Homeಕರ್ನಾಟಕ#RejectBrahminTextBooks ಟ್ವಿಟರ್‌ ಅಭಿಯಾನ ಇಂದು

#RejectBrahminTextBooks ಟ್ವಿಟರ್‌ ಅಭಿಯಾನ ಇಂದು

- Advertisement -
- Advertisement -

ಒಂದೇ ಜಾತಿಯವರು ಒಳಗೊಂಡಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ರೂಪಿಸಿರುವ ಪಠ್ಯವು ತಾರತಮ್ಯದಿಂದ ಕೂಡಿದ್ದು, ಅದರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಲಿಂಗ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಕುರಿತು ಲಘುವಾದ ಧೋರಣೆ ತಾಳಿರುವ ಸಮಿತಿ ರಚಿಸಿರುವ ಪಠ್ಯಗಳನ್ನು ಬಹಿಷ್ಕರಿಸಲು ಕರೆ ನೀಡಲಾಗಿದ್ದು, #RejectBrahminTextBooks ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವಿಟರ್‌ ಅಭಿಯಾನವನ್ನು ಆಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ (ಇಂದು) ಸಂಜೆ 5 ಗಂಟೆಗೆ ಅಭಿಯಾನ ನಡೆಯಲಿದ್ದು #RejectBrahminTextBooks ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡುವಂತೆ ಸಮಾನತೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಯಶಗಳನ್ನು ಉಳಿಸಲು ಹೋರಾಡುತ್ತಿರುವ ಮನಸ್ಸುಗಳು ಕರೆ ನೀಡಿವೆ.

“ಪಠ್ಯಪುಸ್ತಕಗಳಲ್ಲಿ ಒಂದು ಜಾತಿಯ ಲೇಖಕರ ವಿಜೃಂಭಣೆ, ಕೇಸರೀಕರಣ- ವೈದೀಕರಣ, ಕರ್ನಾಟಕದ, ಭಾರತದ ಸಮಾಜ ಸುಧಾರಕರ ಕುರಿತಾದ ಪಾಠಗಲನ್ನು ತೆಗೆದು ಹಾಕಿರುವುದನ್ನು ಖಂಡಿಸಿ ಈ ಅಭಿಯಾನ ಕೈಗೊಳ್ಳಲಾಗಿದೆ” ಎಂಬ ಪೋಸ್ಟರ್‌ಗಳು ವೈರಲ್‌ ಆಗುತ್ತಿವೆ.

“ಕೋಮವಾದದ ಪಠ್ಯಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು” ಎಂಬ ಆಗ್ರಹ ಜೋರಾಗಿದೆ.

“ಪಠ್ಯ ಪುಸ್ತಕವನ್ನು ಬಿಜೆಪಿಯ ಪುಸ್ತಕವನ್ನಾಗಿ ಮಾಡಿ ಹಿಂಬಾಗಿಲ ಮೂಲಕ ಮನುಸ್ಮೃತಿಯನ್ನು ತರಲಾಗುತ್ತಿದೆ” ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಜೊತೆಗೆ ಶಿಕ್ಷಣದ ವಿಚಾರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಒತ್ತಾಯಿಸಲಾಗಿದೆ.

‘ಪಠ್ಯ ಸೇರಿದ ಸೂಲಿಬೆಲೆ ಪಾಠ; ನಾರಾಯಣಗುರು ಪಠ್ಯ ಪ್ರತ್ಯೇಕವಾಗಿಲ್ಲ’

ಸುಳ್ಳುಗಳನ್ನು ಹೇಳುತ್ತಾ, ಬಿಜೆಪಿ ಪರ ಪ್ರಚಾರ ಮಾಡುತ್ತಾ ಟೀಕೆಗಳಿಗೆ ಒಳಗಾಗಿರುವ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರ ಪಾಠವೊಂದನ್ನು ಇಡಲಾಗಿದೆ. ಸಮಾಜ ಸುಧಾರಕ, ಶೂದ್ರ ಸಮುದಾಯದಲ್ಲಿ ಸ್ವಾಭಿಮಾನವನ್ನು ತುಂಬಿದ ನಾರಾಯಣಗುರುಗಳ ಪಠ್ಯವನ್ನು ಮರು ಸೇರಿಸಲಾಗಿದ್ದು, ಆದರೆ ಪ್ರತ್ಯೇಕವಾದ ಅಧ್ಯಾಯವಾಗಿ ರೂಪಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ಡಾ.ಜಿ.ರಾಮಕೃಷ್ಣ ಅವರ ‘ಭಗತ್‌ಸಿಂಗ್‌’ ಪಾಠವನ್ನು ಕೈಬಿಟ್ಟ ಬಳಿಕ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಆ ಪಾಠವನ್ನು ಹೊಸ ಪಠ್ಯದಲ್ಲಿ ಸೇರಿಸಿಕೊಳ್ಳಲಾಗಿದ್ದು, ಚಕ್ರವರ್ತಿ ಸೂಲಿಬೆಲೆಯವರ ‘ತಾಯಿ ಭಾರತಿಯ ಅಮರ ಪುತ್ರರು’ ಶೀರ್ಷಿಕೆಯ ಬರಹವನ್ನೂ ಹತ್ತನೇ ತರಗತಿಯ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಒಳಗೊಳ್ಳಲಾಗಿದೆ.

‘ಸಾಮಾಜಿಕ ಚಳವಳಿಯನ್ನೇ ಹುಟ್ಟು ಹಾಕಿ, ಹಿಂದುಳಿದ ಸಮುದಾಯದವರಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಕುರಿತ ಅಧ್ಯಾಯ ಸಮಾಜ ವಿಜ್ಞಾನ ಪಠ್ಯದಲ್ಲಿತ್ತು. ಅದನ್ನೂ ಕೈಬಿಡಲಾಗಿತ್ತು. ಮತ್ತೆ ಪರಿಷ್ಕರಿಸಿರುವ ಸರ್ಕಾರ ಈ ವಿವರಗಳನ್ನು ಕನ್ನಡ ಪುಸ್ತಕದಲ್ಲಿ ಸೇರಿಸಿದೆ. ಆದರೆ ಇವರ ಬಗ್ಗೆ ಪ್ರತ್ಯೇಕ ಪಾಠ ಇಲ್ಲ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

‘ಭಗತ್‌ಸಿಂಗ್‌’, ‘ತಾಯಿ ಭಾರತಿಯ ಅಮರಪುತ್ರರು’ ಮತ್ತು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು’ ಅಧ್ಯಾಯಗಳನ್ನು ಪಠ್ಯಪೂರಕ ವಿಭಾಗದಲ್ಲಿ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...