದೆ.

“ಪಠ್ಯ ಪುಸ್ತಕವನ್ನು ಬಿಜೆಪಿಯ ಪುಸ್ತಕವನ್ನಾಗಿ ಮಾಡಿ ಹಿಂಬಾಗಿಲ ಮೂಲಕ ಮನುಸ್ಮೃತಿಯನ್ನು ತರಲಾಗುತ್ತಿದೆ” ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಜೊತೆಗೆ ಶಿಕ್ಷಣದ ವಿಚಾರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಒತ್ತಾಯಿಸಲಾಗಿದೆ.

‘ಪಠ್ಯ ಸೇರಿದ ಸೂಲಿಬೆಲೆ ಪಾಠ; ನಾರಾಯಣಗುರು ಪಠ್ಯ ಪ್ರತ್ಯೇಕವಾಗಿಲ್ಲ’

ಸುಳ್ಳುಗಳನ್ನು ಹೇಳುತ್ತಾ, ಬಿಜೆಪಿ ಪರ ಪ್ರಚಾರ ಮಾಡುತ್ತಾ ಟೀಕೆಗಳಿಗೆ ಒಳಗಾಗಿರುವ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರ ಪಾಠವೊಂದನ್ನು ಇಡಲಾಗಿದೆ. ಸಮಾಜ ಸುಧಾರಕ, ಶೂದ್ರ ಸಮುದಾಯದಲ್ಲಿ ಸ್ವಾಭಿಮಾನವನ್ನು ತುಂಬಿದ ನಾರಾಯಣಗುರುಗಳ ಪಠ್ಯವನ್ನು ಮರು ಸೇರಿಸಲಾಗಿದ್ದು, ಆದರೆ ಪ್ರತ್ಯೇಕವಾದ ಅಧ್ಯಾಯವಾಗಿ ರೂಪಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ಡಾ.ಜಿ.ರಾಮಕೃಷ್ಣ ಅವರ ‘ಭಗತ್‌ಸಿಂಗ್‌’ ಪಾಠವನ್ನು ಕೈಬಿಟ್ಟ ಬಳಿಕ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಆ ಪಾಠವನ್ನು ಹೊಸ ಪಠ್ಯದಲ್ಲಿ ಸೇರಿಸಿಕೊಳ್ಳಲಾಗಿದ್ದು, ಚಕ್ರವರ್ತಿ ಸೂಲಿಬೆಲೆಯವರ ‘ತಾಯಿ ಭಾರತಿಯ ಅಮರ ಪುತ್ರರು’ ಶೀರ್ಷಿಕೆಯ ಬರಹವನ್ನೂ ಹತ್ತನೇ ತರಗತಿಯ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಒಳಗೊಳ್ಳಲಾಗಿದೆ.

‘ಸಾಮಾಜಿಕ ಚಳವಳಿಯನ್ನೇ ಹುಟ್ಟು ಹಾಕಿ, ಹಿಂದುಳಿದ ಸಮುದಾಯದವರಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಕುರಿತ ಅಧ್ಯಾಯ ಸಮಾಜ ವಿಜ್ಞಾನ ಪಠ್ಯದಲ್ಲಿತ್ತು. ಅದನ್ನೂ ಕೈಬಿಡಲಾಗಿತ್ತು. ಮತ್ತೆ ಪರಿಷ್ಕರಿಸಿರುವ ಸರ್ಕಾರ ಈ ವಿವರಗಳನ್ನು ಕನ್ನಡ ಪುಸ್ತಕದಲ್ಲಿ ಸೇರಿಸಿದೆ. ಆದರೆ ಇವರ ಬಗ್ಗೆ ಪ್ರತ್ಯೇಕ ಪಾಠ ಇಲ್ಲ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

‘ಭಗತ್‌ಸಿಂಗ್‌’, ‘ತಾಯಿ ಭಾರತಿಯ ಅಮರಪುತ್ರರು’ ಮತ್ತು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು’ ಅಧ್ಯಾಯಗಳನ್ನು ಪಠ್ಯಪೂರಕ ವಿಭಾಗದಲ್ಲಿ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...