Homeಕರ್ನಾಟಕಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ?

- Advertisement -
- Advertisement -

ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮದ ವಯೋವೃದ್ಧ ದಲಿತ ಶಿವು ಹಳ್ಳೇರ ತುತ್ತಿಗಾಧರವಾದ ವೃದ್ಧಾಪ್ಯ ವೇತನ ಅಧಿಕಾರಿಗಳ ಅಸಡ್ಡೆ, ಹೊಣೆಗೇಡಿತನದಿಂದ ಸರಿಯಾಗಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿಯಲೊಂದು ಗುಡಿಸಲೂ ಇಲ್ಲದ ದೇಖರೇಖೆ ನೋಡಿಕೊಳ್ಳಲು ಯಾರೂ ಇಲ್ಲದ ಅವಿವಾಹಿತ ಶಿವುಗೀಗ ಎಂಬತ್ತು ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲಿ ಅವರಿಗೆ ಕಿವಿಯೂ ಕೇಳಿಸುತ್ತಿಲ್ಲ! ಫೆಬ್ರುವರಿ 2006 ರಿಂದ ಶಿವು ವೃದ್ಧಾಪ್ಯ ಪಿಂಚಣಿ ಮೇಲೆ ಜೀವವಿಟ್ಟು ಜೀವನ ನಡೆಸುತ್ತಿದ್ದರು.

ಹೇಗೋ ದಿನ ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಗಸ್ಟ್ 2018ರಲ್ಲಿ ಹೊನ್ನಾವರದ ಅಂದಿನ ತಹಶೀಲ್ದಾರ್ ವಿವೇಕ್ ಶೆಣ್ವಿ ಅಸಾಯಕ ಶಿವು ಹಳ್ಳೇರ ವೃದ್ದಾಪ್ಯ ವೇತನ ರದ್ದುಗೊಳಿಸಿ ಬಿಟ್ಟರು! ಅದಕ್ಕವರು ನೀಡಿದ ಕಾರಣ ಶಿವು ಹೊನ್ನಾವರ ತಾಲ್ಲೂಕಿನಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಎಂಬುದಾಗಿತ್ತು. ಹೊನ್ನಾವರದ ಕಂದಾಯ ಅಧಿಕಾರಿಗಳು ಶಿವುರ ಅತಿ ಮುಖ್ಯ ದಾಖಲೆಯಾದ ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಬಿಪಿಎಲ್ ಪಡಿತರ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಅಥವಾ ಪಿಂಚಣಿ ಸಂದಾಯವಾಗುತ್ತಿದ್ದ ಅಂಚೆ ಇಲಾಖೆಯ ಪಾಸ್ ಬುಕ್‌ನಂಥ ಯಾವ ದಾಖಲೆಯನ್ನೂ ಪರಿಶೀಲಿಸದೆ ಎಡವಟ್ಟು ತೀರ್ಮಾನಕ್ಕೆ ಬಂದಿದ್ದರು! ತಹಶೀಲ್ದಾರರ ವಿವೇಚನಾರಹಿತ ಕ್ರಮವನ್ನು ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಎತ್ತಿ ಹಿಡಿದಿದ್ದು ಶಿವು ಹಳ್ಳಿರಗೆ ಅನ್ಯಾಯ ಮಾಡಿತ್ತು.

ಅಶಿಕ್ಷಿತ-ಅಮಾಯಕ ಶಿವು ಹಳ್ಳೇರ ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಿರುವಾಗ ಊರಿನ ಜಿ.ಎನ್.ಭಟ್ಟರಿಗೆ ವಿಷಯ ತಿಳಿಯುತ್ತದೆ. ಅವರು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ರಿಗೆ ಶಿವು ಹಳ್ಳೇರಗಾಗಿರುವ ತೊಂದರೆ ವಿವರಿಸಿ 2018ರ ಆಗಸ್ಟ್‌ನಿಂದ ಪಿಂಚಣಿ ಬಟವಡೆ ಮಾಡುವಂತೆ ಮನವಿ ಮಾಡುತ್ತಾರೆ. ಸರಕಾರಿ ಅಧಿಕಾರಿಗಳೊಂದಿಗೆ ವ್ಯವಹರಿಸುವ ಶಕ್ತಿ ವಯೋವೃದ್ಧ-ಅಶಿಕ್ಷಿತ ಶಿವುಗೆ ಇಲ್ಲದಿರುವುದರಿಂದ ಮತ್ತು ಅವರಿಗೆ ಕಿವಿ ಕೇಳಿಸದಿರುವುದರಿಂದ ಭಟ್ಟರೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೆಂಟು ತಿಂಗಳು ಕಳೆದರೂ ತಹಶೀಲ್ದಾರ್ ಸಾಹೇಬರಿಂದ ಕನಿಷ್ಟ ಹಿಂಬರಹವೂ ಬರಲಿಲ್ಲ. ಜಿಲ್ಲಾಧಿಕಾರಿಗಳ ವಾಟ್ಸಪ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ!

