Homeಕರ್ನಾಟಕಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ?

- Advertisement -
- Advertisement -

ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮದ ವಯೋವೃದ್ಧ ದಲಿತ ಶಿವು ಹಳ್ಳೇರ ತುತ್ತಿಗಾಧರವಾದ ವೃದ್ಧಾಪ್ಯ ವೇತನ ಅಧಿಕಾರಿಗಳ ಅಸಡ್ಡೆ, ಹೊಣೆಗೇಡಿತನದಿಂದ ಸರಿಯಾಗಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿಯಲೊಂದು ಗುಡಿಸಲೂ ಇಲ್ಲದ ದೇಖರೇಖೆ ನೋಡಿಕೊಳ್ಳಲು ಯಾರೂ ಇಲ್ಲದ ಅವಿವಾಹಿತ ಶಿವುಗೀಗ ಎಂಬತ್ತು ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲಿ ಅವರಿಗೆ ಕಿವಿಯೂ ಕೇಳಿಸುತ್ತಿಲ್ಲ! ಫೆಬ್ರುವರಿ 2006 ರಿಂದ ಶಿವು ವೃದ್ಧಾಪ್ಯ ಪಿಂಚಣಿ ಮೇಲೆ ಜೀವವಿಟ್ಟು ಜೀವನ ನಡೆಸುತ್ತಿದ್ದರು.

ಹೇಗೋ ದಿನ ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಗಸ್ಟ್ 2018ರಲ್ಲಿ ಹೊನ್ನಾವರದ ಅಂದಿನ ತಹಶೀಲ್ದಾರ್ ವಿವೇಕ್ ಶೆಣ್ವಿ ಅಸಾಯಕ ಶಿವು ಹಳ್ಳೇರ ವೃದ್ದಾಪ್ಯ ವೇತನ ರದ್ದುಗೊಳಿಸಿ ಬಿಟ್ಟರು! ಅದಕ್ಕವರು ನೀಡಿದ ಕಾರಣ ಶಿವು ಹೊನ್ನಾವರ ತಾಲ್ಲೂಕಿನಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಎಂಬುದಾಗಿತ್ತು. ಹೊನ್ನಾವರದ ಕಂದಾಯ ಅಧಿಕಾರಿಗಳು ಶಿವುರ ಅತಿ ಮುಖ್ಯ ದಾಖಲೆಯಾದ ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಬಿಪಿಎಲ್ ಪಡಿತರ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಅಥವಾ ಪಿಂಚಣಿ ಸಂದಾಯವಾಗುತ್ತಿದ್ದ ಅಂಚೆ ಇಲಾಖೆಯ ಪಾಸ್ ಬುಕ್‌ನಂಥ ಯಾವ ದಾಖಲೆಯನ್ನೂ ಪರಿಶೀಲಿಸದೆ ಎಡವಟ್ಟು ತೀರ್ಮಾನಕ್ಕೆ ಬಂದಿದ್ದರು! ತಹಶೀಲ್ದಾರರ ವಿವೇಚನಾರಹಿತ ಕ್ರಮವನ್ನು ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಎತ್ತಿ ಹಿಡಿದಿದ್ದು ಶಿವು ಹಳ್ಳಿರಗೆ ಅನ್ಯಾಯ ಮಾಡಿತ್ತು.

ಅಶಿಕ್ಷಿತ-ಅಮಾಯಕ ಶಿವು ಹಳ್ಳೇರ ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಿರುವಾಗ ಊರಿನ ಜಿ.ಎನ್.ಭಟ್ಟರಿಗೆ ವಿಷಯ ತಿಳಿಯುತ್ತದೆ. ಅವರು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ರಿಗೆ ಶಿವು ಹಳ್ಳೇರಗಾಗಿರುವ ತೊಂದರೆ ವಿವರಿಸಿ 2018ರ ಆಗಸ್ಟ್‌ನಿಂದ ಪಿಂಚಣಿ ಬಟವಡೆ ಮಾಡುವಂತೆ ಮನವಿ ಮಾಡುತ್ತಾರೆ. ಸರಕಾರಿ ಅಧಿಕಾರಿಗಳೊಂದಿಗೆ ವ್ಯವಹರಿಸುವ ಶಕ್ತಿ ವಯೋವೃದ್ಧ-ಅಶಿಕ್ಷಿತ ಶಿವುಗೆ ಇಲ್ಲದಿರುವುದರಿಂದ ಮತ್ತು ಅವರಿಗೆ ಕಿವಿ ಕೇಳಿಸದಿರುವುದರಿಂದ ಭಟ್ಟರೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೆಂಟು ತಿಂಗಳು ಕಳೆದರೂ ತಹಶೀಲ್ದಾರ್ ಸಾಹೇಬರಿಂದ ಕನಿಷ್ಟ ಹಿಂಬರಹವೂ ಬರಲಿಲ್ಲ. ಜಿಲ್ಲಾಧಿಕಾರಿಗಳ ವಾಟ್ಸಪ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ!

