Homeಕರ್ನಾಟಕ#RejectBrahminTextBooks ಟ್ವಿಟರ್‌ ಅಭಿಯಾನ ಇಂದು

#RejectBrahminTextBooks ಟ್ವಿಟರ್‌ ಅಭಿಯಾನ ಇಂದು

- Advertisement -
- Advertisement -

ಒಂದೇ ಜಾತಿಯವರು ಒಳಗೊಂಡಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ರೂಪಿಸಿರುವ ಪಠ್ಯವು ತಾರತಮ್ಯದಿಂದ ಕೂಡಿದ್ದು, ಅದರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಲಿಂಗ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಕುರಿತು ಲಘುವಾದ ಧೋರಣೆ ತಾಳಿರುವ ಸಮಿತಿ ರಚಿಸಿರುವ ಪಠ್ಯಗಳನ್ನು ಬಹಿಷ್ಕರಿಸಲು ಕರೆ ನೀಡಲಾಗಿದ್ದು, #RejectBrahminTextBooks ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವಿಟರ್‌ ಅಭಿಯಾನವನ್ನು ಆಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ (ಇಂದು) ಸಂಜೆ 5 ಗಂಟೆಗೆ ಅಭಿಯಾನ ನಡೆಯಲಿದ್ದು #RejectBrahminTextBooks ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡುವಂತೆ ಸಮಾನತೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಯಶಗಳನ್ನು ಉಳಿಸಲು ಹೋರಾಡುತ್ತಿರುವ ಮನಸ್ಸುಗಳು ಕರೆ ನೀಡಿವೆ.

“ಪಠ್ಯಪುಸ್ತಕಗಳಲ್ಲಿ ಒಂದು ಜಾತಿಯ ಲೇಖಕರ ವಿಜೃಂಭಣೆ, ಕೇಸರೀಕರಣ- ವೈದೀಕರಣ, ಕರ್ನಾಟಕದ, ಭಾರತದ ಸಮಾಜ ಸುಧಾರಕರ ಕುರಿತಾದ ಪಾಠಗಲನ್ನು ತೆಗೆದು ಹಾಕಿರುವುದನ್ನು ಖಂಡಿಸಿ ಈ ಅಭಿಯಾನ ಕೈಗೊಳ್ಳಲಾಗಿದೆ” ಎಂಬ ಪೋಸ್ಟರ್‌ಗಳು ವೈರಲ್‌ ಆಗುತ್ತಿವೆ.

“ಕೋಮವಾದದ ಪಠ್ಯಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು” ಎಂಬ ಆಗ್ರಹ ಜೋರಾಗಿದೆ.

“ಪಠ್ಯ ಪುಸ್ತಕವನ್ನು ಬಿಜೆಪಿಯ ಪುಸ್ತಕವನ್ನಾಗಿ ಮಾಡಿ ಹಿಂಬಾಗಿಲ ಮೂಲಕ ಮನುಸ್ಮೃತಿಯನ್ನು ತರಲಾಗುತ್ತಿದೆ” ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಜೊತೆಗೆ ಶಿಕ್ಷಣದ ವಿಚಾರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಒತ್ತಾಯಿಸಲಾಗಿದೆ.

‘ಪಠ್ಯ ಸೇರಿದ ಸೂಲಿಬೆಲೆ ಪಾಠ; ನಾರಾಯಣಗುರು ಪಠ್ಯ ಪ್ರತ್ಯೇಕವಾಗಿಲ್ಲ’

ಸುಳ್ಳುಗಳನ್ನು ಹೇಳುತ್ತಾ, ಬಿಜೆಪಿ ಪರ ಪ್ರಚಾರ ಮಾಡುತ್ತಾ ಟೀಕೆಗಳಿಗೆ ಒಳಗಾಗಿರುವ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರ ಪಾಠವೊಂದನ್ನು ಇಡಲಾಗಿದೆ. ಸಮಾಜ ಸುಧಾರಕ, ಶೂದ್ರ ಸಮುದಾಯದಲ್ಲಿ ಸ್ವಾಭಿಮಾನವನ್ನು ತುಂಬಿದ ನಾರಾಯಣಗುರುಗಳ ಪಠ್ಯವನ್ನು ಮರು ಸೇರಿಸಲಾಗಿದ್ದು, ಆದರೆ ಪ್ರತ್ಯೇಕವಾದ ಅಧ್ಯಾಯವಾಗಿ ರೂಪಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ಡಾ.ಜಿ.ರಾಮಕೃಷ್ಣ ಅವರ ‘ಭಗತ್‌ಸಿಂಗ್‌’ ಪಾಠವನ್ನು ಕೈಬಿಟ್ಟ ಬಳಿಕ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಆ ಪಾಠವನ್ನು ಹೊಸ ಪಠ್ಯದಲ್ಲಿ ಸೇರಿಸಿಕೊಳ್ಳಲಾಗಿದ್ದು, ಚಕ್ರವರ್ತಿ ಸೂಲಿಬೆಲೆಯವರ ‘ತಾಯಿ ಭಾರತಿಯ ಅಮರ ಪುತ್ರರು’ ಶೀರ್ಷಿಕೆಯ ಬರಹವನ್ನೂ ಹತ್ತನೇ ತರಗತಿಯ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಒಳಗೊಳ್ಳಲಾಗಿದೆ.

‘ಸಾಮಾಜಿಕ ಚಳವಳಿಯನ್ನೇ ಹುಟ್ಟು ಹಾಕಿ, ಹಿಂದುಳಿದ ಸಮುದಾಯದವರಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಕುರಿತ ಅಧ್ಯಾಯ ಸಮಾಜ ವಿಜ್ಞಾನ ಪಠ್ಯದಲ್ಲಿತ್ತು. ಅದನ್ನೂ ಕೈಬಿಡಲಾಗಿತ್ತು. ಮತ್ತೆ ಪರಿಷ್ಕರಿಸಿರುವ ಸರ್ಕಾರ ಈ ವಿವರಗಳನ್ನು ಕನ್ನಡ ಪುಸ್ತಕದಲ್ಲಿ ಸೇರಿಸಿದೆ. ಆದರೆ ಇವರ ಬಗ್ಗೆ ಪ್ರತ್ಯೇಕ ಪಾಠ ಇಲ್ಲ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

‘ಭಗತ್‌ಸಿಂಗ್‌’, ‘ತಾಯಿ ಭಾರತಿಯ ಅಮರಪುತ್ರರು’ ಮತ್ತು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು’ ಅಧ್ಯಾಯಗಳನ್ನು ಪಠ್ಯಪೂರಕ ವಿಭಾಗದಲ್ಲಿ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....