ಕಂದಾಯ ಅಧಿಕಾರಿಗಳು ಆಗಿರುವ ಅಚಾತುರ್ಯವನ್ನು ಅರಿತು ಕ್ಷಣಾರ್ಧದಲ್ಲಿ ಪರಿಹರಿಸಬಹುದಾಗಿದ್ದ ಈ ಸಣ್ಣ ಸಮಸ್ಯೆಯನ್ನು ಗೋಜಲುಗೊಳಿಸಲಾಗಿತ್ತು. ಬಡಪಾಯಿ ಶಿವುರ ಗೋಳು ಹೇಳತೀರದಾಗಿತ್ತು. ಆಗ ಅನಿವಾರ್ಯವಾಗಿ ಭಟ್ಟರು 30 ನವೆಂಬರ್ 2019ರಂದು ಬೆಂಗಳೂರಲ್ಲಿರುವ ಲೋಕಾಯುಕ್ತ ಕಚೇರಿಗೆ ಖುದ್ದು ಹೋಗಿ ದೂರು ದಾಖಲಿಸಿದರು. ಆಗಲೂ ತಹಶೀಲ್ದಾರ್ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡಿದರು. ಶಿವುರ ವಾಸ್ತವ್ಯ ಹೊನ್ನಾವರ ತಾಲೂಕಿನಲ್ಲಿಯೇ ಇದೆಯೆಂದು ದೃಢಪಡಿಸುವ ಯಾವ ದಾಖಲೆಯನ್ನೂ ಪರಿಗಣಿಸಲೇ ಇಲ್ಲ. ಫಲಾನುಭವಿ ಹೊನ್ನಾವರ ತಾಲೂಕಿ ಹೆರಂಗಡಿ ವ್ಯಾಪ್ತಿಯಲ್ಲಿಲ್ಲವೆಂದು ತಹಶೀಲ್ದಾರ್ ವರದಿ ತಯಾರಿಸಿದ್ದರು. ಇದನ್ನೆ ಡಿಸಿ ಸಾಹೇಬರು ಕಣ್ಣು ಮುಚ್ಚಿ ಲೋಕಾಯುಕ್ತಕ್ಕೆ ರವಾನಿಸಿಬಿಟ್ಟಿದ್ದರು!

ಆದರೆ ಲೋಕಾಯುಕ್ತದಲ್ಲಿದ್ದ ದೂರನ್ನು ಮುಗಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ತಹಶೀಲ್ದಾರ್ ಶಿವು ಹಳ್ಳೇರ ರದ್ದಾದ ಪೆನ್‌ಷನ್ ಪುನಃ ಪ್ರಾರಂಭಿಸಬೇಕಾಗಿ ಬಂತು. ಆದರೆ ಇಲ್ಲೂ ಪ್ರಮಾದವಾಗಿತ್ತು. 1 ಅಕ್ಟೋಬರ್ 2020ರಿಂದ ಶಿವುರಿಗೆ ಪಿಂಚಣಿ ಬಟವಡೆ ಮಾಡುವಂತೆ ತಹಶೀಲ್ದಾರ್ ಆದೇಶಿಸಿದ್ದರು. ನ್ಯಾಯ ಕ್ರಮದಂತೆ ಶಿವುರ ಸಾಮಾಜಿಕ ಭದ್ರತಾ ಪಿಂಚಣಿ ವಿನಾ ಕಾರಣ ಸ್ಥಗಿತಗೊಳಿಸಲಾಗಿದ್ದ 2018ರ ಆಗಸ್ಟ್ ತಿಂಗಳಿಂದ ಬಾಕಿಯಿದ್ದ ಮೊತ್ತ ಬರಬೇಕಿತ್ತು. ಕಂದಾಯ ಅಧಿಕಾರಿಗಳ ಈ ಅವಾಂತರವನ್ನು ಮತ್ತೆ ಭಟ್ಟರು ಲೋಕಾಯುಕ್ತರ ಗಮನಕ್ಕೆ ತಂದರು. ಆದರೆ ಲೋಕಾಯುಕ್ತದಿಂದ ಯಾವ ಕ್ರಮವೂ ಆಗಿಲ್ಲ. ಲೋಕಾಯುಕ್ತದ ವಿಫಲತೆ ಶಿವುರನ್ನು ದಿಕ್ಕೆಡಿಸಿಬಿಟ್ಟಿದೆ.

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ? ಹರ ಕೊಲ್ಲಲ್ ನರ ಕಾಯ್ವನೆ ಎಂಬಂತಾಗಿದೆಯೆಂದು ಜನರಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತಿತರ ಕಂದಾಯ ಅಧಿಕಾಗಳು ಗ್ರಾಮ ವಾಸ್ತವ್ಯ ಮಾಡಿ ಅರ್ಹರಿಗೆ ಸ್ಥಳದಲ್ಲೆ ವೃದ್ದಾಪ್ಯ ಮಂಜೂರಿ ಮಾಡುತ್ತಾರೆ. 60 ವರ್ಷ ಮೀರಿದ ಫಲಾನುಭವಿಗಳಿಗೆ ಪಿಂಚಣಿ ಮನೆ ಬಾಗಿಲಲ್ಲೆ ವಿತರಿಸಲಾಗುತ್ತದೆಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳುತ್ತಾರೆ. ವಿಪರ್ಯಾಸವೆಂದರೆ ಮಂಜೂರಿಯಾಗಿ ಬರುತ್ತಿರುವ ಪಿಂಚಣಿಯನ್ನೆ ಕಿತ್ತುಕೊಳ್ಳುವ ಕ್ರೌರ್ಯ ಇನ್ನೊಂದೆಡೆಯಾಗುತ್ತಿದೆ!


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...