ಕಂದಾಯ ಅಧಿಕಾರಿಗಳು ಆಗಿರುವ ಅಚಾತುರ್ಯವನ್ನು ಅರಿತು ಕ್ಷಣಾರ್ಧದಲ್ಲಿ ಪರಿಹರಿಸಬಹುದಾಗಿದ್ದ ಈ ಸಣ್ಣ ಸಮಸ್ಯೆಯನ್ನು ಗೋಜಲುಗೊಳಿಸಲಾಗಿತ್ತು. ಬಡಪಾಯಿ ಶಿವುರ ಗೋಳು ಹೇಳತೀರದಾಗಿತ್ತು. ಆಗ ಅನಿವಾರ್ಯವಾಗಿ ಭಟ್ಟರು 30 ನವೆಂಬರ್ 2019ರಂದು ಬೆಂಗಳೂರಲ್ಲಿರುವ ಲೋಕಾಯುಕ್ತ ಕಚೇರಿಗೆ ಖುದ್ದು ಹೋಗಿ ದೂರು ದಾಖಲಿಸಿದರು. ಆಗಲೂ ತಹಶೀಲ್ದಾರ್ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡಿದರು. ಶಿವುರ ವಾಸ್ತವ್ಯ ಹೊನ್ನಾವರ ತಾಲೂಕಿನಲ್ಲಿಯೇ ಇದೆಯೆಂದು ದೃಢಪಡಿಸುವ ಯಾವ ದಾಖಲೆಯನ್ನೂ ಪರಿಗಣಿಸಲೇ ಇಲ್ಲ. ಫಲಾನುಭವಿ ಹೊನ್ನಾವರ ತಾಲೂಕಿ ಹೆರಂಗಡಿ ವ್ಯಾಪ್ತಿಯಲ್ಲಿಲ್ಲವೆಂದು ತಹಶೀಲ್ದಾರ್ ವರದಿ ತಯಾರಿಸಿದ್ದರು. ಇದನ್ನೆ ಡಿಸಿ ಸಾಹೇಬರು ಕಣ್ಣು ಮುಚ್ಚಿ ಲೋಕಾಯುಕ್ತಕ್ಕೆ ರವಾನಿಸಿಬಿಟ್ಟಿದ್ದರು!

ಆದರೆ ಲೋಕಾಯುಕ್ತದಲ್ಲಿದ್ದ ದೂರನ್ನು ಮುಗಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ತಹಶೀಲ್ದಾರ್ ಶಿವು ಹಳ್ಳೇರ ರದ್ದಾದ ಪೆನ್‌ಷನ್ ಪುನಃ ಪ್ರಾರಂಭಿಸಬೇಕಾಗಿ ಬಂತು. ಆದರೆ ಇಲ್ಲೂ ಪ್ರಮಾದವಾಗಿತ್ತು. 1 ಅಕ್ಟೋಬರ್ 2020ರಿಂದ ಶಿವುರಿಗೆ ಪಿಂಚಣಿ ಬಟವಡೆ ಮಾಡುವಂತೆ ತಹಶೀಲ್ದಾರ್ ಆದೇಶಿಸಿದ್ದರು. ನ್ಯಾಯ ಕ್ರಮದಂತೆ ಶಿವುರ ಸಾಮಾಜಿಕ ಭದ್ರತಾ ಪಿಂಚಣಿ ವಿನಾ ಕಾರಣ ಸ್ಥಗಿತಗೊಳಿಸಲಾಗಿದ್ದ 2018ರ ಆಗಸ್ಟ್ ತಿಂಗಳಿಂದ ಬಾಕಿಯಿದ್ದ ಮೊತ್ತ ಬರಬೇಕಿತ್ತು. ಕಂದಾಯ ಅಧಿಕಾರಿಗಳ ಈ ಅವಾಂತರವನ್ನು ಮತ್ತೆ ಭಟ್ಟರು ಲೋಕಾಯುಕ್ತರ ಗಮನಕ್ಕೆ ತಂದರು. ಆದರೆ ಲೋಕಾಯುಕ್ತದಿಂದ ಯಾವ ಕ್ರಮವೂ ಆಗಿಲ್ಲ. ಲೋಕಾಯುಕ್ತದ ವಿಫಲತೆ ಶಿವುರನ್ನು ದಿಕ್ಕೆಡಿಸಿಬಿಟ್ಟಿದೆ.

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ? ಹರ ಕೊಲ್ಲಲ್ ನರ ಕಾಯ್ವನೆ ಎಂಬಂತಾಗಿದೆಯೆಂದು ಜನರಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತಿತರ ಕಂದಾಯ ಅಧಿಕಾಗಳು ಗ್ರಾಮ ವಾಸ್ತವ್ಯ ಮಾಡಿ ಅರ್ಹರಿಗೆ ಸ್ಥಳದಲ್ಲೆ ವೃದ್ದಾಪ್ಯ ಮಂಜೂರಿ ಮಾಡುತ್ತಾರೆ. 60 ವರ್ಷ ಮೀರಿದ ಫಲಾನುಭವಿಗಳಿಗೆ ಪಿಂಚಣಿ ಮನೆ ಬಾಗಿಲಲ್ಲೆ ವಿತರಿಸಲಾಗುತ್ತದೆಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳುತ್ತಾರೆ. ವಿಪರ್ಯಾಸವೆಂದರೆ ಮಂಜೂರಿಯಾಗಿ ಬರುತ್ತಿರುವ ಪಿಂಚಣಿಯನ್ನೆ ಕಿತ್ತುಕೊಳ್ಳುವ ಕ್ರೌರ್ಯ ಇನ್ನೊಂದೆಡೆಯಾಗುತ್ತಿದೆ!


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...