Homeಕರ್ನಾಟಕಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ?

- Advertisement -
- Advertisement -

ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮದ ವಯೋವೃದ್ಧ ದಲಿತ ಶಿವು ಹಳ್ಳೇರ ತುತ್ತಿಗಾಧರವಾದ ವೃದ್ಧಾಪ್ಯ ವೇತನ ಅಧಿಕಾರಿಗಳ ಅಸಡ್ಡೆ, ಹೊಣೆಗೇಡಿತನದಿಂದ ಸರಿಯಾಗಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿಯಲೊಂದು ಗುಡಿಸಲೂ ಇಲ್ಲದ ದೇಖರೇಖೆ ನೋಡಿಕೊಳ್ಳಲು ಯಾರೂ ಇಲ್ಲದ ಅವಿವಾಹಿತ ಶಿವುಗೀಗ ಎಂಬತ್ತು ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲಿ ಅವರಿಗೆ ಕಿವಿಯೂ ಕೇಳಿಸುತ್ತಿಲ್ಲ! ಫೆಬ್ರುವರಿ 2006 ರಿಂದ ಶಿವು ವೃದ್ಧಾಪ್ಯ ಪಿಂಚಣಿ ಮೇಲೆ ಜೀವವಿಟ್ಟು ಜೀವನ ನಡೆಸುತ್ತಿದ್ದರು.

ಹೇಗೋ ದಿನ ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಗಸ್ಟ್ 2018ರಲ್ಲಿ ಹೊನ್ನಾವರದ ಅಂದಿನ ತಹಶೀಲ್ದಾರ್ ವಿವೇಕ್ ಶೆಣ್ವಿ ಅಸಾಯಕ ಶಿವು ಹಳ್ಳೇರ ವೃದ್ದಾಪ್ಯ ವೇತನ ರದ್ದುಗೊಳಿಸಿ ಬಿಟ್ಟರು! ಅದಕ್ಕವರು ನೀಡಿದ ಕಾರಣ ಶಿವು ಹೊನ್ನಾವರ ತಾಲ್ಲೂಕಿನಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಎಂಬುದಾಗಿತ್ತು. ಹೊನ್ನಾವರದ ಕಂದಾಯ ಅಧಿಕಾರಿಗಳು ಶಿವುರ ಅತಿ ಮುಖ್ಯ ದಾಖಲೆಯಾದ ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಬಿಪಿಎಲ್ ಪಡಿತರ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಅಥವಾ ಪಿಂಚಣಿ ಸಂದಾಯವಾಗುತ್ತಿದ್ದ ಅಂಚೆ ಇಲಾಖೆಯ ಪಾಸ್ ಬುಕ್‌ನಂಥ ಯಾವ ದಾಖಲೆಯನ್ನೂ ಪರಿಶೀಲಿಸದೆ ಎಡವಟ್ಟು ತೀರ್ಮಾನಕ್ಕೆ ಬಂದಿದ್ದರು! ತಹಶೀಲ್ದಾರರ ವಿವೇಚನಾರಹಿತ ಕ್ರಮವನ್ನು ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಎತ್ತಿ ಹಿಡಿದಿದ್ದು ಶಿವು ಹಳ್ಳಿರಗೆ ಅನ್ಯಾಯ ಮಾಡಿತ್ತು.

ಅಶಿಕ್ಷಿತ-ಅಮಾಯಕ ಶಿವು ಹಳ್ಳೇರ ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಿರುವಾಗ ಊರಿನ ಜಿ.ಎನ್.ಭಟ್ಟರಿಗೆ ವಿಷಯ ತಿಳಿಯುತ್ತದೆ. ಅವರು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ರಿಗೆ ಶಿವು ಹಳ್ಳೇರಗಾಗಿರುವ ತೊಂದರೆ ವಿವರಿಸಿ 2018ರ ಆಗಸ್ಟ್‌ನಿಂದ ಪಿಂಚಣಿ ಬಟವಡೆ ಮಾಡುವಂತೆ ಮನವಿ ಮಾಡುತ್ತಾರೆ. ಸರಕಾರಿ ಅಧಿಕಾರಿಗಳೊಂದಿಗೆ ವ್ಯವಹರಿಸುವ ಶಕ್ತಿ ವಯೋವೃದ್ಧ-ಅಶಿಕ್ಷಿತ ಶಿವುಗೆ ಇಲ್ಲದಿರುವುದರಿಂದ ಮತ್ತು ಅವರಿಗೆ ಕಿವಿ ಕೇಳಿಸದಿರುವುದರಿಂದ ಭಟ್ಟರೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೆಂಟು ತಿಂಗಳು ಕಳೆದರೂ ತಹಶೀಲ್ದಾರ್ ಸಾಹೇಬರಿಂದ ಕನಿಷ್ಟ ಹಿಂಬರಹವೂ ಬರಲಿಲ್ಲ. ಜಿಲ್ಲಾಧಿಕಾರಿಗಳ ವಾಟ್ಸಪ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ!

