Homeಮುಖಪುಟಸಾಂವಿಧಾನಿಕ ವ್ಯಾಪ್ತಿಯಲ್ಲಿ ಕೃಷಿ ಮಸೂದೆಗಳನ್ನು ರಾಜ್ಯಗಳು ನಿರಾಕರಿಸಲಿ: ಸೋನಿಯಾ ಗಾಂಧಿ

ಸಾಂವಿಧಾನಿಕ ವ್ಯಾಪ್ತಿಯಲ್ಲಿ ಕೃಷಿ ಮಸೂದೆಗಳನ್ನು ರಾಜ್ಯಗಳು ನಿರಾಕರಿಸಲಿ: ಸೋನಿಯಾ ಗಾಂಧಿ

ಬೆಂಬಲ ಬೆಲೆಯ (MSP) ನಿರ್ಮೂಲನೆ ಮತ್ತು ಎಪಿಎಂಸಿಗಳಿಗೆ ತೊಂದರೆ ಸೇರಿದಂತೆ, ಕೇಂದ್ರ ಜಾರಿಗೆ ತರುತ್ತಿರುವ 3 ಕಠಿಣ ಕೃಷಿ ಕಾನೂನುಗಳಲ್ಲಿ ಸ್ವೀಕಾರ್ಹವಲ್ಲದ ರೈತವಿರೋಧಿ ನಿಬಂಧನೆಗಳನ್ನು ತೆಗೆದುಹಾಕಲು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಸಾಧ್ಯವಿದೆ

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಕೃಷಿ ಕಾನೂನನ್ನು ಅಂಗೀಕರಿಸದಿರಲು ಸಂವಿಧಾನದ 254(2)ನೇ ವಿಧಿಯನ್ವಯ ಸಾಧ್ಯತೆಗಳನ್ನು ಸಂವಿಧಾನದ ವ್ಯಾಪ್ತಿಯಲ್ಲಿ ಅನ್ವೇಷಿಸಲು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಅಧ್ಯಕ್ಷೆ ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ” ಎಂದು ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೊಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

“ಬೆಂಬಲ ಬೆಲೆಯ (MSP) ನಿರ್ಮೂಲನೆ ಮತ್ತು ಎಪಿಎಂಸಿಗಳಿಗೆ ತೊಂದರೆ ಸೇರಿದಂತೆ, ಕೇಂದ್ರ ಜಾರಿಗೆ ತರುತ್ತಿರುವ 3 ಕಠಿಣ ಕೃಷಿ ಕಾನೂನುಗಳಲ್ಲಿ ಸ್ವೀಕಾರಾರ್ಹವಲ್ಲದ ರೈತವಿರೋಧಿ ನಿಬಂಧನೆಗಳನ್ನು ತೆಗೆದುಹಾಕಲು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಸಾಧ್ಯವಿದೆ. ರೈತರಿಗೆ ಮೋದಿ ಸರ್ಕಾರ ಮತ್ತು ಬಿಜೆಪಿ ಮಾಡಿದ ಅನ್ಯಾಯಕ್ಕೆ ಇದು ಸ್ವಲ್ಪ ನಿವಾರಣೆ ನೀಡಬಹುದು” ಎಂದು ಅವರು ಹೇಳಿದರು.

ಕೃಷಿ ಮಸೂದೆಗಳು ರಾಜ್ಯಸಭೆಯಲ್ಲಿ ಹೆಚ್ಚಿನ ವಿವಾದಗಳ ನಡುವೆ ಅಂಗೀಕರಿಸಲ್ಪಟ್ಟು, ರಾಷ್ಟ್ರಪತಿಗಳು ಭಾನುವಾರ ಅದಕ್ಕೆ ಸಹಿ ಹಾಕಿದರು. ಇದರ ನಡುವೆ, ದೇಶದಾದ್ಯಂತ ರೈತರು ಈ ಹೊಸ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಹೊಸ ಕಾನೂನುಗಳನ್ನು ಸಾಂವಿಧಾನಿಕವಾಗಿ ಮತ್ತು ಕಾನೂನುಬದ್ಧವಾಗಿ ಪ್ರಶ್ನಿಸುವುದಾಗಿ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ. ಕೇರಳದ ತ್ರಿಶೂರ್‌ನ ಕಾಂಗ್ರೆಸ್ ಸಂಸದ ಟಿ.ಎನ್.ಪ್ರತಾಪನ್, ಸೋಮವಾರ ಕಾಯಿದೆಗಳ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ಹಲವಾರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳೂ ಸೇರಿದಂತೆ ಕರ್ನಾಟಕದಲ್ಲಿ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಈ ಬಂದ್ ಬಹುತೇಕ ಯಶಸ್ವಿಯೂ ಆಗಿದೆ. ಉತ್ತರಪ್ರದೇಶದಲ್ಲಿಯೂ ಕಾಂಗ್ರೆಸ್ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಗೋವಾ ಮತ್ತು ತಮಿಳುನಾಡಿನಿಂದಲೂ ಪ್ರತಿಭಟನಾ ವರದಿಗಳು ದಾಖಲಾಗಿವೆ.


ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...