ಕಂದಾಯ ಅಧಿಕಾರಿಗಳು ಆಗಿರುವ ಅಚಾತುರ್ಯವನ್ನು ಅರಿತು ಕ್ಷಣಾರ್ಧದಲ್ಲಿ ಪರಿಹರಿಸಬಹುದಾಗಿದ್ದ ಈ ಸಣ್ಣ ಸಮಸ್ಯೆಯನ್ನು ಗೋಜಲುಗೊಳಿಸಲಾಗಿತ್ತು. ಬಡಪಾಯಿ ಶಿವುರ ಗೋಳು ಹೇಳತೀರದಾಗಿತ್ತು. ಆಗ ಅನಿವಾರ್ಯವಾಗಿ ಭಟ್ಟರು 30 ನವೆಂಬರ್ 2019ರಂದು ಬೆಂಗಳೂರಲ್ಲಿರುವ ಲೋಕಾಯುಕ್ತ ಕಚೇರಿಗೆ ಖುದ್ದು ಹೋಗಿ ದೂರು ದಾಖಲಿಸಿದರು. ಆಗಲೂ ತಹಶೀಲ್ದಾರ್ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡಿದರು. ಶಿವುರ ವಾಸ್ತವ್ಯ ಹೊನ್ನಾವರ ತಾಲೂಕಿನಲ್ಲಿಯೇ ಇದೆಯೆಂದು ದೃಢಪಡಿಸುವ ಯಾವ ದಾಖಲೆಯನ್ನೂ ಪರಿಗಣಿಸಲೇ ಇಲ್ಲ. ಫಲಾನುಭವಿ ಹೊನ್ನಾವರ ತಾಲೂಕಿ ಹೆರಂಗಡಿ ವ್ಯಾಪ್ತಿಯಲ್ಲಿಲ್ಲವೆಂದು ತಹಶೀಲ್ದಾರ್ ವರದಿ ತಯಾರಿಸಿದ್ದರು. ಇದನ್ನೆ ಡಿಸಿ ಸಾಹೇಬರು ಕಣ್ಣು ಮುಚ್ಚಿ ಲೋಕಾಯುಕ್ತಕ್ಕೆ ರವಾನಿಸಿಬಿಟ್ಟಿದ್ದರು!

ಆದರೆ ಲೋಕಾಯುಕ್ತದಲ್ಲಿದ್ದ ದೂರನ್ನು ಮುಗಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ತಹಶೀಲ್ದಾರ್ ಶಿವು ಹಳ್ಳೇರ ರದ್ದಾದ ಪೆನ್‌ಷನ್ ಪುನಃ ಪ್ರಾರಂಭಿಸಬೇಕಾಗಿ ಬಂತು. ಆದರೆ ಇಲ್ಲೂ ಪ್ರಮಾದವಾಗಿತ್ತು. 1 ಅಕ್ಟೋಬರ್ 2020ರಿಂದ ಶಿವುರಿಗೆ ಪಿಂಚಣಿ ಬಟವಡೆ ಮಾಡುವಂತೆ ತಹಶೀಲ್ದಾರ್ ಆದೇಶಿಸಿದ್ದರು. ನ್ಯಾಯ ಕ್ರಮದಂತೆ ಶಿವುರ ಸಾಮಾಜಿಕ ಭದ್ರತಾ ಪಿಂಚಣಿ ವಿನಾ ಕಾರಣ ಸ್ಥಗಿತಗೊಳಿಸಲಾಗಿದ್ದ 2018ರ ಆಗಸ್ಟ್ ತಿಂಗಳಿಂದ ಬಾಕಿಯಿದ್ದ ಮೊತ್ತ ಬರಬೇಕಿತ್ತು. ಕಂದಾಯ ಅಧಿಕಾರಿಗಳ ಈ ಅವಾಂತರವನ್ನು ಮತ್ತೆ ಭಟ್ಟರು ಲೋಕಾಯುಕ್ತರ ಗಮನಕ್ಕೆ ತಂದರು. ಆದರೆ ಲೋಕಾಯುಕ್ತದಿಂದ ಯಾವ ಕ್ರಮವೂ ಆಗಿಲ್ಲ. ಲೋಕಾಯುಕ್ತದ ವಿಫಲತೆ ಶಿವುರನ್ನು ದಿಕ್ಕೆಡಿಸಿಬಿಟ್ಟಿದೆ.

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ? ಹರ ಕೊಲ್ಲಲ್ ನರ ಕಾಯ್ವನೆ ಎಂಬಂತಾಗಿದೆಯೆಂದು ಜನರಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತಿತರ ಕಂದಾಯ ಅಧಿಕಾಗಳು ಗ್ರಾಮ ವಾಸ್ತವ್ಯ ಮಾಡಿ ಅರ್ಹರಿಗೆ ಸ್ಥಳದಲ್ಲೆ ವೃದ್ದಾಪ್ಯ ಮಂಜೂರಿ ಮಾಡುತ್ತಾರೆ. 60 ವರ್ಷ ಮೀರಿದ ಫಲಾನುಭವಿಗಳಿಗೆ ಪಿಂಚಣಿ ಮನೆ ಬಾಗಿಲಲ್ಲೆ ವಿತರಿಸಲಾಗುತ್ತದೆಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳುತ್ತಾರೆ. ವಿಪರ್ಯಾಸವೆಂದರೆ ಮಂಜೂರಿಯಾಗಿ ಬರುತ್ತಿರುವ ಪಿಂಚಣಿಯನ್ನೆ ಕಿತ್ತುಕೊಳ್ಳುವ ಕ್ರೌರ್ಯ ಇನ್ನೊಂದೆಡೆಯಾಗುತ್ತಿದೆ!


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...